ವರ್ತೂರು ಕೆರೆಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ: ಸ್ಥಳೀಯರಿಗೆ ಆತಂಕ
ಬೆಂಗಳೂರು, ಫೆಬ್ರವರಿ 18: ನಗರದ ವರ್ತೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಿಗೆ ಆತಂಕ ಶುರುವಾಗಿದೆ. ಪ್ರತಿ ವರ್ಷವೂ ಬೆಳ್ಳಂದೂರು ಮತ್ತು ವರ್ತೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಕೆರೆಯ ಸ್ವಚ್ಛತಾ ಕಾರ್ಯವೂ ನಡೆದಿಲ್ಲ.
ಸುತ್ತಮುತ್ತಲಿರುವ ಕಾರ್ಖಾನೆಗಳಿಂದ ತ್ಯಾಜ್ಯಗಳು ನೀರಿಗೆ ಹರಿದುಬರುತ್ತಿರುವುದರಿಂದ ಬೆಂಕಿ ಹತ್ತಿಕೊಳ್ಳುತ್ತಿದೆ. ಹೆಚ್ಚಿನ ಬಿಸಿಲಿನಿಂದಾಗಿಯೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯರೆಲ್ಲರೂ ಸ್ಥಳದಲ್ಲಿ ಜಮಾಯಿಸಿದ್ದಾರೆ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಇದುವರೆಗೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ.

ಪ್ರತಿವರ್ಷ ಫೆಬ್ರವರಿಯಿಂದ ಏಪ್ರಿಲ್ ಅತಿ ಹೆಚ್ಚು ಬಿಸಿಲಿರುವ ಸಮಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಕೆರೆ ಸುತ್ತಮುತ್ತಲು ಹತ್ತಾರು ಅಪಾರ್ಟ್ಮೆಂಟ್ಗಳಿದೆ. ಇದೀಗ ಹೊಗೆ ಇಡೀ ಕೆರೆಯ ಸುತ್ತಲೂ ಆವರಿಸಿಕೊಂಡಿದೆ. ವಾಹನ ಸವಾರರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ವರ್ತೂರು ಹಾಗೂ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಮಾತ್ರವಲ್ಲದೆ ಯಾವಾಗಲೂ ಸಾಮಾನ್ಯವಾಗಿ ನೊರೆ ಕಾಣಿಸಿಕೊಳ್ಳುತ್ತದೆ.
2019ರ ಜನವರಿ ಜನವರಿಯಲ್ಲಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸುಮಾರು 10 ಎಕರೆ ಪ್ರದೇಶದವನ್ನು ಸುಟ್ಟು ಭಸ್ಮ ಮಾಡಿತ್ತು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion












Click it and Unblock the Notifications