Get Updates
Get notified of breaking news, exclusive insights, and must-see stories!

ವಸುಧೇಂದ್ರ, ವೈದ್ಯರ ಕಥೆ ಆಧಾರಿತ ನಾಟಕ ನೋಡಿ

ಬೆಂಗಳೂರು, ನ.18: ಸಾಹಿತಿ ಶ್ರೀನಿವಾಸ ವೈದ್ಯ ಹಾಗೂ ವಸುದೇಂಧ್ರ ರವರ ಸಣ್ಣಕಥೆಗಳ ಆಧಾರಿತ ರಂಗಪ್ರಯೋಗಕ್ಕೆ ಮತ್ತೊಮ್ಮೆ ರಂಗಶಂಕರ ಸಜ್ಜಾಗಿದೆ. ನ.20ರಂದು ವಟಿ ಕುಟೀರ ತಂಡ ಪ್ರಸ್ತುತಪಡಿಸುವ ಈ ನಾಟಕದ ಬಗ್ಗೆ ಎಂಎಸ್ ಪ್ರಸಾದ್ ಅವರು ಬರೆದಿರುವ ಲೇಖನ ಇಲ್ಲಿದೆ.

ಶ್ರದ್ಧ ಮತ್ತು 'ಸ್ಟೇನ್ ಲೆಸ್' ಸ್ಟೀಲ್ ಪಾತ್ರೆಗಳು: ಶ್ರೀನಿವಾಸ ವೈದ್ಯ ಹಾಗೂ ವಸುದೇಂಧ್ರ ರವರ ಸಣ್ಣಕಥೆಗಳ ಆಧಾರಿತ ರಂಗಪ್ರಯೋಗ. ರೆಕ್ಕೆ ಪುಕ್ಕಗಳಿಲ್ಲದೆ ಮನುಜ ಹಾರಾಡುತ್ತಾನೆ, ಇನ್ನೇನಾದರು ಆತನ ಕೈಯಲ್ಲಿ ಎಲ್ಲವು ಆಗುವಂತಿದ್ದರೆ ಆ ಭಗವಂತನು ಸೋತು ಶರಣಾಗುತ್ತಿದ್ದನೇನೋ. ನಾನು ನನ್ನದು ಎನ್ನುವ ನಾಗಾಲೋಟದಲ್ಲಿ ತನ್ನತನವನ್ನೇ ಮರೆತಿರುವ ಮಾನವ ತಾ ನಡೆದಾಡಿದ ಹಾದಿ, ತೊದಲಿನಿಂದ ಕಲಿತ ಮಾತು, ಕಲಿತ ವಿದ್ಯಾಬುದ್ದಿ ಎಲ್ಲವು ತಾನಾಗಿ ಕಲಿತವನಂತೆ ಮೆರೆಯುತ್ತಿದ್ದಾನೆ.

ಬೆಳವಣಿಗೆಯ ನೆಪದಲ್ಲಿ ಕಾಲಚಕ್ರದೊಂದಿಗೆ ಶರವೇಗದಲ್ಲಿ ಉರುಳಿಹೋಗುತ್ತಿರುವ ನನ್ನವರು ಎಂಬ ಬಂಧನದಿಂದ ದಿನೆ ದಿನೇ ದೂರ ಹೋಗುತ್ತಿದ್ದಾನೆ, ಮೌನದಲ್ಲಿ ಮಾತನ್ನು ಹುಡುಕುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾನೆ. ಆಸೆಯೆಂಬ ಬಿಸಿಲು ಕುದುರೆಯ ಬೆನ್ನಟ್ಟಿ ಬದಲಾವಣೆ, ಜಾಗತೀಕರಣವೆಂಬ ನೆಪವ ಹೇಳುತ್ತಾ, ತಾನು ಮಾಡುತ್ತಿರುವ ತಪ್ಪನ್ನು ಒಪ್ಪಿಕೊಳ್ಳದ ಸ್ಥಿತಿ ತಲುಪಿದ್ದಾನೆ.

ನಮ್ಮ ದಿನ ನಿತ್ಯದ ಜಂಜಾಟದಲ್ಲಿ ಏನೆಲ್ಲಾ ಮರೆತಿದ್ದೇವೆ ಎಂದು ನೆನಪಿಸಲು ವಟಿ ಕುಟೀರ ಎರೆಡು ಸುಂದರ ನಾಟಕಗಳನ್ನು ನ.20ರಂದು ರಂಗಶಂಕರದಲ್ಲಿ ನಿಮ್ಮ ಮುಂದೆ ತರಲಿದೆ.

Vati Kutira presents two Kannada Plays Shraddha and 'Stainless Steel Patre

ಮೌಲ್ಯಗಳ ಮರೆತಿರುವ ಈ ಕಾಲದಲ್ಲಿ ಈ ರಂಗ ಪ್ರಯೋಗ ಸ್ವಾಗತಾರ್ಹ, ವಸುಧೇಂದ್ರ ಅವರ ಸ್ಟೇನ್ ಲೆಸ್ ಸ್ಟೀಲ್ ಪಾತ್ರೆ ಹಾಗು ಶ್ರೀನಿವಾಸ್ ವೈದ್ಯರ ಶ್ರದ್ಧಾ. ತಾಯಿ ತಂದೆ ಇಬ್ಬರು ಕಣ್ಣಿಗೆ ಕಾಣುವ ದೇವರು ಎನ್ನುವ ಹಿರಿಯರ ನಾಣುಡಿಯನ್ನು ಆಧುನಿಕತೆಗೆ ಸಿಲುಕಿ ಬದಲಾಗಿದೆ, ತಂದೆ, ತಾಯಿಯನ್ನು ಮೂಲೆಗುಂಪಾಗಿಸಿ ರಜ ಸಿಕ್ಕಾಗಲೆಲ್ಲ ದೇವರನ್ನು ಹುಡುಕುತ್ತ ಊರು ಕೇರಿಯಾದಿಗೆ ಹುಡುಕುತ್ತಾ ಸಾಗಿದ್ದಾನೆ. ಈ ರಂಗ ಪ್ರಯೋಗದ ಸಾರ್ಥಕತೆ ತಂದೆ ತಾಯಿಯನ್ನು ಪ್ರೀತಿಸುವವರು ಪ್ರತಿಯೊಬ್ಬರೂ ನೋಡಿದಾಗ ಮಾತ್ರ.

ಮಡದಿಯಾಗಿ ಹೊಸ ಮನೆ ಸೇರುವ ಹೆಣ್ಣು, ಆ ಮನೆಯ ಸೊಸೆಯಾಗಿ ಬೆಳಗುವ ನಂದಾದೀಪವಾಗಿ, ಅಮ್ಮನಾಗಿ, ಅಜ್ಜಿಯಾಗಿ ಆಯಾ ಪಾತ್ರಗಳಿಗೆ ಒಗ್ಗಿಕೊಳ್ಳುವಂತೆ ಅವಳ ಸುತ್ತ ಹುಟ್ಟಿ ನಿಲ್ಲುವ ಸಮಸ್ಯೆಗಳನ್ನು ಎದೆ ಗುಂದದೆ ಹೇಗೆ ನಿಭಾಯಿಸುತ್ತಾಳೆ, ಹಾಗೆಯೇ ರೈಲಿನಲ್ಲಿ ತಿರುಪತಿಗೆ ಹೋಗುವಾಗ ಕಳೆದು ಹೋದ ಲೋಟವನ್ನು ಮರೆಯುವುದೇ ಇಲ್ಲ. ಫಳ ಫಳ ಹೊಳೆಯುವ ಪಾತ್ರೆಗಳಲ್ಲಿ ತನ್ನ ಬದುಕಿನ ಸಾರ್ಥಕತೆ ಕಂಡುಕೊಳ್ಳುವ ಅಮ್ಮ ತಾನಿರಲಿ ಬಿಡಲಿ ನಮ್ಮ ಮನದಲ್ಲಿ ನಮ್ಮೊಂದಿಗೆ ಸದಾ ಇರುತ್ತಾಳೆ.

ಅಪ್ಪ ಬರಲಿ ಇರು ನೀ ಮಾಡಿದ್ದು ಹೇಳ್ತೀನಿ ಅಂದಾಗ ಎಲ್ಲಾ ಮಕ್ಕಳು ಹೆದರುವುದು ಸಹಜ, ಗಡಸು ಸ್ವಭಾವ, ಕೋಪಿಷ್ಠ, ಬಹಳ ಶಿಸ್ತು ಎನ್ನುವ ಪದಗಳೇ ಅಪ್ಪನನ್ನು ಪ್ರತಿಬಿಂಬಿಸುವುದು ಸಹಜ ಆದರೆ ಅದರ ಹಿಂದೊಂದು ಪ್ರೀತಿಸುವ ಮನಸಿದೆ, ಆಶಿಸುವ ಹೃದಯವಿದೆ, ಪ್ರೋತ್ಸಾಹಿಸುವ ಶ್ರೀಮಂತಿಕೆ ಇದೆ ಎನ್ನುವುದು ಅರಿಯದೆ ಹೋಗಿದ್ದೇವೆ. ಚಳಿಯಿರಲಿ, ಮಳೆಯಿರಲಿ, ಸುಡುವ ಬಿಸಿಲೆ ಇರಲಿ ನಮ್ಮನ್ನು ರಕ್ಷಿಸುವ ಅಪ್ಪನ ಆ ಔದಾರ್ಯತೆ ನಮ್ಮನ್ನು ಸೋಕಿದಾಗ ಅವರ ತ್ಯಾಗದ ಮುಂದೆ ನಾವು ಕುಬ್ಜರಾಗಿಬಿಡುತ್ತೇವೆ.

ಪಾತ್ರಧಾರಿಗಳು: ಗಣೇಶ್ ಶಣೈ, ಪ್ರಾಚೀ ದೇಶಪಾಂಡೆ, ಕೀರ್ತಿಭಾನು, ಹರೀಶ್ ಸೋಮಯಾಜಿ, ಕಿರಣ್ ವಟಿ.

ನಿರ್ದೇಶನ : ಕಿರಣ್ ವಟಿ
ಸಂಗೀತ : ಸತೀಶ್ ಕೆ. ಎಸ್.
ಬೆಳಕು : ಸುನಿಲ್

ನಾಟಕದ ಅವಧಿ: 7.30 ರಿಂದ 9.00
ದಿನಾಂಕ / ದಿನ: ನವೆಂಬರ್ 20, ಗುರುವಾರ
ಆನ್ ಲೈನ್ ಟಿಕೆಟ್ ಖರೀದಿಸಲು : ಬುಕ್ ಯುವರ್ ಇವೆಂಟ್.ಕಾಂ ಗೆ ಭೇಟಿ ಕೋಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+