ಬೆಂಗಳೂರು: ಸ್ವಾಮಿ ವಿವೇಕಾನಂದರ ಜೀವನಾಧಾರಿತ 'ವೀರ ಸಂನ್ಯಾಸಿಯ ಆತ್ಮ ಗೀತೆ' ಏ.25ಕ್ಕೆ
ಬೆಂಗಳೂರು, ಏಪ್ರಿಲ್ 20: ಉದ್ಯಾನ ನಗರಿ ಬೆಂಗಳೂರಿನಲ್ಲಿ ಸ್ವಾಮಿ ವಿವೇಕಾನಂದರ ಜೀವನಾಧಾರಿತ 'ವೀರ ಸಂನ್ಯಾಸಿಯ ಆತ್ಮ ಗೀತೆ' ಎಂಬ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಖ್ಯಾತ ನಿರ್ದೇಶಕ ಕಾರ್ತಿಕ್ ಸರಗೂರು ನಿರ್ದೇಶನ, ಖ್ಯಾತ ಸಂಗೀತ ಸಂಯೋಜಕ ಪ್ರವೀಣ್ ಡಿ. ರಾವ್ ಸಂಗೀತ ಸಂಯೋಜನೆ, ಗಾಯಕಿ ವಾರಿಜಶ್ರೀ ವೇಣು ಗೋಪಾಲ್ ಗಾಯನವಿದೆ. ಏಪ್ರಿಲ್ 25ರಂದು ಬಿಡುವು ಮಾಡಿಕೊಂಡು ಬನ್ನಿ.
ಪರಮ್ ಕಲ್ಚರ್ ವತಿಯಿಂದ 'ವೀರ ಸಂನ್ಯಾಸಿಯ ಆತ್ಮಗೀತೆ' ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಈ ಗೀತೆ ಪ್ರದರ್ಶನ ನಡೆಯಲಿದ್ದು, ಸ್ವಾಮಿ ವಿವೇಕಾನಂದರ ಜೀವನ, ಕೃತಿ ಆಧಾರಿತ ಅತ್ಯದ್ಭುತ ಮಲ್ಟಿಮೀಡಿಯಾ ಪ್ರದರ್ಶನ ಇದಾಗಿದೆ.

ಒಟ್ಟು 2 ಗಂಟೆಗಳ ಕಾಲಾವಧಿಯ ಪ್ರದರ್ಶನ ಇದಾಗಿದೆ. ಸುಮಾರು 35ಕ್ಕೂ ಅಧಿಕ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗಿಯಾಗಲಿದ್ದಾರೆ. ಖ್ಯಾತ ಸಂಗೀತ ಸಂಯೋಜಕರಾದ ಪ್ರವೀಣ್ ಡಿ. ರಾವ್ ಹಾಗೂ ಚಲನಚಿತ್ರ ನಿರ್ದೇಶಕರಾದ ಕಾರ್ತಿಕ್ ಸರಗೂರು ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ, ಚಿಂತನೆಗಳನ್ನು ಕಟ್ಟಿಕೊಡಲಾಗುತ್ತದೆ.
ಸ್ವಾಮಿ ವಿವೇಕಾನಂದರಿಂದಲೇ ಇಂಗ್ಲಿಷ್, ಬೆಂಗಾಳಿ, ಸಂಸ್ಕೃತದಲ್ಲಿ ರಚಿಸಲ್ಪಟ್ಟ ಹಾಡುಗಳನ್ನು ಹಾಗೂ ಕನ್ನಡ ಸಾರಸ್ವತ ಲೋಕದ ರತ್ನಗಳಾದ ಜಿ. ಎಸ್. ಶಿವರುದ್ರಪ್ಪ, ಕುವೆಂಪು ಸೇರಿದಂತೆ ಹಲವು ಪ್ರಖ್ಯಾತ ಕವಿಗಳು ವಿವೇಕಾನಂದರ ಬಗ್ಗೆ ಬರೆದ ಹಾಡುಗಳನ್ನು ಆಲಿಸಬಹುದು.
ಬೇಡಿಕೆ ಮೇರೆಗೆ ಮತ್ತೊಮ್ಮೆ ಆಯೋಜನೆ: ಜನವರಿಯಲ್ಲಿ ಪ್ರದರ್ಶಿಸಲ್ಪಟ್ಟಿದ್ದ 'ವೀರ ಸಂನ್ಯಾಸಿಯ ಆತ್ಮ ಗೀತೆ' ಪ್ರದರ್ಶನ ಆಗ ಅಭೂತಪೂರ್ವವಾಗಿ ಯಶಸ್ವಿಯಾಗಿತ್ತು. ಪ್ರೇಕ್ಷಕರ ಬೇಡಿಕೆಯ ಮೇರೆಗೆ ಈಗ ಮರುಪ್ರದರ್ಶನವನ್ನು ಕಾಣುತ್ತಿದೆ.
ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳನ್ನು ಮನೆ ಮನೆಗೂ ತಲುಪಿಸುವ ಸಲುವಾಗಿ 'ಪರಮ್' ಇಂತಹದ್ದೊಂದು ಅದ್ಭುತ ಕಾರ್ಯಕ್ರಮವನ್ನು ಮತ್ತೆ ಆಯೋಜಿಸಿದೆ. ಬೇಸಿಗೆಯ ರಜೆಯಲ್ಲಿ ಮಕ್ಕಳಿಗೂ ತೋರಿಸಬಹುದಾದಂತಹ, ಕುಟುಂಬ ಸಮೇತ ಆಸ್ವಾದಿಸುವಂತಹ ಕಾರ್ಯಕ್ರಮ ಇದಾಗಿದೆ. ಬಿಡುವು ಮಾಡಿಕೊಂಡು ಬನ್ನಿ.
ಇದರ ನಿರ್ದೇಶಕರು ಕಾರ್ತಿಕ್ ಸರಗೂರು. ಅತ್ಯುತ್ತಮ ಕಥೆಗಾರರು ಮತ್ತು ಗೀತರಚನೆಕಾರರಾದ ಅವರು ತಮ್ಮ ಚಲನಚಿತ್ರ ನಿರ್ದೇಶನದಿಂದ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಸೃಜನಾತ್ಮಕ ಕಲೆಗಳ ವೃತ್ತಿಪರರು. ಇವರು ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ, ಇಂಗ್ಲಿಷ್ ಸಾಹಿತ್ಯ ಮತ್ತು ಮನೋವಿಜ್ಞಾನದಲ್ಲಿ ಶಿಕ್ಷಣ ಪಡೆದಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು , ತೆಲುಗು ಮುಂತಾದ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ಇವರು, ಹಲವು ಬಗೆಯ ಕಲಾರಸಿಕರನ್ನು ಸೆಳೆಯುವಂತಹ ಭಾಷಾ ಪ್ರೌಢಿಮೆಯನ್ನು ಹೊಂದಿದ್ದಾರೆ.
ವಾರಿಜಶ್ರೀ ವೇಣುಗೋಪಾಲ್ ಅವರ ಅತ್ಯುತ್ತಮ ಗಾಯನವಿದೆ. ಇವರು 18 ತಿಂಗಳ ಹಸುಗೂಸಾಗಿರುವಾಗಲೇ ಕರ್ನಾಟಕ ಸಂಗೀತದ 100ಕ್ಕೂ ಅಧಿಕ ರಾಗಗಳನ್ನು ಗುರುತಿಸಬಲ್ಲ ಅದ್ಭುತ ಬಾಲ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. 4ನೇ ವಯಸ್ಸಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಕಚೇರಿಗಳನ್ನು ನೀಡಲು ಪ್ರಾರಂಭಿಸಿ ಅಂದಿನಿಂದಲೂ ಮನೆ ಮಾತಾಗಿದ್ದಾರೆ. ಜಾಗತಿಕ ಸಂಗೀತ ಪ್ರದರ್ಶನಗಳ ವೇಳೆ ಭಾರತೀಯ ಗಾಯನದ ಪಟ್ಟುಗಳ ಸಹಿತ ಮೂಲ ಅಂಶಗಳೊಂದಿಗೆ ಅಂತರಾತ್ಮದಿಂದ ಹಾಡುವ ಕಲಾವಿದರಲ್ಲಿ ವಾರಿಜಶ್ರೀ ಒಬ್ಬರಾಗಿದ್ದಾರೆ.
ಪ್ರವೀಣ್ ಡಿ. ರಾವ್ ಸಂಗೀತ ಸಂಯೋಜನೆ ಇದೆ. ಪ್ರತಿಭಾವಂತ ಬಹು-ವಾದ್ಯ ಕಲಾವಿದರಾಗಿರುವ ಇವರು ಅಂತಾರಾಷ್ಟ್ರೀಯ ಖ್ಯಾತಿಯ ಶಾಸ್ತ್ರೀಯ ಸಂಗೀತದ ಕಲಾವಿದರು. ಸಂಗೀತ ನಿರ್ದೇಶಕರು, ಸಂಯೋಜಕರು, ತಾಳವಾದ್ಯ ಕಲಾವಿದರು, ರಂಗ ನಿರ್ದೇಶಕರೂ ಆಗಿರುವ ಇವರು ಮೂರು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿಕೊಂಡು ಬರುತ್ತಿದ್ದಾರೆ.
ಏನಿದು ಪರಮ್ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ?: ಬೆಂಗಳೂರಿನ ಮಾಗಡಿರಸ್ತೆಯ ಚನ್ನೇನಹಳ್ಳಿಯಲ್ಲಿ ಸುಮಾರು 15 ಎಕರೆ ಜಾಗದಲ್ಲಿ ಪರಮ್ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಈ ಕೇಂದ್ರವು, ಭಾರತದಲ್ಲಿ ರೂಪುಗೊಳ್ಳುತ್ತಿರುವ ಅತಿದೊಡ್ಡ ಮಲ್ಟಿ ಎಕ್ಸ್ಪೀರಿಯನ್ಸ್ ತಾಣವಾಗಿದೆ. ಇದು, ವಿಜ್ಞಾನ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ವೇದಿಕೆಯನ್ನು ಒದಗಿಸಿ ಕೊಡಲಿದೆ. ಇಲ್ಲಿ, ವೈಜ್ಞಾನಿಕ ಆವಿಷ್ಕಾರಗಳೂ, ಸಾಂಸ್ಕೃತಿಕ ಕಲಿಕಾ ಸೌಲಭ್ಯಗಳೂ ಇರಲಿವೆ.
ಪರಮ್ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರದಲ್ಲಿ, ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಭವನ, ಪ್ರದರ್ಶನ ಭವನ, ವಿಜ್ಞಾನ ಕೇಂದ್ರ ಹಾಗೂ ಅತ್ಯುತ್ತಮ ಸೌಲಭ್ಯಗಳುಳ್ಳ ಅತಿಥಿ ಗೃಹಗಳು ನಿರ್ಮಾಣಗೊಳ್ಳುತ್ತಿವೆ. ಈ ಕೇಂದ್ರದ ಮೂಲಕ ಸೇವಾ ಸಂಸ್ಥೆಯು ಯುವ ಮನಸ್ಸುಗಳಿಗೆ ಆಧುನಿಕ ವಿಜ್ಞಾನ ಮತ್ತು ಭಾರತೀಯ ಪ್ರಾಚೀನ ವಿಜ್ಞಾನ, ಇತಿಹಾಸ, ಸಂಸ್ಕೃತಿ, ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ಹೊಂದಿದೆ ಎನ್ನುತ್ತಾರೆ ಆಯೋಜಕರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications