ವಶಿಷ್ಠ ಕ್ರೆಡಿಟ್ ಕೋ ಆಪರೇಟೀವ್ ಬ್ಯಾಂಕ್ನಿಂದ 430 ಕೋಟಿ ರೂ. ವಂಚನೆ!
ಬೆಂಗಳೂರು ಜೂ. 28: ಹೆಚ್ಚಿನ ಬಡ್ಡಿ ಆಸೆಗೆ ಬಿದ್ದು ಖಾಸಗಿ ಸಹಕಾರಿ ಸೊಸೈಟಿಗಳಲ್ಲಿ ಹೂಡಿಕೆ ಮಾಡುವ ಮುನ್ನ ನೂರು ಸಲ ಆಲೋಚಿಸಿ! ಹೆಚ್ಚಿನ ಬಡ್ಡಿ ಆಸೆಗೆ ಬಿದ್ದು ಇಡುವ ಠೇವಣಿ ಗಂಟು ಕಳೆದು ಹೋದೀತು. ರಾಘವೇಂದ್ರ ಸಹಕಾರಿ ಬ್ಯಾಂಕಿನ ಅಕ್ರಮ ಮಾಸುವ ಮುನ್ನವೇ ವಶಿಷ್ಠ ಸೌಹಾರ್ದ ಸಹಕಾರಿ ಸಂಘ ಸುಮಾರು 450 ಕೋಟಿ ರೂ. ಮೋಸ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ವಶಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯ ವಿರುದ್ಧ ಹಣ ಕಳೆದುಕೊಂಡವರು ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಸಹಕಾರಿ ಬ್ಯಾಂಕ್ ನ ಪ್ರಮುಖ ಆರೋಪಿಗಳಾದ ವೆಂಕಟನಾರಾಯಣ ಮತ್ತು ಕೃಷ್ಣ ಪ್ರಸಾದ್ ಪರಾರಿಯಾಗಿದ್ದಾರೆ. ವಶಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಮಾಡಿರುವ ಎಡವಟ್ಟಿನಿಂದ ಸಾವಿರಾರು ಜನರು ಬೀದಿಗೆ ಬಿದ್ದಿದ್ದಾರೆ.
ವಶಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆ ವಾರ್ಷಿಕ ಹೆಚ್ಚು ಬಡ್ಡಿ ಕೊಡುವ ಅಮಿಷ ತೋರಿತ್ತು. ನಾಲ್ಕು ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ಈ ಸಹಕಾರ ಸಂಘವನ್ನು ನಂಬಿ ಸಾವಿರಾರು ಮಂದಿ ಹೂಡಿಕೆ ಮಾಡಿದ್ದರು. ಸುಮಾರು 450 ಕೋಟಿ ರೂ. ನಿಶ್ಚಿತ ಠೇವಣಿ ಇಟ್ಟಿದ್ದ ನೂರಾರು ಮಂದಿ ಠೇವಣಿ ಅವಧಿ ಮುಗಿದಿತ್ತು. ಬಡ್ಡಿ ಸಮೇತ ವಾಪಸು ನೀಡುವಂತೆ ಬ್ಯಾಂಕ್ ವತಿಯಿಂದ ನೀಡಿರಲಿಲ್ಲ. ಕೇಳಿದಾಗ, ಕೊರೊನಾ ಬಂದಿದ್ದು ಸಾಲಗಾರರು ಯಾರೂ ಪಾವತಿ ಮಾಡುತ್ತಿಲ್ಲ ಎಂದು ಹೇಳಿದ್ದರು. ಈ ವಿಚಾರವಾಗಿ ಬಸವನುಗುಡಿ ಶಾಸಕ ರವಿ ಸುಬ್ರಮಣ್ಯ ಕೂಡ ಮಧ್ಯ ಪ್ರವೇಶಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಕಾಲವಕಾಶ ನೀಡುವಂತೆ ಕೋರಿದ್ದಾರೆ. ಅದರಂತೆ ಕೆಲ ತಿಂಗಳು ಕಾಲಾವಕಾಶ ನೀಡಿದ್ದಾರೆ. ಹೀಗೆ ಕೆಲವು ತಿಂಗಳು ಕಳೆದರೂ ಹಣ ಪಾವತಿ ಮಾಡಿರಲಿಲ್ಲ. ಸಂಘದ ಮುಖ್ಯಸ್ಥರಾದ ವೆಂಕಟನಾರಾಯಣ ಮತ್ತು ಕೃಷ್ಣ ಪ್ರಸಾದ್ ಪರಾರಿಯಾಗಿದ್ದಾರೆ.

Recommended Video
ಕೃಷ್ಣ ಪ್ರಸಾದ್ ಮತ್ತು ವೆಂಕಟನಾರಾಯಣ ಸಾರ್ವಜನಿಕರ ಹಣವನ್ನು ಬೇರಡೆ ಹೂಡಿಕೆ ಮಾಡಿ ಮೋಸ ಮಾಡಿದ್ದಾರೆ. ವಂಚನೆ ಮಾಡುವ ಉದ್ದೇಶ ಇಟ್ಟುಕೊಂಡೇ ಹೆಚ್ಚಿನ ಬಡ್ಡಿ ಅಮಿಷೆ ತೋರಿಸಿದ್ದಾರೆ. ಈ ಕುರಿತು ಶಾಸಕರ ಗಮನಕ್ಕು ತಂದರೂ ಏನೂ ಪ್ರಯೋಜನ ಆಗಲಿಲ್ಲ. ಮತ್ತೆ ಸ್ಥಳೀಯ ಶಾಸಕರ ಗಮನಕ್ಕೆ ತಂದಾಗ ಪೊಲೀಸ್ ಠಾಣೆಗೆ ದೂರು ನೀಡಲು ಹೇಳಿದರು. ಹೀಗಾಗಿ ದೂರು ನೀಡಿದ್ದೇವೆ ಎಂದು ಹಣ ಕಳೆದುಕೊಂಡಿರುವ ಗ್ರಾಹಕರು ಆರೋಪಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications