ವಾಟಾಳ್ ನಾಗರಾಜ್ಗೆ ಜೀವ ಬೆದರಿಕೆ ಕರೆ
ಬೆಂಗಳೂರು, ಜ.19 : ಸದಾ ವಿಭಿನ್ನವಾಗಿ ಪ್ರತಿಭಟನೆ ಮಾಡುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮತ್ತು ಅವರ ಆಪ್ತರಿಗೆ ಪ್ರಾಣ ಬೆದರಿಕೆ ಕರೆ ಬಂದಿದೆ. ಈ ಕುರಿತು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಾಟಾಳ್ ನಾಗರಾಜ್ ಅವರ ಆಪ್ತ ಎನ್.ವೆಂಕಟೇಶ್ ಅವರ ಮೊಬೈಲ್ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಭಾನುವಾರ ರಾತ್ರಿ ಬೆದರಿಕೆ ಹಾಕಿದ್ದಾರೆ ಎಂದು ವೆಂಕಟೇಶ್ ಸೋಮವಾರ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. [ಕತ್ತೆಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟ ವಾಟಾಳ್ ನಾಗರಾಜ್!]

ಭಾನುವಾರ ರಾತ್ರಿ 9.30ರ ಸುಮಾರಿಗೆ ವೆಂಕಟೇಶ್ ಅವರಿಗೆ ಕರೆ ಮಾಡಿದ್ದ ಅನಾಮಿಕ ವ್ಯಕ್ತಿ ವೆಂಕಟೇಶ್ ಮತ್ತು ವಾಟಾಳ್ ನಾಗರಾಜ್ ಅವರನ್ನು ಅವ್ಯಾಚ್ಯಾ ಶಬ್ದಗಳಿಂದ ನಿಂದಿಸಿದ್ದಾನೆ ಮತ್ತು ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. [ವಾಟಾಳ್ ನಾಗರಾಜ್ಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ]
'ವಾಟಾಳ್ ನಾಗರಾಜ್ ಹಾಗೂ ನಿನ್ನನ್ನು ಮುಗಿಸುತ್ತೇನೆ' ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಸಂಬಂಧ ತನಿಖೆ ನಡೆಸಿ ಸೂಕ್ತ ರಕ್ಷಣೆ ನೀಡಬೇಕೆಂದು ವೆಂಕಟೇಶ್ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಹನುಮಂತನಗರ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯವೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಅಂದಹಾಗೆ ಯಾವಾಗಲೂ ವಿನೂತನವಾಗಿ ಪ್ರತಿಭಟನೆ ಮಾಡುವ ವಾಟಾಳ್ ಇದರ ವಿರುದ್ಧವೂ ಪ್ರತಿಭಟನೆ ಮಾಡ್ತಾರಾ? ಕಾದು ನೋಡಬೇಕು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications