ವಿಬ್ ಗಯಾರ್ ಶಾಲೆ ಮಾನ್ಯತೆ ರದ್ದತಿಗೆ ಪತ್ರ
ಬೆಂಗಳೂರು, ಜು. 19 : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ನಡೆದ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಾಲೆಯ ಮಾನ್ಯತೆ ರದ್ದುಪಡಿಸುವಂತೆ ಐಸಿಎಸ್ ಸಿ ಮಂಡಳಿಗೆ ಪತ್ರ ಬರೆದಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹಸಿನ್ ಪತ್ರಿಕಾ ಹೇಳಿಕೆ ನೀಡಿದ್ದು, ಮಿಬ್ ಗಯಾರ್ ಶಾಲೆಗೆ ನೋಟಿಸ್ ಜಾರಿಗೊಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಶಾಲೆಗೆ ನೀಡಲಾಗಿರುವ ನಿರಕ್ಷೇಪಣಾ ಪತ್ರವನ್ನು ಹಿಂದಕ್ಕೆ ಪಡೆಯಬಾರದೇಕೆ ಎಂದು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. [ಅತ್ಯಾಚಾರ ಪ್ರಕರಣ : ವರದಿ ಕೇಳಿದ ಕೇಂದ್ರ]

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಅಪರಾಧ. ಹೀಗಾಗಿ ನಿಮ್ಮ ಶಾಲೆಗೆ ನೀಡಲಾಗಿರುವ ನಿರಾಕ್ಷೇಪಣಾ ಪತ್ರವನ್ನು ಹಿಂದಕ್ಕೆ ಪಡೆದು ನಿಮ್ಮ ಶಾಲೆಯ ಮಾನ್ಯತೆ ರದ್ದುಪಡಿಸಬಾರದೇಕೆ ಎಂದು ಕಾರಣ ಕೇಳಲಾಗಿದೆ. [ಅತ್ಯಾಚಾರಿಗಳ ವಿರುದ್ಧ ಗೂಂಡಾ ಕಾಯ್ದೆ]
ಆ ಶಾಲೆಗೆ ಹೋಗಲ್ಲ : ಅತ್ಯಾಚಾರದಿಂದ ಆಘಾತಕ್ಕೆ ಒಳಗಾಗಿರುವ ಬಾಲಕಿ ಮತ್ತೆ ಆ ಶಾಲೆಗೆ ಹೋಗಲ್ಲ, ಶಿಕ್ಷಕರು ತುಂಬಾ ಕೆಟ್ಟವರು, ಶಾಲೆಗೆ ಹೋಗಲ್ಲ ಎಂದು ಕನವರಿಸುತ್ತಿದ್ದಾಳೆ ಎಂದು ಫೋಷಕರು ತಿಳಿಸಿದ್ದಾರೆ. [ಕಾಮನಬಿಲ್ಲು ಶಾಲೆಯಲ್ಲಿ 'ಕಾಮುಕ']
ಇಂದು ಪ್ರತಿಭಟನೆ : VIBGYOR HIGH ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಫೋಷಕರು ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಶಾಲೆಯ ಮುಂಭಾಗದಲ್ಲಿ ನಡೆಯಲಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications