Cauvery Dispute: ತಮಿಳುನಾಡು ವಿರುದ್ಧ ಸೆ.13ಕ್ಕೆ ವಾಟಾಳ್ ನಾಗರಾಜ್ ಪ್ರತಿಭಟನೆ
ಬೆಂಗಳೂರು, ಸೆಪ್ಟಂಬರ್ 12: ಕಾವೇರಿ ನದಿ ನೀರು ವಿಚಾರ ಹಾಗೂ ಪ್ರಮುಖ ಯೋಜನೆಯಲ್ಲಿ ನೆರೆಯ ತಮಿಳುನಾಡು ರಾಜ್ಯದ ಧೋರಣೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಾಳೆ ಸೆಪ್ಟಂಬರ್ 13ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ವಾಟಾಳ್ ನಾಗರಾಜ್ ಅವರು ಬೆಂಗಳೂರು ಗಡಿಭಾಗದ ಅತ್ತಿಬೆಲೆ ಬಳಿ ಬುಧವಾರ ಮಧ್ಯಾಹ್ನ 12 ಗಂಟೆಗೆ ತಮಿಳುನಾಡು ರಾಜ್ಯದ ಗಡಿ ಭಾಗ ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.
ತಮಿಳುನಾಡು ರಾಜ್ಯ ಕಾವೇರಿ ನೀರು ಹಂಚಿಕೆಯಲ್ಲಿ ಒತ್ತಾಯ ಮಾಡುತ್ತಿದೆ. ಸದ್ಯ ಈ ವಿಚಾರ ಸುಪ್ರೀಂ ಕೋರ್ಟ್ನಲ್ಲಿದೆ. ಇನ್ನೂ ಮೇಕೆದಾಟು ಯೋಜನೆ ಸಾಕಾರಕ್ಕೂ ಸಹ ತಮಿಳುನಾಡು ಅಡ್ಡಿ ಪಡಿಸಿತ್ತಿಎ. ಇದೆಲ್ಲ ಕಾರಣದಿಂದ ವಾಟಾಳ್ ನಾಗರಾಜ್ ಅವರು ಪ್ರತಿಭಟಿಸುತ್ತಿದ್ದಾರೆ.

ಪ್ರತಿಭಟನೆಯ ಒತ್ತಾಯಗಳೇನು?
* ತಮಿಳುನಾಡು ರಾಜ್ಯ ಸರ್ಕಾರ ಮೇಕೆದಾಟು ಬಗ್ಗೆ ತಂಟೆ ತೆಗೆಯಬಾರದು.
* ಮೇಕೆದಾಟು ಯೋಜನೆ ಆಗಲೇಬೇಕು.
* ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನುಕೂಲವಾಗಲಿದೆ.
* ಮೇಕದಾಟು ಯೋಜನೆಗೆ ವಿರೋಧಿಸುವುದನ್ನು ಬಿಡಬೇಕು.
* ಕಾವೇರಿ ನೀರಿಗಾಗಿ ಒತ್ತಾಯ ಸರಿಯಲ್ಲ. ಕಾವೇರಿ ನೀರಿದ್ದರೆ ನಾವೇ ಬಿಡುತ್ತೇವೆ.
* ಸದ್ಯ ಸ್ಥಿತಿಯಲ್ಲಿ ಕರ್ನಾಟಕ ರೈತರಿಗೆ ಮತ್ತು ಕುಡಿಯಲು ನೀರಿಲ್ಲದೆ ಕಷ್ಟವಾಗಿದೆ.
* ಸುಪ್ರೀಂ ಕೋರ್ಟ್ನಲ್ಲಿ ನೀರಿಗಾಗಿ ಕರ್ನಾಟಕದ ವಿರುದ್ಧ ಮೊಕದ್ಧಮೆ ಹಾಕಿರುವುದು ತೀವ್ರ ಖಂಡನೀಯ.
* ಈ ವಿಚಾರದಲ್ಲಿ ತಮಿಳುನಾಡಿನ ಧೋರಣೆ ಬದಲಾಗಬೇಕು.
ಕರ್ನಾಟಕ ಸರ್ಕಾರ ನಮ್ಮ ರೈತರನ್ನು ಕಡೆಗಣಿಸಿ ಯಾರಿಗೂ ಹೇಳದೆ ಧಾರಾಳವಾಗಿ ನೀರು ಬಿಟ್ಟಿದ್ದಾರೆ. ಜಲಾಶಯಕ್ಕೆ ಎಷ್ಟು ನೀರು ಬಂತು, ಎಷ್ಟು ನೀರು ಹೊರಬಿಟ್ಟಿದ್ದಾರೆ ಹಾಗೂ ಕರ್ನಾಟಕ ಜಲಾಶಯಗಳ ಪರಿಸ್ಥಿತಿ ಬಗ್ಗೆ ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ವಾಟಾಳ್ ನಾಗರಾಜ್ ಪ್ರತಿಭಟನೆ ವೇಳೆ ಸರ್ಕಾರವನ್ನು ಮತ್ತು ತಮಿಳುರಾಜ್ಯವನ್ನು ಆಗ್ರಹಿಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications