ಕಪ್ಪು ಕೋಟು ಧರಿಸಿದ ವೀರಪ್ಪ ಮೊಯ್ಲಿ: ರಾಜಕೀಯದಿಂದ ನಿವೃತ್ತಿ?
ಬೆಂಗಳೂರು, ಜೂನ್ 24: ಚುನಾವಣೆ ಸೋಲಿನಿಂದ ಬೇಸರಗೊಂಡಿರುವ ಕಾಂಗ್ರೆಸ್ನ ವೀರಪ್ಪ ಮೊಯ್ಲಿ ಅವರು, ಇತ್ತೀಚೆಗಷ್ಟೆ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಮೈತ್ರಿಯಿಂದಲೇ ಕಾಂಗ್ರೆಸ್ಗೆ ಸೋಲಾಯ್ತು ಎಂದು ಸ್ವಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಸೋಲಿನಿಂದ ಬೇಸರಗೊಂಡಿರುವ ಅವರು, ರಾಜಕೀಯವನ್ನು ತ್ಯಜಿಸಿದರೇ ಎಂಬ ಅನುಮಾನ ಮೂಡುತ್ತಿದೆ, ಕಾರಣ ವೀರಪ್ಪ ಮೊಯ್ಲಿ ಅವರು ತಮ್ಮ ಹಳೆಯ ವೃತ್ತಿ ವಕೀಲಿಕೆಗೆ ಮರಳಿದ್ದಾರೆ.
ವೀರಪ್ಪ ಮೊಯ್ಲಿ ಅವರು ಬಿ.ಎ ಅನ್ನು ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಮತ್ತು ಕಾನೂನು ಪದವಿಯನ್ನು ಬೆಂಗಳೂರಿನ ಕಾನೂನು ವಿವಿಯಲ್ಲಿ ಮುಗಿಸಿದ್ದಾರೆ.
ವೀರಪ್ಪ ಮೊಯ್ಲಿ ಅವರು ದಶಕದ ನಂತರ ಮತ್ತೆ ಕರೀ ಕೋಟು ಧರಿಸಿದ್ದಾರೆ. ಇಂದು ಹೈಕೋರ್ಟ್ಗೆ ಆಗಮಿಸಿದ ವೀರಪ್ಪ ಮೊಯ್ಲಿ ಅವರು ಪ್ರಕರಣವೊಂದರ ಪರ ವಾದ ಮಂಡಸಿದ್ದಾರೆ.

ರಾಜಕೀಯ ನಿವೃತ್ತಿ ಪಡೆದಿಲ್ಲ
ಆದರೆ ಇಷ್ಟಕ್ಕೆ ಅವರು ರಾಜಕೀಯ ನಿವೃತ್ತಿ ಪಡೆದಿದ್ದಾರೆ ಎನ್ನುವಂತಿಲ್ಲ. ರಾಜಕೀಯದಲ್ಲಿ ಇನ್ನೂ ಅವರು ಸಕ್ರಿಯರಾಗಿದ್ದಾರೆ. ಮುಂದೆಯೂ ಸಕ್ರಿಯರಾಗಿ ಇರಲಿದ್ದಾರೆ. ಆದರೆ ಪ್ರಸ್ತುತ ಚುನಾವಣೆಯಲ್ಲಿ ಸೋತಿರುವ ಕಾರಣ ಮರಳಿ ತಮ್ಮ ವಕೀಲಿಕಿ ವೃತ್ತಿಯನ್ನು ಆರಂಭಿಸಿದ್ದಾರೆ ಅಷ್ಟೆ.

2014 ರಲ್ಲಿ ಮೊಯ್ಲಿ ಅವರು ವಕೀಲಿಕೆ ಬಿಟ್ಟಿದ್ದರು
2014 ರಲ್ಲಿ ಮೊಯ್ಲಿ ಅವರು ಮೊಯ್ಲಿ ಲಾ ಅಸೋಸಿಯೇಟ್ಸ್ ಹೆಸರಿನ ಸಂಸ್ಥೆಯೊಂದನ್ನು ಸ್ಥಾಪಿಸಿ ಕಾನೂನು ನೆರವು ನೀಡುತ್ತಿದ್ದರು. 2014 ರಲ್ಲಿ ಅವರು ಕೊನೆಯ ಬಾರಿಗೆ ವಕೀಲ ವೃತ್ತಿ ಮಾಡಿದ್ದರು. ಈಗ ಮತ್ತೆ ವೃತ್ತಿಗೆ ಮರಳಿದ್ದಾರೆ.

ಕಿಮ್ಮನೆ ರತ್ನಾಕರ್ ಅವರೂ ಸಹ ವಕೀಲಿಕೆ ಆರಂಭಿಸಿದ್ದರು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಕಿಮ್ಮನೆ ರತ್ನಾಕರ್ ಅವರು ಸಹ ವಕೀಲಿ ವೃತ್ತಿಯನ್ನು ಪುನರ್ ಆರಂಭಿಸಿದ್ದರು. ಕಾಂಗ್ರೆಸ್ನ ಹಿರಿಯ ರಾಜಕಾರಿಣಿ ಚಿದಂಬರಂ ಅವರು ಸಹ ವಕೀಲಿ ವೃತ್ತಿಯನ್ನು ಪುನರ್ ಆರಂಭಿಸಿ ಕೆಲವು ಪ್ರಕರಣಗಳ ಪರ ವಾದಿಸಿದ್ದರು.

ಚಿಕ್ಕಬಳ್ಳಾಪುರದಲ್ಲಿ ಸೋತಿರುವ ಮೊಯ್ಲಿ
ಮಾಜಿ ಸಿಎಂ, ಮಾಜಿ ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು. ಆದರೆ ಈ ಬಾರಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರ ಎದುರು ಒಂದು ಲಕ್ಷಕ್ಕೂ ಹೆಚ್ಚು ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications