ವಿಬ್ಗಯಾರ್ ಶಾಲೆ ಆರಂಭ: ಆತಂಕದಲ್ಲಿ ಪೋಷಕರು
ಬೆಂಗಳೂರು, ಜು.28: ವಿಬ್ಗಯಾರ್ ಶಾಲೆ ಸೋಮವಾರದಿಂದ ಮತ್ತೆ ಆರಂಭಗೊಂಡಿದ್ದರೂ ಪೋಷಕರ ಆತಂಕ ಇನ್ನೂ ಕಡಿಮೆಯಾಗಿಲ್ಲ.
ವಿಬ್ಗಯಾರ್ ಶಾಲೆಯ 5ರಿಂದ 10ನೇ ತರಗತಿಗಳು ಸೋಮವಾರ ಆರಂಭಗೊಂಡಿದೆ. ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳು ಬುಧವಾರದಿಂದ ಆರಂಭಗೊಳ್ಳಲಿದೆ.
ಒಂದನೇ ತರಗತಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಎಚ್ಚೆತ್ತ ವಿಬ್ಗಯಾರ್ ಶಾಲೆಯ ಆಡಳಿತ ಮಂಡಳಿ ಪೋಷಕರ 11 ಬೇಡಿಕೆಗಳಿಗೆ ಒಪ್ಪಿಗೆ ನೀಡಿದೆ. ಶಾಲೆಯಲ್ಲಿ ಹೊಸದಾಗಿ 117 ಸಿಸಿ ಕ್ಯಾಮೆರಾವನ್ನು ಅಳವಡಿಸಿಕೊಂಡಿದೆ.
ಶಾಲೆ ಆರಂಭಗೊಂಡಿದ್ದರೂ ಕೆಲ ಪೋಷಕರು ಮತ್ತೆ ಮಕ್ಕಳನ್ನು ಅದೇ ಶಾಲೆಗೆ ಕಳಹಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಒಬ್ಬರು ಪೋಷಕರು ಮಗಳನ್ನು ಬೇರೆ ಶಾಲೆಗೆ ಸೇರಿಸುವುದಾಗಿ ಹೇಳಿದ್ದಾರೆ.

"ನನ್ನ ಮಗಳನ್ನು ಮತ್ತೆ ಅದೇ ಶಾಲೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ" ಎಂದು ಪೋಷಕರು ಹೇಳುತ್ತಾರೆ.[ವಿಬ್ಗಯಾರ್ ಶಾಲೆ ಆರಂಭ, ಕುಣಿಯುತ ಬಂದ ಮಕ್ಕಳು]
"ರೇಪ್ ಪ್ರಕರಣದಲ್ಲಿ ಶಾಮೀಲಾಗಿರುವ ಜನರು ಇನ್ನು ಶಾಲೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎನ್ನುವ ವಿಚಾರ ಇನ್ನೂ ಹೊರ ಬಂದಿಲ್ಲ. ಒಬ್ಬನ ಹೆಸರು ಮಾತ್ರ ಬಹಿರಂಗವಾಗಿದೆ. ಉಳಿದವರೆಲ್ಲಾ ಒಳಗಡೆ ಇರುವಾಗ ಶಾಲೆಗೆ ಮಗಳನ್ನು ಕಳುಹಿಸುವುದು ಹೇಗೆ" ಎಂದು ಅವರು ಪ್ರಶ್ನಿಸಿದ್ದಾರೆ.
ಈ ಘಟನೆಯಿಂದಾಗಿ ಪೋಷಕರು ಶಾಲೆಯ ಬಗ್ಗೆ ಚರ್ಚೆ ನಡೆಸಲು ಪ್ರತ್ಯೇಕ ಪ್ರೈವೆಟ್ ಫೇಸ್ಬುಕ್ ಪುಟವನ್ನು ತೆರೆದಿದ್ದಾರೆ. ಈ ಪುಟದಲ್ಲಿ ಬಹಳಷ್ಟು ಪೋಷಕರು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುವುದಾಗಿ ತಿಳಿಸಿದ್ದಾರೆ.
ಹಲವರು ಪೋಷಕರು ಈಗಾಗಲೇ ವಿವಿಧ ಶಾಲೆಗಳಲ್ಲಿ ಪ್ರವೇಶದ ಬಗ್ಗೆ ವಿಚಾರಣೆ ನಡೆಸಲು ಆರಂಭಿಸಿದ್ದಾರೆ. ಫೇಸ್ಬುಕ್ನಲ್ಲಿ ಪೋಷಕರ ಅಭಿಪ್ರಾಯದಂತೆ, ಈ ವರ್ಷ ವಿಬ್ಗಯಾರ್ ಶಾಲೆಯನ್ನು ತೊರೆದು ಬೇರೆ ಶಾಲೆಗೆ ಮಕ್ಕಳನ್ನು ಸೇರಿಸುವುದು ಕಷ್ಟದ ಕೆಲಸವಾದರೂ, ಮುಂದಿನ ವರ್ಷ ಬಹಳಷ್ಟು ವಿದ್ಯಾರ್ಥಿಗಳು ಬಿಬ್ಗಯಾರ್ನ್ನು ತೊರೆಯುವ ಸಾಧ್ಯತೆಯಿದೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications