ಸಿಎಂ ಗೃಹ ಕಚೇರಿಯಲ್ಲಿ ಅತ್ಯಾಧುನಿಕ ಸ್ಟುಡಿಯೋ 'ವರುಣಾ' ಉದ್ಘಾಟನೆ
ಎಲ್ಲಾ ಮಾಧ್ಯಮಗಳ ಜತೆ ಮುಖ್ಯಮಂತ್ರಿಗೆ ಸಂವಾದ ಕಲ್ಪಿಸಲು ಅನುಕೂಲವಾಗುವಂತೆ ಈ ಸ್ಟುಡಿಯೋ ವಿನ್ಯಾಸ ಮಾಡಲಾಗಿದೆ. ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಉದ್ದೇಶದಿಂದ ಇದನ್ನು ಅಸ್ತಿತ್ವಕ್ಕೆ ತರಲಾಗಿದೆ.
ಎಲ್ಲಾ ಮಾಧ್ಯಮಗಳ ಜತೆ ಮುಖ್ಯಮಂತ್ರಿಗೆ ಸಂವಾದ ಕಲ್ಪಿಸಲು ಅನುಕೂಲವಾಗುವಂತೆ ಈ ಸ್ಟುಡಿಯೋ ವಿನ್ಯಾಸ ಮಾಡಲಾಗಿದೆ. ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಉದ್ದೇಶದಿಂದ ಇದನ್ನು ಅಸ್ತಿತ್ವಕ್ಕೆ ತರಲಾಗಿದೆ.
ಸಿಎಂ ಗೃಹ ಕಚೇರಿಯಲ್ಲಿ ಅತ್ಯಾಧುನಿಕ ಸ್ಟುಡಿಯೋ 'ವರುಣಾ' ಉದ್ಘಾಟನೆ
ಬೆಂಗಳೂರು, ಮೇ 11: ಗೃಹ ಕಚೇರಿ 'ಕೃಷ್ಣ' ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅತ್ಯಾಧುನಿಕ ಸ್ಟುಡಿಯೋ 'ವರುಣಾ'ದ ಉದ್ಘಾಟನೆ ನಡೆಯಿತು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಟುಡಿಯೋ ಉದ್ಘಾಟಿಸಿದರು.

ಎಲ್ಲಾ ಮಾಧ್ಯಮಗಳ ಜತೆ ರಾಜ್ಯದ ಮುಖ್ಯಮಂತ್ರಿಗೆ ಸಂವಾದ ಕಲ್ಪಿಸಲು ಅನುಕೂಲವಾಗುವಂತೆ ಈ ಸ್ಟುಡಿಯೋ ವಿನ್ಯಾಸ ಮಾಡಲಾಗಿದೆ. ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಉದ್ದೇಶದಿಂದ ಈ 'ವರುಣಾ' ಸ್ಟುಡಿಯೋ ಅಸ್ತಿತ್ವಕ್ಕೆ ತರಲಾಗಿದೆ.
ಸದ್ಯ ಇರುವ ಮುಖ್ಯಮಂತ್ರಿಗಳ ವಸತಿ ಮತ್ತು ಗೃಹ ಕಚೇರಿಗಳಲ್ಲಿ ಸ್ಥಳಾವಕಾಶದ ಕೊರತೆ ಇದೆ. ಈ ಕಾರಣಕ್ಕೆ ಗೃಹ ಕಚೇರಿ ಕೃಷ್ಣಾ ಸಮೀಪದಲ್ಲಿ ಸುಸಜ್ಜಿತ ಸ್ಟುಡಿಯೋ ನಿರ್ಮಿಸಲಾಗಿದೆ. ಎಲ್ಲಾ ಮಾಧ್ಯಮಗಳ ಅವಶ್ಯಕತೆಗಳನ್ನು ಗಣನೆಗೆ ತೆಗೆದುಕೊಂಡು ಅತ್ಯಾಧುನಿಕ ತಂತ್ರಜ್ಞಾನದ ಜತೆ ಈ ಸ್ಟುಡಿಯೋ ನಿರ್ಮಿಸಲಾಗಿದೆ.

ಈ ಸ್ಟುಡಿಯೋದಲ್ಲಿ ಮುಖ್ಯಮಂತ್ರಿಗಳನ್ನು ಸಂದರ್ಶಿಸಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ, ಬೆಳಕಿನ ವ್ಯವಸ್ಥೆ, ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದ ಹಿನ್ನೆಲೆ ಪರದೆ, ಟೆಲಿಪ್ರಾಂಪ್ಟರ್, ರೆಕಾರ್ಡಿಂಗ್ ಸಲಕರಣೆಗಳು, ಕಂಪ್ಯೂಟರ್ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಮುಖ್ಯಮಂತ್ರಿಗಳು ಕಾಲ ಕಾಲಕ್ಕೆ ನೀಡುವ ಸಂದೇಶಗಳು, ಹೇಳಿಕೆಗಳ ರೆಕಾರ್ಡಿಂಗ್ ಕೂಡಾ ಈ ಸ್ಟುಡಿಯೋದಲ್ಲಿ ನಡೆಸಲಾಗುತ್ತದೆ. ಜತೆಗೆ ಎಲೆಕ್ಟ್ರಾನಿಕ್ ಮಾಧ್ಯಮಗಳ ವರದಿಗಾರರು ತಮ್ಮ ಕ್ಯಾಮೆರಾಗಳ ಜತೆ ನೇರವಾಗಿ ಬಂದು ಈ ಸ್ಟುಡಿಯೋದಲ್ಲಿ ಸಂದರ್ಶನಗಳನ್ನೂ ನಡೆಸಬಹುದು.
-
Karnataka: ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications