ಜೂನ್ 4ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗಗಳು ಇಲ್ಲಿದೆ...
ಬೆಂಗಳೂರು ಜೂನ್ 2: ಲೋಕಸಭಾ ಚುನಾವಣೆ 2024ರ ಫಲಿತಾಂಶ ಜೂನ್ 4ರಂದು ಬಿಡುಗಡೆಯಾಗಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಮತ ಎಣಿಕೆ ಕೇಂದ್ರಗಳ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಅಂದು ಮತ ಎಣಿಕೆ ಕೇಂದ್ರಗಳ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ಸಂಚಾರ ವ್ಯವಸ್ಥಯಲ್ಲಿ ಕೆಲ ತಾತ್ಕಾಲಿಕ ಮಾರ್ಪಾಡುಗಳನ್ನು ಮಾಡಿದ್ದಾರೆ.
ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೂ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್ನಿಂದ ಏನುಗುತಾರೆ ಕಲ್ಪನಾ ಜಂಕ್ಷನ್ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೆತುವೆ ಜಂಕ್ಷನ್ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಪರ್ಯಾಯ ಮಾರ್ಗಗಳು:-
* ಪ್ಯಾಲೇಸ್ ರಸ್ತೆಯಿಂದ ಎಂಸಿಸಿ ಕಾಲೇಜು, ಕಲ್ಪನಾ ಜಂಕ್ಷನ್ ಮತ್ತು ಚಂದ್ರಿಕಾ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು-ಪ್ಯಾಲೇಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಕಂಟೋನ್ಮಂಟ್ ರಸ್ತೆಯ ಮೂಲಕ ಮುಂದಕ್ಕೆ ಸಂಚರಿಸಬಹುದು.
* ಬಸವೇಶ್ವರ ಜಂಕ್ಷನ ಕಡೆಯಿಂದ ಉದಯ ಟಿವಿ ಜಂಕ್ಷನ್ ಮತ್ತು ಜಯಮಹಲ್ ರಸ್ತೆಯ ಕಡೆಗೆ ಸಂಚರಿಸಲು- ಬಸವೇಶ್ವರ ಜಂಕ್ಷನ್, ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್, ಕಲ್ಪನಾ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಜಯಮಹಲ್ ರಸ್ತೆ ಮುಖಾಂತರ ರೈಲ್ವೆ ಸ್ಟೇಷನ್ ರಸ್ತೆ ಕಂಟೌನ್ಮಂಟ್ ಮೂಲಕ ಪ್ರೇಜರ್ ಟೌನ್ ಅಥವಾ ಕ್ರೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದು.
ಎಸ್ಎಸ್ಎಂಆರ್ವಿ ಕಾಲೇಜು
ಮೈಕೋ ಲೇಔಟ್ ಸಂಚಾರ ಪೊಲೀಸ್ ವ್ಯಾಪ್ತಿಯ 18ನೇ ಮುಖ್ಯ ರಸ್ತೆ ಮತ್ತು 28ನೇ ಮುಖ್ಯ ರಸ್ತೆಯ ಮಧ್ಯದಲ್ಲಿ ಬರುವ 36ನೇ ಕ್ರಾಸ್, 32ನೇ ಕ್ರಾಸ್ ರಸ್ತೆ ಮತ್ತು 39ನೇ ಕ್ರಾಸ್ ರಸ್ತೆ ಜಂಕ್ಷನ್ ನಡುವೆ ಬರುವ 26ನೇ ಮುಖ್ಯ ರಸ್ತೆಗಳಲ್ಲಿ ಬೆಳಗ್ಗೆ ಆರರಿಂದ ಮತ ಎಣಿಕೆ ಮುಗಿಯುವವರೆಗೂ ಎಲ್ಲಾ ಮಾದರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು:
*ಈಸ್ಟ್ ಎಂಡ್ ಮುಖ್ಯ ರಸ್ತೆ, 39ನೇ ಕ್ರಾಸ್ ರಸ್ತೆ, 18ನೇ ಮುಖ್ಯ ರಸ್ತೆ, 32ನೇ ಇ ಕ್ರಾಸ್ ರಸ್ತೆಗಳನ್ನು ವಾಹನ ಸವಾರರು ಬಳಸಬಹುದಾಗಿದೆ.
*ಸೇಂಟ್ ಜೋಸೆಫ್ ಕಾಲೇಜು ಬಳಿ ವಾಹನ ನಿಲುಗಡೆ ನಿಷೇಧ
*ವಿಠಲ್ ಮಲ್ಯ ರಸ್ತೆ-ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್ ಜಂಕ್ಷನ್ವರೆಗೆ
* ಆರ.ಆರ್.ಎಂ.ಆರ್ ರಸ್ತೆ-ರಿಚ್ಮಂಡ್ ಸರ್ಕಲ್ನಿಂದ ಹಡ್ಸನ್ ಜಂಕ್ಷನ್ವರೆಗೆ
*ಎನ್ ಆರ್ರಸ್ತೆ-ಹಡ್ಸನ್ ಸರ್ಕಲ್ನಿಂದ ಟೌನ್ ಹಾಲ್
*ಕೆಬಿ ರಸ್ತೆ-ಹೆಚ್ ಎಲ್ ಡಿ ಜಂಕ್ಷನ್ನಿಂದ ಕ್ವೇನ್ಸ್ ಜಂಕ್ಷನ್ವರೆಗೆ
* ಕೆಜಿ ರಸ್ತೆ-ಪೊಲೀಸ್ ಕಾರ್ನರ್ ಜಂಕ್ಷನ್ನಿಂದ ಮೈಸೂರು ಬ್ಯಾಂಕ್ ಜಂಕ್ಷನ್ವರೆಗೆ
*ನೃಪತುಂಗ ರಸ್ತೆ-ಕೆ.ಆರ್.ಜಂಕ್ಷನ್ನಿಂದ ಪೊಲೀಸ್ ಕಾರ್ನರ್ವರೆಗೆ-ಕ್ವೀನ್ಸ್ ರಸ್ತೆ-ಬಾಳೀಕುಂದ್ರಿ ಸರ್ಕಲ್ನಿಂದ ಸಿ.ಟಿ.ಓ ಸರ್ಕಲ್ವರೆಗೆ
*ಸೆಂಟ್ಲ್ ಸ್ವೀಟ್ ರಸ್ತೆ-ಬಿ.ಆರ್.ವಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
*ಎಂ.ಜಿ ರಸ್ತೆ-ಅನಿಲ್ ಕುಂಬ್ಳೆ ವೃತ್ತ ಕ್ವೀನ್ಸ್ ಜಂಕ್ಷನ್ವರೆಗೆ
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications