ಬೆಂಗಳೂರಿನ ಈ ಮಾರ್ಗದಲ್ಲಿ 30 ದಿನ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗಗಳ ವಿವರ ತಿಳಿಯಿರಿ
ಬೆಂಗಳೂರು, ಏಪ್ರಿಲ್, 5: ಕಾಮಗಾರಿ ನಡೆಯುವಂತಹ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರಿನ ಈ ಮಾರ್ಗದಲ್ಲಿ ಏಪ್ರಿಲ್ 5ರಿಂದ ಒಂದು ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾದ್ರೆ ಕಾರಣ ಏನು ಹಾಗೂ ಪರ್ಯಾಯ ಮಾರ್ಗಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರು ಆನಂದರಾವ್ ವೃತ್ತ ಮತ್ತು ಮೇಲ್ಸೇತುವೆ ಕಡೆಯಿಂದ ಹಳೇ ಜೆಡಿಎಸ್ ಕಚೇರಿ, ಸಿ. ರಂಗಸ್ವಾಮಿ ವೃತ್ತದ ವರೆಗಿನ ಲೂಪ್ ರಸ್ತೆಯಲ್ಲಿ ವೈಟ್ಟಾಪಿಂಗ್ ಕಾರ್ಯ ಆರಂಭ ಆಗಿದೆ. ಆದ್ದರಿಂದ ಇಂದಿನಿಂದ 30 ದಿನ ಅಂದರೆ ಮೇ 5ರ ವರೆಗೂ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇನ್ನು ಈ ರಸ್ತೆ ಕಡೆಗೆ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಪರ್ಯಾಯ ಮಾರ್ಗಗಳ ವಿವರ: ಆನಂದ ರಾವ್ ವೃತ್ತದ ಮೇಲ್ಸೇತುವೆ ಕಡೆಯಿಂದ ಚಾಲುಕ್ಯ ವೃತ್ತದ ಕಡೆಗೆ ಹೋಗಲು ಲಘು ಹಾಗೂ ಭಾರಿ ವಾಹನ ಸವಾರರು ಶೇಷಾದ್ರಿ ರಸ್ತೆಯಲ್ಲಿ ಚಲಿಸಿ ಮಹಾರಾಣಿ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಸಿಐಡಿ ಜಂಕ್ಷನ್-ಚಾಲುಕ್ಯ ವೃತ್ತದ ಮುಖಾಂತರ ವಿಧಾನಸೌಧದ ಕಡೆಗೆ, ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ಪೋರ್ಟ್ ಕಡೆಗೆ, ಶಿವಾಜಿನಗರದ ಕಡೆಗೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಕಡೆಗೆ ಸಂಚಾರ ಮಾಡಬಹುದು.
ಆನಂದ್ ರಾವ್ ವೃತ್ತದಿಂದ ಮಾಧವನಗರ, ಶೇಷಾದ್ರಿಪುರಕ್ಕೆ: ಆನಂದ ರಾವ್ ವೃತ್ತದ ಮೇಲ್ಸೇತುವೆ ಕಡೆಯಿಂದ ಶೇಷಾದ್ರಿ ರಸ್ತೆಯಲ್ಲಿ ಚಲಿಸಿ ಮಹಾರಾಣಿ ಜಂಕ್ಷನ್ಲ್ಲಿ ಎಡ ತಿರುವು ಪಡೆದು ಸಿಐಡಿ ಜಂಕ್ಷನ್-ಚಾಲುಕ್ಯ ವೃತ್ತದಲ್ಲಿ ಎಡ ತಿರುವು ಪಡೆದು ರೇಸ್ ಕೋರ್ಸ್ ರಸ್ತೆಯಲ್ಲಿ ಚಲಿಸಿ ಟ್ರಿಲೈಟ್ ಜಂಕ್ಷನ್ ಬಲ ತಿರುವು ಪಡೆದು ಶಿವಾನಂದ ವೃತ್ತದ ಮೂಲಕ ಲಘು ಮತ್ತು ಭಾರಿ ವಾಹನ ಚಾಲಕರು ಸಂಚಾರ ಮಾಡಬಹುದು.
ಆನಂದ್ ರಾವ್ ವೃತ್ತದಿಂದ ಮಾಧವ ನಗರ, ಶೇಷಾದ್ರಿಪುರ, ರೇಸ್ಕೋರ್ಸ್ ರಸ್ತೆ, ಕುಮಾರಕೃಪಾ ರಸ್ತೆ ಕಡೆಗೆ ಹೋಗುವವರಿಗೆ ಪರ್ಯಾಯ ಮಾರ್ಗಗಳನ್ನು ಇಲ್ಲಿ ನೀಡಲಾಗಿದೆ. ಲಘು ವಾಹನ ಸವಾರರು ಆನಂದರಾವ್ ವೃತ್ತದ ಕಡೆಯಿಂದ ಶೇಷಾದ್ರಿ ರಸ್ತೆಯಲ್ಲಿ ಚಲಿಸಿ ಮೌರ್ಯ ಜಂಕ್ಷನ್ ಸುಬ್ಬಣ್ಣ ವೃತ್ತದಲ್ಲಿ ಎಡ ತಿರುವು ಪಡೆದು ರೇಸ್ ಕೋರ್ಸ್ ರಸ್ತೆಯ ಮೂಲಕ ಹಳೇ ಜೆಡಿಎಸ್ ಕಚೇರಿ, ಸಿ.ರಂಗಸ್ವಾಮಿ ವೃತ್ತಕ್ಕೆ ಬಂದು ಬಲ ತಿರುವು ಪಡೆದು ಕುಮಾರಕೃಪಾ ರಸ್ತೆ, ರೇಸ್ ಕೋರ್ಸ್ ರಸ್ತೆಯ ಕಡೆಗೆ ಸಂಚರಿಸಬಹುದು.
ಇನ್ನು ಹಳೇ ಜೆಡಿಎಸ್ ಕಚೇರಿ, ಸಿ.ರಂಗಸ್ವಾಮಿ ವೃತ್ತದಲ್ಲಿ ನೇರವಾಗಿ ಯಮುನಾಬಾಯಿ ರಸ್ತೆಯ ಮೂಲಕ ನೆಹರು ನಗರ, ಕುಮಾರ ಪಾರ್ಕ್ ಈಸ್ಟ್-ವೆಸ್ಟ್ ಕಡೆಗೆ ಸಹ ಸಂಚರಿಸಬಹುದು. ಇನ್ನು ಭಾರಿ ವಾಹನಗಳು ಆನಂದ್ ರಾವ್ ವೃತ್ತದಿಂದ ಶೇಷಾದ್ರಿ ರಸ್ತೆಯಲ್ಲಿ ಚಲಿಸಿ ಮೌರ್ಯ ಜಂಕ್ಷನ್ ಸುಬ್ಬಣ್ಣ ವೃತ್ತದಲ್ಲಿ ಎಡ ತಿರುವು ಪಡೆದು ರೇಸ್ ಕೋರ್ಸ್ ರಸ್ತೆಯ ಮೂಲಕ ಹಳೇ ಜೆಡಿಎಸ್ ಕಚೇರಿ, ಸಿ.ರಂಗಸ್ವಾಮಿ ವೃತ್ತಕ್ಕೆ ಬಂದು ಬಲತಿರುವು ಪಡೆದು ರೇಸ್ ಕೋರ್ಸ್ ರಸ್ತೆಗೆ ತಲುಪಬಹುದು.
ಆನಂದರಾವ್ ಜಂಕ್ಷನ್ನಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿರುವುದರಿಂದ ಮೌರ್ಯ ಜಂಕ್ಷನ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications