"ವಿಜಿ ಸಿದ್ದಾರ್ಥ ಆತ್ಮಹತ್ಯೆಯಲ್ಲ ಐಟಿ ಇಲಾಖೆ ಮಾಡಿದ ಕೊಲೆ"
ಬೆಂಗಳೂರು, ಸೆಪ್ಟೆಂಬರ್ 11 : "ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಸಾವು ಆತ್ಮಹತ್ಯೆಯಲ್ಲ. ಅದು ಐಟಿ ಇಲಾಖೆ ಮೂಲಕ ಆದ ಕೊಲೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕೃಷ್ಣ ಬೈರೇಗೌಡ ಆರೋಪಿಸಿದರು.
ಮಾಜಿ ಸಚಿವ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಒಕ್ಕಲಿಗ ಸಮುದಾಯದ ನಾಯಕ ಕೃಷ್ಣ ಬೈರೇಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಶ್ವ ಒಕ್ಕಲಿಗರ ಒಕ್ಕೂಟದಡಿ ವಿವಿಧ ಸಂಘಟನೆಗಳು ಬುಧವಾರ ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಸನವಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ಉದ್ದೇಶಿಸಿ ಕೃಷ್ಣ ಬೈರೇಗೌಡ ಮಾತನಾಡಿದರು.
"ಕೇಂದ್ರ ಸರ್ಕಾರ ಹೇಡಿ ರಾಜಕಾರಣ ಮಾಡುತ್ತಿದೆ. ಐಟಿ, ಇಡಿಯಂತಹ ಸಂಸ್ಥೆಗಳನ್ನು ನಾಯಿಯಂತೆ ಬಳಸಿಕೊಳ್ಳುತ್ತಿದೆ. ವಿಜಯ್ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ಏಕೆ ದಾಳಿ ಮಾಡಿಲ್ಲ?" ಎಂದು ಪ್ರಶ್ನೆ ಮಾಡಿದರು.
ವಿಶ್ವ ಒಕ್ಕಲಿಗರ ಒಕ್ಕೂಟದಡಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಂಸದ ವಿ. ಎಸ್. ಉಗ್ರಪ್ಪ, ಶಾಸಕಿ ಸೌಮ್ಯಾ ರೆಡ್ಡಿ ಪಾಲ್ಗೊಂಡಿದ್ದಾರೆ.
ಬಸನವಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ಆರಂಭವಾದ ಸಮಾವೇಶ ಫ್ರೀಡಂ ಪಾರ್ಕ್ ತಲುಪಿದೆ. ಸುಮಾರು 50 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications