ಬೆಂಗಳೂರು: ಗಾಂಧಿ ಬಜಾರ್ನಲ್ಲಿ ವಾಹನ ಸಂಚಾರ ನಿಷೇಧಕ್ಕೆ ನಿರ್ಧಾರ
ಬೆಂಗಳೂರು,ಫೆಬ್ರವರಿ 13: ನಗರದ ಗಾಂಧಿ ಬಜಾರ್ನಲ್ಲಿ ವಾಹನ ಸಂಚಾರ ನಿಷೇಧಕ್ಕೆ ಬಿಬಿಎಂಪಿ ನಿರ್ಧಾರ ಮಾಡಿದೆ.
ಟ್ಯಾಗೋರ್ ಪಾರ್ಕ್ ವೃತ್ತದಿಂದ ರಾಮಕೃಷ್ಣ ಆಶ್ರಮದವರೆಗಿನ 700 ಮೀಟರ್ ಉದ್ದದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಎಲೆಕ್ಟ್ರಿಕ್ ವಾಹನ, ಸೈಕಲ್ ಹಾಗೂ ಪಾದಚಾರಿ ಸಂಚಾರಕ್ಕೆ ಅವಕಾಶ ನೀಡಲು ಬಿಬಿಎಂಪಿ ಮುಂದಾಗಿದೆ.
ಗಾಂಧಿ ಬಜಾರ್ ಪ್ರದೇಶವನ್ನು ಪಾದಚಾರಿ ಸ್ನೇಹಿ ಹಾಗೂ ಐತಿಹಾಸಿಕ ತಾಣವನ್ನಾಗಿ ಪರಿವರ್ತಿಸುವ ಕುರಿತು ನಗರ ಭೂ ಸಾರಿಗೆ ನಿರ್ದೇಶನಾಲಯ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿತು.

ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಮಾತನಾಡಿ, ಗಾಂಧಿ ಬಜಾರ್ ಸುತ್ತಮುತ್ತಲಿನ ಪ್ರದೇಶವನ್ನು ಪಾದಚಾರಿ ಸ್ನೇಹಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಡಲ್ಟ್ ಯೋಜನೆ ರೂಪಿಸಿದೆ.
ಈ ಭಾಗದ 700 .ಮೀ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ ಯೋಜನೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಗಾಂಧಿ ಬಜಾರ್ ರಸ್ತೆಯಲ್ಲಿ ಹೂವು,ಹಣ್ಣು,ಪೂಜಾ ಸಾಮಗ್ರಿಗಳ ಮಳಿಗೆ,ತರಕಾರಿ ಮಳಿಗೆಗಳಿವೆ.
ಇಲ್ಲಿ ಬೀದಿಬದಿ ವ್ಯಾಪಾರಿಗಳು ಹೆಚ್ಚಿದ್ದು,ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ ಎಂದರು.
ಡಲ್ಟ್ ರೂಪಿಸಿರುವ ಯೋಜನೆಯಲ್ಲಿ ದ್ವಿಚಕ್ರ ವಾಹನಗಳು, ಆಟೋ ರಿಕ್ಷಾಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಸುಸಜ್ಜಿತ ಪಾದಚಾರಿ ಮಾರ್ಗ, ಮಾರಾಟ ಮಾಡಲು ಮಳಿಗೆಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುತ್ತದೆ.
Recommended Video
ಗಾಂಧಿ ಬಜಾರ್ ರಸ್ತೆಯ ಹೂವು ಮಾರಾಟ ಮಾಡುವ ಕಟ್ಟಡದ ಬಳಿ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ನಿರ್ಮಾಣ ಮಾಡಲು ಕೂಡ ಯೋಜನೆ ರೂಪಿಸಲಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications