ಕೆಆರ್ ಮಾರ್ಕೆಟ್ ಮೇಲ್ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ
ಬೆಂಗಳೂರು, ಡಿಸೆಂಬರ್ 18: ಮೈಸೂರು ರಸ್ತೆಯ ಕೆಆರ್ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಮೈಸೂರು ರಸ್ತೆಯ ಬಾಲಗಂಗಾಧರನಾಥಸ್ವಾಮೀಜಿ ಮೇಲ್ಸೇತುವೆ ಮೇಲೆ ರಸ್ತೆಗುಂಡಿ ಸಮಸ್ಯೆಗೆ ಪರಿಹಾರ ಪಡೆಯಲು ಬಿಬಿಎಂಪಿ ಟೆಕ್ಕಿಟಾರ್ ಮೊರೆ ಹೋಗಿದೆ.
ಬೆಂಗಳೂರಿನ ಪ್ರಥಮ ಮೇಲ್ಸೇತುವೆ ಎಂಬ ಹೆಗ್ಗಳಿಕೆ ಹೊಂದಿರುವ ಈ ಮೇಲ್ಸೇತುವೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಪರಿಣಾಮ, ನಿರಂತರವಾಗಿ ಗುಂಡಿ ಸಮಸ್ಯೆ ಕಾಡುತ್ತಿದ್ದು, ಸಾವು-ನೋವು ಪ್ರಕರಣಗಳಿಗೆ ಸಾಕ್ಷಿಯಾಗಿದೆ.

ಠೇವಣಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ
ಈಗಾಗಲೇ ಮೇಲ್ಸೇತುವೆ ಕಾಮಗಾರಿಯನ್ನು 2014ರಲ್ಲಿ ಆರ್ಟ್ರೆ ಇನ್ಫ್ರಾ ಸ್ಟ್ರಕ್ಚರ್ ಸಂಸ್ಥೆಗೆ ವಹಿಸಲಾಗಿತ್ತು. ಈ ವೇಳೆ ಮೇಲ್ಸೇತುವೆಯನ್ನು 5 ವರ್ಷ ನಿರ್ವಹಿಸುತ್ತಿರುವ ಜವಾಬ್ದಾರಿಯನ್ನು ಕೂಡ ಸಂಸ್ಥೆಗೆ ನೀಡಲಾಗಿತ್ತು. ಆದರೆ ಸಂಸ್ಥೆ ಟೆಂಡರ್ ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಟೆಂಡರ್ ರದ್ದುಪಡಿಸಿರುವ ಅಧಿಕಾರಿಗಳು 11.13 ಲಕ್ಷ ರೂ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಕಾಮಗಾರಿ ಎಲ್ಲಿಂದ ಆರಂಭ?
ಕಾಮಗಾರಿ ಮೊದಲು ಕೆಆರ್ ಮಾರುಕಟ್ಟೆಯಿಂದ ಮೈಸೂರು ರಸ್ತೆಯ ಕಡೆಗೆ ಹೋಗುವ ಪಥದಲ್ಲಿ ದುರಸ್ತಿ ನಡೆಯಲಿದೆ. ಅದರಂತೆ ರಾಯನ್ ವೃತ್ತದವರೆಗಿನ ಮೇಲ್ಸೇತುವೆಯ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ನಂತರದಲ್ಲಿ ಮುಚ್ಚಲಾಗುತ್ತದೆ.

ಮೇಲ್ಸೇತುವೆ ಒಂದು ಭಾಗದಲ್ಲಿ ಸಂಚಾರ ನಿಷೇಧ
ಮುಂದಿನ 10 ತಿಂಗಳಲ್ಲಿ ಮುಂಬೈನಿಂದ ಟೆಕ್ಕಿಕಾರ್ ಶೀಟ್ಗಳು ಗುತ್ತಿಗೆದಾರರಿಗೆ ಲಭ್ಯವಾಗಲಿದ್ದು ಕಾಮಗಾರಿ ಆರಂಭವಾಗಲಿದೆ. ಕಾಮಗಾರಿಗಾಗಿ ಮೇಲ್ಸೇತುವೆ ಒಂದು ಭಾಗದಲ್ಲಿ ಸಂಚಾರ ನಿಷೇಧಿಸುವುದರಿಂದ ತೊಂದರೆ ಅನುಭವಿಸಬೇಕಾಗುತ್ತದೆ.

ಯಾವ್ಯಾವ ಭಾಗಕ್ಕೆ ತೊಂದರೆ
ಒಂದು ಭಾಗದಲ್ಲಿ ಸಂಚಾರ ನಿಷೇಧಿಸುವುದರಿಂದ ಕೆಆರ್ ಮಾರುಕಟ್ಟೆ, ರಾಯನ್ ವೃತ್ತ, ಚಾಮರಾಜಪೇಟೆ ಸೇರಿ ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರ ಬದಲಾವಣೆ ಮಾಡಲಾಗುತ್ತದೆ. ಇನ್ನು ಎರಡು ಬದಿಯ ನಾಲ್ಕು ಪಥದ 2.65 ಕಿ.ಮೀಟರ್ ರಸ್ತೆಗೆ ಮರು ಡಾಮಬರು ಮಾಡಲಾಗುತ್ತದೆ.

ಕಾಮಗಾರಿಗೆ ಡಾಂಬರು ಇನ್ನೂ ಬಂದಿಲ್ಲ
ಮೇಲ್ಸೇತುವೆಯ ಎರಡು ಬದಿಯ ರಸ್ತೆಗಳ ಮರುಡಾಂಬರೀಕರಣ ಕಾಮಗಾರಿ ನವೆಂಬರ್ ತಿಂಗಳಲ್ಲಿಯೇ ನಗರ ಸಂಚಾರ ಪೊಲೀಸರು ಅನುಮತಿ ನೀಡಿದ್ದು, ಪಾಲಿಕೆಯಿಂದ ಕಾರ್ಯಾದೇಶ ನೀಡಲಾಗಿದೆ. ಮುಂಬೈನಿಂದ ಬರಬೇಕಿದ್ದ ಟೆಕ್ಕಿಕಾರ್ ಗುತ್ತಿಗೆದಾರರ ಕೈಸೇರದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗುತ್ತಿದೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications