Industry: ಕರ್ನಾಟಕದಲ್ಲಿ ವಾಹನ ಬಿಡಿಭಾಗಗಳ ತಯಾರಿಕೆ ಘಟಕ ಸ್ಥಾಪನೆ: ಎಂಬಿ ಪಾಟೀಲ್
ಬೆಂಗಳೂರು, ಜೂನ್ 27: ಜಪಾನ್ ಪ್ರವಾಸದಲ್ಲಿರುವ ಕರ್ನಾಟಕದ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಇಲ್ಲಿನ ಅವೊಯಮಾ ಸೈಸಕುಷೊ ಕಂಪನಿಯ ಅಧ್ಯಕ್ಷ ಯುಕಿಯೋಷಿ ಅವೊಯಮಾ ಅವರೊಂದಿಗೆ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದರು. ಇದರ ಭಾಗವಾಗಿ ಕರ್ನಾಟಕದ ಪ್ರಮುಖ ಜಿಲ್ಲೆಯಲ್ಲಿ ಪ್ರಮುಖ ಕೈಗಾರಿಕೆಯೊಂದು ತಲೆ ಎತ್ತಲಿದೆ.
ಒಪ್ಪಂದದ ಪ್ರಕಾರ, ತುಮಕೂರಿನ ಬಳಿ ಇರುವ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ₹210 ಕೋಟಿ ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪನೆ ಆಗಲಿದೆ. ಈ ಕುರಿತು ಕರ್ನಾಟಕ ಕೈಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ ಕಂಪನಿಯು ಸಹಿ ಹಾಕಿದವು.

ಘಟಕ ಸ್ಥಾಪನೆಗೆ 20 ಎಕರೆ ಭೂಮಿ
ಟೊಯೊಟಾ ಕಂಪನಿಯ ವಾಹನ ಬಿಡಿಭಾಗಗಳನ್ನು ತಯಾರಿಸುವ ಅವೊಯಮಾ, ತುಮಕೂರಿನ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ಈ ಘಟಕ ಸ್ಥಾಪಿಸಲು 20 ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಕಚೇರಿಯು ಮಾಹಿತಿ ನೀಡಿದೆ.
ಇದೇ ವೇಳೆ ಸಚಿವರ ನೇತೃತ್ವದ ಕರ್ನಾಟಕ ನಿಯೋಗವು ವಾಹನ ತಯಾರಿಕಾ ಬಹುರಾಷ್ಟ್ರೀಯ ದೈತ್ಯ ಕಂಪನಿ ಟೊಯೊಟೊದ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಕಂಪನಿಯ ಪ್ರಾಜೆಕ್ಟ್ ಜನರಲ್ ಮ್ಯಾನೇಜರ್ ಟಕಾವೊ ಐಬಾ, ಟೊಯೊಟಾ ಕಿರ್ಲೋಸ್ಕರ್ ಮೋಟರ್ನ ಹಿರಿಯ ಉಪಾಧ್ಯಕ್ಷ ಸುದೀಪ್ ಎಸ್. ದಳವಿ ಅವರು ಸಮಾಲೋಚನೆಯಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿನ ಟೊಯೊಟಾದ ಭವಿಷ್ಯದ ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸಲಾಯಿತು.
ಉದ್ಯಮಿ ಸ್ನೇಹಿ ವಾತಾವರಣ ನಿರ್ಮಿಸಲು ನೆರವು
ಜಾಗತಿಕ ಹೂಡಿಕೆದಾರರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಮತ್ತು ರಾಜ್ಯದ ಕೈಗಾರಿಕಾ ಸಾಮರ್ಥ್ಯಗಳನ್ನು ಹೆಚ್ಚಿಸುವ ಬದ್ಧತೆಯನ್ನು ಕರ್ನಾಟಕ ಸರ್ಕಾರ ಹೊಂದಿದೆ. ಟೊಯೊಟಾ ಮತ್ತು ಅವೊಯಮಾ ಕಂಪನಿಗಳ ಜೊತೆಗಿನ ನಡೆಸಿದ ಸಮಾಲೋಚನೆಗಳಂತೆ ಸರ್ಕಾರ ಈ ಕಂಪನಿಗಳ ಉದ್ಯಮ ಸ್ನೇಹಿ ಸೌಲಭ್ಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಹೊಸ ಶುದ್ಧ ಇಂಧನ ಸಂಚಾರ ನೀತಿ ಹಾಗೂ ಗೌರಿಬಿದನೂರು, ಧಾರವಾಡದಲ್ಲಿ ವಾಹನ ತಯಾರಿಕಾ ಉದ್ಯಮದ ನೆರವಿಗಾಗಿ ಎರಡು ದೊಡ್ಡ ಕೈಗಾರಿಕಾ ಸಮೂಹಗಳನ್ನು ಸ್ಥಾಪಿಸಲಾಗುತ್ತಿದೆ. ಈ ವಿಚಾರವನ್ನು ಜಪಾನ್ ಕಂಪನಿಗಳ ಗಮನಕ್ಕೆ ತರಲಾಯಿತು.
ರಾಜ್ಯ ಕೈಗಾರಿಕೆ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಟೊಯೊಟಾಕ್ಕೆ ಅಗತ್ಯ ಇರುವ ಎಲ್ಲ ಬಗೆಯ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಲಿದೆ ಎಂದು ಬಂಡವಾಳ ಹೂಡಿಕೆಗೆ ಉತ್ತೇಜಿಸಲಾಯಿತು.
ಸಚಿವರ ನೇತೃತ್ವದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications