ಕಬ್ಬನ್ ಪಾರ್ಕ್ನಲ್ಲಿ ವಾಹನ ನಿಷೇಧ; ಬೆಂಗಳೂರು ಪೊಲೀಸರ ವರದಿ
ಬೆಂಗಳೂರು, ಸೆಪ್ಟೆಂಬರ್ 18 : ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರವನ್ನು ನಿಷೇಧಿಸಬೇಕು ಎಂಬ ಪ್ರಸ್ತಾವನೆ ಹಲವಾರು ದಿನಗಳಿಂದ ಕೇಳಿ ಬರುತ್ತಿದೆ. ಆದರೆ, ವಾಹನ ನಿಷೇಧಿಸಿದರೆ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ಸಮಸ್ಯೆ ಹೆಚ್ಚಾಗಲಿದೆ ಎಂದು ಅಧ್ಯಯನ ವರದಿ ಹೇಳಿದೆ.
ಬೆಂಗಳೂರು ಸಂಚಾರಿ ಪೊಲೀಸರು ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಿದ್ದಾರೆ. ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ನಿಷೇಧ ಮಾಡಿದರೆ ಸುತ್ತ-ಮುತ್ತಲಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ನಗರ ಭೂ ಸಾರಿಗೆ ನಿರ್ದೇಶನಾಲಯದ 2017ರ ವರದಿ ಪ್ರಕಾರ ಕಬ್ಬನ್ ಪಾರ್ಕ್ ಒಳಗೆ ಪ್ರತಿದಿನ 95,000 ವಾಹನಗಳು ಸಂಚಾರ ನಡೆಸುತ್ತವೆ. ಒಂದು ವೇಳೆ ವಾಹನ ನಿಷೇಧಿಸಿದರೆ ಅಷ್ಟು ವಾಹನಗಳು ಅಕ್ಕ-ಪಕ್ಕದ ರಸ್ತೆಗೆ ಇಳಿಯಬೇಕಾಗುತ್ತದೆ.
ಲಾಕ್ ಡೌನ್ ಸಮಯದಲ್ಲಿ ಕಬ್ಬನ್ ಪಾರ್ಕ್ ವೊಳಗೆ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು. ಈಗ ಪುನಃ ಸಂಚಾರ ಆರಂಭವಾಗಿದೆ. ವಾಹನ ಸಂಚಾರವನ್ನು ಶಾಶ್ವತವಾಗಿ ಬಂದ್ ಮಾಡಬೇಕು ಎಂದು ಸಂಚಾರಿ ಪೊಲೀಸರಿಂದ ಮುಖ್ಯಮಂತ್ರಿಗಳ ತನಕ ಮನವಿ ಸಲ್ಲಿಕೆ ಮಾಡಲಾಗಿದೆ.

5 ಕಿ. ಮೀ. ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ
ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ನಿಷೇಧ ಮಾಡಿದರೆ ಸುತ್ತಮುತ್ತಲಿನ 5 ಕಿ. ಮೀ. ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ವಿಧಾನಸೌಧ, ಹೈಕೋರ್ಟ್ ಸೇರಿದಂತೆ ಪ್ರಮುಖ ಕಟ್ಟಡಗಳು ಇರುವುದರಿಂದ ಸಂಚಾರ ದಟ್ಟಣೆ ಹೆಚ್ಚಾದರೆ ಸಮಸ್ಯೆ ಉಂಟಾಗಲಿದೆ ಎಂದು ವರದಿ ಹೇಳಿದೆ.

ವಾಹನಗಳ ನಿಲುಗಡೆ
ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ಬಂದ್ ಮಾಡಿದರೆ ಪಾರ್ಕ್ ಸುತ್ತಮುತ್ತಲಿನ 8 ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ಗೆ ತೊಂದರೆ ಆಗಲಿದೆ ಎಂದು ಸಂಚಾರಿ ಪೊಲೀಸರ ವರದಿ ಹೇಳಿದೆ. ಇದರಿಂದಾಗಿ ವಾಹನ ಸಂಚಾರ ಬಂದ್ ಮಾಡುವ ಬಗ್ಗೆ ಪುನಃ ಚರ್ಚೆಗಳು ಆರಂಭವಾಗಿದೆ.

ವಾಹನ ಸಂಚಾರ ಹೆಚ್ಚಾಗಲಿದೆ
ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ಬಂದ್ ಮಾಡಿದರೆ ನೃಪತುಂಗ ರಸ್ತೆಯಲ್ಲಿ 3,800 ಇರುವ ಪಿಸಿಯು 4,500 ಆಗಲಿದೆ. ಹಡ್ಸನ್ ಸರ್ಕಲ್-ಟೌನ್ ಹಾಲ್ ನಡುವಿನ ಮಾರ್ಗದಲ್ಲಿ 6,300ಕ್ಕೆ ಏರಿಕೆಯಾಗಲಿದೆ. ರಾಜಭವನ ರಸ್ತೆಯಲ್ಲಿ 3,800 ರಿಂದ 4,500ಕ್ಕೆ ಏರಿಕೆಯಾಗಲಿದೆ ಎಂದು ವರದಿ ಅಂದಾಜಿಸಿದೆ.
Recommended Video

ಸರ್ಕಾರ ಅನುಮತಿ ನೀಡಲಿದೆಯೇ?
ಕರ್ನಾಟಕ ಸರ್ಕಾರ ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ಬಂದ್ ಮಾಡಲು ಅವಕಾಶ ನೀಡಲಿದೆಯೇ? ಎಂಬುದುನ್ನು ಕಾದು ನೋಡಬೇಕಿದೆ. ಹಲವಾರು ವರ್ಷಗಳಿಂದ ಕಬ್ಬನ್ ಪಾರ್ಕ್ನ ಪರಿಸರ ಕಾಪಾಡಲು ವಾಹನ ಸಂಚಾರ ಬಂದ್ ಆಗಬೇಕು ಎಂಬ ಬೇಡಿಕೆ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications