ಗಾಳಿ ಆಂಜನೇಯಸ್ವಾಮಿ ಜಾತ್ರೆ, ಮೈಸೂರು ರಸ್ತೆ ಸಂಚಾರ ನಿಷೇಧ
ಬೆಂಗಳೂರು, ಏ.13: ಮೈಸೂರು ರಸ್ತೆಯ ಗಾಳಿ ಆಂಜನೇಯಸ್ವಾಮಿ ಜಾತ್ರೆ ಇಂದು(ಏ.13) ನಡೆಯಲಿದ್ದು, ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಶನಿವಾರದಿಂದ ಮೂರು ದಿನಗಳ ಕಾಲ ಜಾತ್ರೆ ನಡೆಯಲಿದೆ. ಏ.13ರಿಂದ 15ರವರೆಗೆ ಕಿಮ್ಕೋ ಜಂಕ್ಷನ್ ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್ ವರೆಗೆ ನಿರ್ದಿಷ್ಟ ಅವಧಿಗೆ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿದೆ.
ಮೈಸೂರು ರಸ್ತೆಯಲ್ಲಿ ನಗರದ ಕಡೆಯಿಂದ ಬರುವ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್ನಲ್ಲಿ ಎಡತಿರುವು ಪಡೆದು ಟಿಂಬರ್ ಯಾರ್ಡ್ ಬಡಾವಣೆ ಮೂಲಕ ಮುನೇಶ್ವರ ಬ್ಲಾಕ್ನ 50 ಅಡಿ ರಸ್ತೆ ಸೇರಿ ಮೈಸೂರು ರಸ್ತೆ ಕಡೆ ತೆರಳಬಹುದು.

ಅದೇ ರೀತಿ ಮೈಸೂರು ರಸ್ತೆಯಲ್ಲಿ ನಗರದ ಕಡೆಗೆ ಬರುವ ವಾಹನಗಳು ಕಿಮ್ಕೋ ಜಂಕ್ಷನ್ನಲ್ಲಿ ಎಡತಿರುವು ಪಡೆದು ಸೇತುವೆ ಮೇಲೆ ಸಂಚರಿಸಿ ಬಾಪೂಜಿನಗರ ಜಂಕ್ಷನ್ ಬಳಿ ಮೈಸೂರು ರಸ್ತೆ ಸೇರಿ ನಗರಕ್ಕೆ ಪ್ರವೇಶಿಸಬಹುದು.ಏ. 13ರಂದು ಬೆಳಗ್ಗೆ 10 ರಿಂದ 4 ಮತ್ತು ಏ.14ರ ಬೆಳಗ್ಗೆ 8ರಿಂದ ಏ.15ರ ಬೆಳಗ್ಗೆ 10 ಗಂಟೆವರೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
More From
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications