ವಿಬ್ಗಯಾರ್ ಅತ್ಯಾಚಾರ ಪ್ರಕರಣ: 5 ವರ್ಷವಾದರೂ ಆರಂಭವಾಗದ ವಿಚಾರಣೆ
ಬೆಂಗಳೂರು, ಜನವರಿ 10: ಐದು ವರ್ಷಗಳ ಹಿಂದೆ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ವಿಬ್ಗಯಾರ್ ಶಾಲೆ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಇನ್ನೂ ಆರಂಭವಾಗಿಲ್ಲ.
2014ರ ಜುಲೈನಲ್ಲಿ ವರ್ತೂರಿನಲ್ಲಿರುವ ವಿಬ್ಗಯಾರ್ ಶಾಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು, ಮಾಧ್ಯಮಗಳು ಕೂಡ ವರದಿ ಮಾಡಿತ್ತು, ಇದರ ವಿರುದ್ಧವಾಗಿ ಸಾಕಷ್ಟು ಪ್ರತಿಭಟನೆಗಳು ಕೂಡ ನಡೆದಿದ್ದವು.
ಆದರೆ ಪೋಷಕರು ಕೆಲವು ದಿನಗಳ ಬಳಿಕ ಊರನ್ನೇ ಬಿಟ್ಟು ಹೋಗಿದ್ದ ಕಾರಣ ವಿಚಾರಣೆ ಅಲ್ಲಿಯೇ ನಿಂತಿತ್ತು. ಆದರೆ ಇದೀಗ ಸತತ 5 ವರ್ಷಗಳ ಬಳಿಕ ವಿಚಾರಣೆ ಮತ್ತೆ ಆರಂಭವಾಗಿದೆ.

ಈ ಘಟನೆ ಬೆಳಕಿಗೆ ಬಂದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಮರುದಿನವೇ ಈತ ನಿಜವಾದ ಆರೋಪಿ ಅಲ್ಲ ನಮ್ಮಿಂದ ತಪ್ಪಾಗಿತ್ತು ಎಂದು ಆತನನ್ನು ಪೊಲೀಸರು ಕಳುಹಿಸಿದ್ದರು. ಹಾಗೆಯೇ ಶಾಲೆಯ ಜಿಮ್ ಇನ್ಸ್ಟ್ರಕ್ಟರ್ಗಳಾದ ಲಾಲ್ಗಿರಿ ಹಾಗೂ ವಾಸಿಮ್ ಪಾಷಾ ಅವರನ್ನು ಐಪಿಸಿ ಸೆಕ್ಷನ್ 376 ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಅಪರಾಧಿಯ ಬಗ್ಗೆ ಸುಳ್ಳು ಮಾಹಿತಿ ಹಾಗೂ ದಾಖಲೆಗಳ ನಾಶಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥ ರುಸ್ತುಮ್ ಕರ್ವಾಲಾ ಅವರ ಮೇಲೆ ಸೆಕ್ಷನ್ 21, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಅತ್ಯಾಚಾರ ವಿಚಾರಣೆ ಏನಾಯಿತು?
-ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಫ್ರಂಮ್ ಸೆಕ್ಷುವಲ್ ಅಫೆನ್ಸ್ ಆಕ್ಟ್ (ಪೋಕ್ಸೊ) ಕಾಯ್ದೆಯಲ್ಲಿ ಒಂದು ವರ್ಷದೊಳಗಾಗಿ ವಿಚಾರಣೆಯನ್ನು ಪೂರ್ಣಗೊಳಿಸಬೇಕಿತ್ತು.
-ಮೂರು ವರ್ಷಗಳ ಹಿಂದೆ ಮೂರನೇ ಆರೋಪಿಯಾಗಿದ್ದ ರುಸ್ತುಮ್ ವಿಚಾರಣೆಗೆ ತಡೆಯಾಜ್ಞೆ ತಂದಿದ್ದರು
-ಕೋರ್ಟ್ಗೆ ಸಂತ್ರಸ್ತೆ ಹಾಜರಾಗದ ಕಾರಣ ಆರೋಪಿಗಳು ಜಾಮೀನು ಪಡೆದು ಬಿಡುಗಡೆಯಾಗಿದ್ದರು
-ವಸೀಮ್ ಪಾಷಾ ಅವರಿಗೆ ಕಾಲಿಗೆ ಗಾಯವಾಗಿದ್ದರಿಂದ ಡಿಸೆಂಬರ್ 11ರಂದು ನಡೆದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ.
ವಿಚಾರಣೆ ತಡ ಏಕೆ?
-ಬೆಂಗಳೂರಲ್ಲಿರುವ ಸುಮಾರು 1200 ಪೋಕ್ಸೊ ಪ್ರಕರಣಗಳ ವಿಚಾರಣೆ ಬಾಕಿ ಇದೆ
-2018ರಲ್ಲಿ 207 ಪೋಕ್ಸೊ ಪ್ರಕರಣಗಳು ವರದಿಯಾಗಿವೆ
-ಅದರಲ್ಲಿ 132 ವಿಚಾರಣೆ ಬಾಕಿ ಇದೆ ಹಾಗೂ ಕೆಲವು ತನಿಖೆ ನಡೆಯುತ್ತಿದೆ
-2014ರಲ್ಲಿ 293 ಪೋಕ್ಸೊ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ 28 ಪ್ರಕರಣಗಳು ಇತ್ಯರ್ಥವಾಗಿದೆ. 96 ಪ್ರಕರಣಗಳಿಗೆ ಸಾಕ್ಷಿ ಇಲ್ಲದೆ ಮುಚ್ಚಿಹೋಗಿದೆ. ಹಾಗೆಯೇ ವಿಬ್ಗಯಾರ್ ಶಾಲೆ ಬಾಲಕಿ ಅತ್ಯಾಚಾರ ಪ್ರಕರಣ ಸೇರಿದಂತೆ 160 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications