ವಿಬ್ ಗಯಾರ್ ಪ್ರಕರಣ : ಆರೋಪಿ ಮುಸ್ತಫಾ ಬಂಧನ
ಬೆಂಗಳೂರು, ಜು. 21 : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಸ್ಕೇಟಿಂಗ್ ಸಹಾಯಕ ತರಬೇತುದಾರ ಮುಸ್ತಫಾನನ್ನು ಭಾನುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮುಸ್ತಫಾ (30) ಬಿಹಾರದ ದರ್ಭಾಂಗ್ ಜಿಲ್ಲೆಯವನಾಗಿದ್ದು, ವಿಕೃತ ವ್ಯಕ್ತಿತ್ವದ ಆತ ಈ ಹಿಂದೆ ವೈಟ್ಫೀಲ್ಡ್ ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆ ಶಾಲೆಯ ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿ ಸಿಕ್ಕಿಬಿದ್ದಿದ್ದ. ಆದ್ದರಿಂದ ಆತನನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಿಷನರ್ ರಾಘವೇಂದ್ರ ಔರಾದ್ಕರ್ ಹೇಳಿದ್ದಾರೆ.

ಬಂಧಿತ ಆರೋಪಿಯಿಂದ ಮೊಬೈಲ್ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸರ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುತ್ತದೆ ಎಂದು ಔರಾದ್ಕರ್ ಹೇಳಿದರು. [ಪೋಷಕರ ಕೂಗಿಗೆ, ಹಾರ್ಲೆ ಗುಡುಗಿಗೆ ಏಳುವುದೇ ಸರ್ಕಾರ?]
ಯಾರು ಮುಸ್ತಫಾ : ಪೋಷಕರೊಂದಿಗೆ ಸುಮಾರು 20 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಮುಸ್ತಫಾ ಆಗಮಿಸಿದ್ದ. ರಾಯಚೂರಿನ ಕಾಲೇಜು ಒಂದರಲ್ಲಿ ಬಿಪಿಇಡಿ ಓದಿದ್ದ. ವಿವಾಹಿತನಾದ ಆತ ಪತ್ನಿ ಮತ್ತು ಮೂರು ವರ್ಷದ ಮಗಳ ಜತೆ ವರ್ತೂರಿನ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. [ವಿಬ್ ಗಯಾರ್ ಮುಂದೆ ಪೋಷಕರ ಪ್ರತಿಭಟನೆ ಚಿತ್ರಗಳು]
2011ರಲ್ಲಿ ವಿಬ್ ಗಯಾರ್ ಶಾಲೆಯಲ್ಲಿ ಕೆಲಸಕ್ಕೆ ಸೇರಿದ್ದ ಆತನಿಗೆ 18 ಸಾವಿರ ಸಂಬಳ ಬರುತ್ತಿತ್ತು. ದುಬಾರಿ ಮೊತ್ತದ ಮೊಬೈಲ್ ಖರೀದಿಸಿದ್ದ ಆತ ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಶ್ಲೀಲ ವಿಡಿಯೋ ಪತ್ತೆ : ಆರೋಪಿ ಮುಸ್ತಫಾ ಲ್ಯಾಪ್ ಟಾಪ್ ನಲ್ಲಿ ಅಶ್ಲೀಲ ಛಾಯಾಚಿತ್ರ ಮತ್ತು ವಿಡಿಯೋ ಲಭ್ಯವಾಗಿವೆ. ಇಂಟರ್ ನೆಟ್ ನಿಂದ ವಿಡಿಯೋಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದ ಈತ, ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿನಿಯರ ಛಾಯಾಚಿತ್ರಗಳನ್ನು ತೆಗೆದು ಲ್ಯಾಪ್ ಟಾಪ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮುಸ್ತಫಾ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಮೊದಲ ಆರೋಪಿಯಾಗಿದ್ದಾನೆ. ಬಾಲಕಿ ಮುಸ್ತಫಾ ಸೇರಿದಂತೆ ಶಾಲೆಯ 7 ಸಿಬ್ಬಂದಿಯ ಗುರುತು ಹಿಡಿದಿದ್ದಳು. ಅವರೆಲ್ಲರನ್ನೂ ನಾಲ್ಕೈದು ದಿನಗಳಿಂದ ತೀವ್ರ ವಿಚಾರಣೆ ನಡೆಸಲಾಯಿತು. ಅಂತಿಮವಾಗಿ ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಬಾಲಕಿ ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ವಿಬ್ ಗಯಾರ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಜುಲೈ 2ರಂದು ಶಾಲೆಯಲ್ಲಿ ಅತ್ಯಾಚಾರ ನಡೆದಿತ್ತು. ಆದರೆ, ಶಾಲಾ ಆಡಳಿತ ಮಂಡಳಿ ಸದಸ್ಯರು ಈ ಸಂಗತಿಯನ್ನು ಮುಚ್ಚಿಟ್ಟಿದ್ದರು. ಘಟನೆ ನಡೆದು 12 ದಿನಗಳ ಬಳಿಕ ಬಾಲಕಿಯ ಪೋಷಕರಿಗೆ ಅತ್ಯಾಚಾರದ ಸಂಗತಿ ತಿಳಿದಿದ್ದು, ವರ್ತೂರು ಪೊಲೀಸ್ ಠಾಣೆಯಲ್ಲಿ ಜುಲೈ 14ರಂದು ದೂರು ದಾಖಲಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications