ವರ್ತೂರು ಸಂತೋಷ್ಗೆ 14 ದಿನಗಳ ನ್ಯಾಯಂಗ ಬಂಧನ: ಆರೋಪ ಸಾಬೀತಾದ್ರೆ ಶಿಕ್ಷೆ ಏನು?
ಕನ್ನಡ ಬಿಗ್ ಬಾಸ್ 10ನೇ ಆವೃತ್ತಿಯಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಹುಲಿ ಉಗುರು ಹೊಂದಿದ್ದ ಆರೋಪದಡಿ ಬೆಂಗಳೂರು ದಕ್ಷಿಣ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ, ಸದ್ಯ ಪೊಲೀಸರ ವಿಚಾರಣೆ ನಡೆಯುತ್ತಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು.
ನವೆಂಬರ್ 6ರವರೆಗೆ ವರ್ತೂರು ಸಂತೋಷ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, 2ನೇ ಎಸಿಜೆಎಂ ನ್ಯಾಯಾಧೀಶರು ಆದೇಶಿಸಿದ್ದಾರೆ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಕೊರಳಲ್ಲಿದ್ದ ಚಿನ್ನದ ಸರದಲ್ಲಿ ಹುಲಿಯುಗುರಿನ ಪೆಂಡೆಂಟ್ ನೋಡಿದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ತಾವರೆಕೆರೆ ಬಳಿ ಇದ್ದ ಬಿಗ್ ಬಾಸ್ ಮನೆಯಿಂದ ಹೊರ ತಂದು ವಶಕ್ಕೆ ಪಡೆದುಕೊಂಡರು.
ಹಳ್ಳಿಕಾರ್ ತಳಿಯ ಹಸುಗಳ ಬಗ್ಗೆ ಮಾತನಾಡುವ ಮೂಲಕ ವರ್ತೂರು ಸಂತೋಷ್ ಸಾಮಾಜಿಕ ಮಾಧ್ಯಮಗಳಲ್ಲಿ ಗಮನ ಸೆಳೆದಿದ್ದರು. ಹಲವು ಯೂಟ್ಯೂಬ್ ವಾಹಿನಿಗಳು ವರ್ತೂರು ಸಂತೋಷ್ ಅವರ ಜೀವನ, ಮನೆ, ಕೃಷಿ ಬದುಕನ್ನು ತೋರಿಸುವ ಮೂಲಕ ಅವರು ತಕ್ಕ ಮಟ್ಟಿಗೆ ಹೆಸರು ಮಾಡಿದ್ದರು.
ಬೆಂಗಳೂರಿನ ಹೊರವಲಯದಲ್ಲಿ ಹಳ್ಳಿಕಾರ್ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಅವರು ಗಮನ ಸೆಳೆದಿದ್ದರು. ಹಳ್ಳಿಕಾರ್ ಒಡೆಯ ಎಂದೇ ಗುರುತಿಸಿಕೊಂಡಿದ್ದ ಅವರು, ಹಸು, ಎತ್ತುಗಳ ಮೇಲೆ ಕಾಳಜಿ ಮತ್ತು ಪ್ರೀತಿಯನ್ನು ಹೊಂದಿದ್ದರು.
ವರ್ತೂರು ಸಂತೋಷ್ ಹೇಳಿದ್ದೇನು?
ವಿಚಾರಣೆ ವೇಳೆ ವರ್ತೂರು ಸಂತೋಷ್ ಹಲವು ಪ್ರಮುಖ ಮಾಹಿತಿ ನೀಡಿದ್ದಾರೆ. ಮೂರು ವರ್ಷಗಳ ಹಿಂದೆ ಹುಲಿ ಉಗುರು ಖರೀದಿಸಿದ್ದಾಗಿ ಹೇಳಿದ್ದು, ಇದು ಅಸಲಿ ಹುಲಿ ಉಗುರು ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಸಂತೋಷ್ ಅವರಿಗೆ ಹುಲಿ ಉಗುರು ಮಾರಿರುವರನ್ನು ಕೂಡು ಅರಣ್ಯಾಧಿಕಾರಿಗಳು ಹುಡುಕಲು ಮುಂದಾಗಿದ್ದಾರೆ.
ಆರೋಪ ಸಾಬೀತಾದ್ರೆ ಏನು ಶಿಕ್ಷೆ?
ಹುಲಿ ಉಗುರು ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ಸಂತೋಷ್ರನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅವರ ಮೇಲಿನ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಸಿಗುವ ಸಾಧ್ಯತೆ ಇದೆ.
ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ವರ್ತೂರು ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ಕೊರಳಿನಲ್ಲಿ ಇದ್ದ ಸರದಲ್ಲಿನ ಹುಲಿ ಉಗುರುಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಪ್ರಯೋಗಾಲಯದಲ್ಲಿ ಅದು ಅಸಲಿಯೋ ಅಥವಾ ನಕಲಿಯೋ ಎಂದು ತಿಳಿಯಲಿದೆ.
ಒಂದು ವೇಳೆ ಅವು ನಕಲಿಯಾದರೆ ವರ್ತೂರು ಸಂತೋಷ್ ಬಚಾವಾಗಲಿದ್ದಾರೆ ಆದರೆ, ಅವರ ಬಳಿ ಇದ್ದ ಹುಲಿ ಉಗುರು ಅಸಲಿಯಾದರೆ ಮಾತ್ರ ಸಂಕಷ್ಟ ಹೆಚ್ಚಾಗಲಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಆರೋಪ ಸಾಬೀತಾದರೆ 3 ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. ₹10,000 ರಿಂದ ₹25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
Bengaluru: ಬೆಂಗಳೂರಲ್ಲಿ ಟೀ ಶಾಪ್ನಲ್ಲಿ 10 ಭಾಷೆ ಮಾತನಾಡುವವರು ಸಿಗ್ತಾರೆ: ನಾರ್ಥಿ ಯುವತಿ ವೈರಲ್ ಪೋಸ್ಟ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications