ವಾಸುದೇವ ಅಡಿಗಾಸ್ ನಲ್ಲಿ 1 ರೂ. ದರ ಹೆಚ್ಚಳ
ಬೆಂಗಳೂರು, ನ. 14 : ಪ್ರಸಿದ್ಧ ವಾಸುದೇವ ಅಡಿಗಾಸ್ ತನ್ನೆಲ್ಲಾ ಹೋಟೆಲ್ ಗಳಲ್ಲಿ ಆಹಾರ ಪದಾರ್ಥಗಳ ದರವನ್ನು ಗುರುವಾರದಿಂದ 1ರೂ.ಹೆಚ್ಚಳ ಮಾಡುತ್ತಿದೆ. ಹೆಚ್ಚಿನ ದರವನ್ನು ಇಸ್ಕಾನ್ ಅಕ್ಷಯ ಪಾತ್ರಾ ಯೋಜನೆಗೆ ನೀಡಲು ಅಡಿಗಾಸ್ ನಿರ್ಧರಿಸಿದೆ. ಈ ದರ ಗುರುವಾರದಿಂದಲೇ ಜಾರಿಗೆ ಬರುತ್ತಿದೆ.
ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಾಸುದೇವ ಅಡಿಗಾಸ್ ಹೋಟೆಲ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಜೇಕಬ್ ಕುರಿಯನ್ ಈ ಕುರಿತು ಮಾಹಿತಿ ನೀಡಿದರು. 'ಇಸ್ಕಾನ್ ಅಕ್ಷಯ ಪಾತ್ರಾ' ಯೋಜನೆಗೆ ಕೈಜೋಡಿಸಿರುವ 'ವಾಸುದೇವ ಅಡಿಗಾಸ್' ಗುರುವಾರದಿಂದ ತನ್ನೆಲ್ಲಾ ಹೋಟೆಲ್ಗಳಲ್ಲಿ ಆಹಾರ ಪದಾರ್ಥಗಳ ದರವನ್ನು 1 ರೂ. ಹೆಚ್ಚಿಸಲು ಪ್ಲಸ್ಒನ್ ಅಭಿಯಾನ ನಡೆಸಲಿದೆ ಎಂದರು.

ಶಾಲಾ ಮಕ್ಕಳಿಗೆ ಬಿಸಿಯೂಟ ಒದಗಿಸುವ ಇಸ್ಕಾನ್ ಸಂಸ್ಥೆಯ ಇಸ್ಕಾನ್ ಅಕ್ಷಯ ಪಾತ್ರಾ' ಯೋಜನೆಗೆ ನಾವು ಕೈಜೋಡಿಸುತ್ತಿದ್ದೇವೆ. ಆದ್ದರಿಂದ ಪ್ಲಸ್ ಒನ್ ಅಭಿಯಾನ ಆರಂಭಿಸಿದ್ದು, ಪ್ರತಿ ಆಹಾರ ಪದಾರ್ಥಗಳ ಮೇಲೆ ಹೆಚ್ಚುವರಿಯಾಗಿ ಪಡೆಯಲಾಗುವ 1 ರೂಪಾಯಿಯನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಅಕ್ಷಯ ಪಾತ್ರಾ ಯೋಜನೆಗೆ ದೇಣಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅಡಿಗಾಸ್ ಸಮೂಹ ಸಂಸ್ಥೆಯ ಒಟ್ಟು 20 ಶಾಖೆಗಳಿವೆ. ಗ್ರಾಹಕರು, ಪಾಲುದಾರರು ಹಾಗೂ ಉದ್ಯೋಗಿಗಳ ಸಹಭಾಗಿತ್ವದಲ್ಲಿ ಅಕ್ಷಯ ಪಾತ್ರಾ ಯೋಜನೆಗೆ 10 ಲಕ್ಷ ಊಟದ ಆರ್ಥಿಕ ನೆರವು ನೀಡಲು ಪ್ಲಸ್ಒನ್ ಎಂಬ ಅಭಿಯಾನ ಆರಂಭಿಸಲಾಗಿದೆ ಎಂದರು. ಗುರುವಾರ ನ.14ರ ಮಕ್ಕಳ ದಿನಾಚರಣೆಯಾದ ಕಾರಣ ಅಂದಿನಿಂದಲೇ ಹೋಟೆಲ್ ಗಳಲ್ಲಿ ಆಹಾರ ಪದಾರ್ಥಗಳ ಬೆಲೆ 1 ರೂ. ಏರಿಕೆಯಾಗಲಿದೆ ಎಂದು ತಿಳಿಸಿದರು.
ಎಷ್ಟು ಸಂಗ್ರಹವಾಗುತ್ತದೆ : ಅಡಿಗಾಸ್ ಸಂಸ್ಥೆಯು 10 ಲಕ್ಷ ಊಟದ ಆರ್ಥಿಕ ನೆರವು ಭರಿಸಲು ಕನಿಷ್ಠ 36.50 ಲಕ್ಷ ರೂ. ಅಗತ್ಯವಿದೆ ಎಂದು ಅಂದಾಜಿಸಿದೆ. ಎಲ್ಲಾ ಅಡಿಗಾಸ್ ಶಾಖೆಗಳಲ್ಲಿ ಪ್ರತಿ ತಿಂಗಳು 7 ರಿಂದ 8 ಲಕ್ಷ ಗ್ರಾಹಕರು ಆಹಾರ ಸೇವಿಸಲಿದ್ದಾರೆ. ಪ್ರತೀ ಗ್ರಾಹಕ ಕನಿಷ್ಠ 2 ಪದಾರ್ಥ ಕೊಂಡರೂ 1 ರೂ. ಹೆಚ್ಚಳದಿಂದ ತಿಂಗಳಿಗೆ 14 ರಿಂದ 16 ಲಕ್ಷ ರೂ. ಸಂಗ್ರಹವಾಗುತ್ತದೆ ಎಂದು ಕುರಿಯನ್ ಹೇಳಿದರು.
2 ತಿಂಗಳಲ್ಲಿ 32 ಲಕ್ಷ ರೂ. ಸಂಗ್ರಹವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಉಳಿದ ಹಣವನ್ನು ಪಾಲುದಾರರು, ಉದ್ಯೋಗಿಗಳ ಸಹಭಾಗಿತ್ವದಲ್ಲಿ ಕ್ರೋಡಿಕರಿಸಿ ಅಕ್ಷಯ ಪಾತ್ರಾ ಯೋಜನೆಗೆ ನೀಡಲಾಗುವುದು ಎಂದು ತಿಳಿಸಿದರು. ಅಕ್ಷಯ ಪಾತ್ರಾ ಪ್ರತಿಷ್ಠಾನದ ಪ್ರಧಾನ ವ್ಯವಸ್ಥಾಪಕ (ನಿರ್ವಹಣೆ) ವಿನಯ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications