ಬೆಂಗಳೂರು: ಶಾರುಖ್ ನಟನೆಯ ಪಠಾಣ್ ಪೋಸ್ಟರ್ಗಳನ್ನು ಸುಟ್ಟು ಪ್ರತಿಭಟನೆ ನಡೆಸಿದ ವಿಎಚ್ಪಿ ಕಾರ್ಯಕರ್ತರು
ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಶಾರುಖ್ ಖಾನ್ ಸಿನಿಮಾ ಪಠಾಣ್ ರಾಜ್ಯದಲ್ಲೂ ಬಿಡುಗಡೆಯಾಗಿದೆ. ಆದರೆ, ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಆಗಿದ್ದೇನು?
ಬೆಂಗಳೂರು, ಜನವರಿ. 25: ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರ ಪ್ರದರ್ಶನವನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿಎಚ್ಪಿ ಕಾರ್ಯಕರ್ತರು ಬಾಲಿವುಡ್ ಮತ್ತು ನಟ ಶಾರುಖ್ ಖಾನ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಜೊತೆಗೆ ಪಠಾಣ್ ಚಿತ್ರದ ಪೋಸ್ಟರ್ಗಳನ್ನು ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಶಾರುಖ್ ಖಾನ್ ಮತ್ತು ಅವರ ಸಿನಿಮಾಗಳು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿವೆ ಎಂದು ವಿಎಚ್ಪಿ ಸದಸ್ಯರು ಘೋಷಣೆಗಳನ್ನು ಕೂಗಿದ್ದಾರೆ. ಇದಲ್ಲದೆ ನಟಿ ದೀಪಿಕಾ ಪಡುಕೋಣೆ ಅವರು ಜವಹಾರ್ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು)ಗೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿ 'ತುಕ್ಡೆ ತುಕ್ಡೆ ಗ್ಯಾಂಗ್'ನ ಬೆಂಬಲಿಗರು ಎಂದು ಕಿಡಿಕಾರಿದ್ದಾರೆ.

ಹಿಂದೂಪರ ಕಾರ್ಯಕರ್ತರು ಸ್ವರೂಪ ಮತ್ತು ನರ್ತಕಿ ಚಿತ್ರಮಂದಿರಗಳಿಗೆ ನುಗ್ಗಿ ಚಿತ್ರದ ಪೋಸ್ಟರ್ಗಳನ್ನು ಹರಿದು ಹಾಕಿದರು. ಸಿನಿಮಾಗೆ ಬಹಿಷ್ಕಾರದ ಕರೆ ನೀಡಿದರೂ ಸಿನಿಮಾ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಬ್ಯಾನರ್ಗಳನ್ನು ಹರಿದು ಹಾಕಿದ್ದರು. ಚಿತ್ರಮಂದಿರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.
ಇನ್ನು, ಕಲಬುರಗಿಯಲ್ಲಿಯೂ 'ಪಠಾಣ್' ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಚಿತ್ರಮಂದಿರದ ಮೇಲೆ ಹಿಂದುಪರ ಸಂಘಟನೆಗಳ ಕೆಲ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಬೆಳಗಾವಿಯ ಥಿಯೇಟರ್ಗಳಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾನ್' ಚಿತ್ರ ಪ್ರದರ್ಶನವನ್ನು ತಡೆಯಲು ಯತ್ನಿಸಿದ ಮತ್ತು ಹಿಂಸಾಚಾರದಲ್ಲಿ ತೊಡಗಿದ್ದಕ್ಕಾಗಿ ಪೊಲಿಸರು ಕ್ರಮಕೈಗೊಂಡಿದ್ದಾರೆ.
ಬೆಂಗಳೂರು, ಕಲಬುರಗಿ, ಬೆಳಗಾವಿಯ ಸೇರಿದಂತೆ ಹಲವು ಕಡೆಗಳಲ್ಲಿ ಸುಮಾರು 30 ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿಎಚ್ಪಿಯ ಯುವ ಘಟಕವಾದ ಬಜರಂಗದಳದ ಸದಸ್ಯರು ಗುಜರಾತ್ನ ಅಹಮದಾಬಾದ್ನಲ್ಲಿ ಮಾಲ್ನಲ್ಲಿ ಪ್ರತಿಭಟನೆ ನಡೆಸಿ, ಚಿತ್ರದ ಪೋಸ್ಟರ್ಗಳನ್ನು ಹರಿದು ಹಾಕಿದರು.
'ಬೇಷರಂ ರಂಗ್' ಹಾಡು ಬಿಡುಗಡೆಯಾದ ಬಳಿಕ ದೇಶಾದ್ಯಂತ ಹಲವಾರು ಬಲಪಂಥೀಯ ಸಂಘಟನೆಗಳು 'ಪಠಾಣ್' ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಈ ಹಾಡಿನಲ್ಲಿ ದೀಪಿಕಾ ತೊಟ್ಟಿದ್ದ ಕೇಸರಿ ಬಿಕಿನಿ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಬಿಜೆಪಿ ನಾಯಕರು ಭಾರಿ ಹೇಳಿಕೆ ನಿಡುತ್ತಿದ್ದರು. ಆದರೆ, ಪ್ರಧಾನಿ ಸೂಚನೆ ನಂತರ ಅದು ನಿಂತಿದೆ ಆಗಿದೆ.
ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಚಲನಚಿತ್ರಗಳಂತಹ ಅಪ್ರಸ್ತುತ ವಿಷಯಗಳ ಬಗ್ಗೆ ಅನಗತ್ಯ ಟೀಕೆಗಳನ್ನು ಮಾಡದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಸೂಚನೆ ನೀಡಿದ್ದರು.
-
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications