ಹಂಗಾಮಿ ಕುಲಪತಿ ಇರುವ ವಿವಿಗಳಲ್ಲಿ ಶೀಘ್ರವೇ ಕುಲಪತಿ ನೇಮಕ: ರಾಯರೆಡ್ಡಿ
ಬೆಂಗಳೂರು, ಡಿಸೆಂಬರ್ 07 : ಕಳೆದ ಎಂಟು-ಹತ್ತು ತಿಂಗಳಿನಿಂದ ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹಂಗಾಮಿ ಕುಲಪತಿಗಳಿರುವ ವಿವಿಗಳಲ್ಲಿ ಆದಷ್ಟು ಬೇಗ ವಿಸಿಗಳ ನೇಮಕ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ನನಗೆ ರಾಜ್ಯಪಾಲರ ಮೇಲೆ ಅಪಾರ ಗೌರವವಿದೆ. ನನ್ನನ್ನು ಸಿಎಂ ವಿವಿಗಳ ವಿಸಿ ಹುದ್ದೆಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆ ಕೇಳಿಲ್ಲ. ರಾಜ್ಯಪಾಲರು ನನ್ನ ವಿರುದ್ಧ ಏನು ಹೇಳಿದ್ದಾರೆ ಎಂಬುದು ತಿಳಿದಿಲ್ಲ. ಶೀಘ್ರದಲ್ಲಿ ನಾನು ಖುದ್ದಾಗಿ ಹೋಗಿ ರಾಜ್ಯಪಾಲರನ್ನು ಭೇಟಿ ಮಾಡುತ್ತೇನೆ ಎಂದರು.
ಅಂಕಪಟ್ಟಿ ದರ ನಿಗದಿ ವಿಚಾರ ಹಿನ್ನೆಲೆ ಎನ್ ಎಸ್ ಯು ಐ ಅಧ್ಯಕ್ಷರು ಕೆ.ಸಿ. ವೇಣುಗೋಪಾಲ್ ಅವರಿಗೆ ದೂರು ನೀಡಿದ್ದರು. ವೇಣುಗೋಪಾಲ್ ಅವರು ನನ್ನಿಂದ ಸ್ಪಷ್ಟನೆ ಕೇಳಿದ್ದಾರೆ ನಾನು ಸ್ಪಷ್ಟನೆ ನೀಡುತ್ತೇನೆ ಎಂದರು. ದೂರು ಕೊಡುವುದನ್ನೂ ಮುನ್ನ ಯೋಚಿಸಬೇಕು.

ಸರಿಯಾದ ದಾಖಲೆಗಳಿಲ್ಲದೆ ದೂರು ದಾಖಲಿಸಬಾರದು. ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಬಂದಿರುವುದು ಸತ್ಯಕ್ಕೆ ದೂರವಾಗಿದೆ. ಅಂಕಪಟ್ಟಿ ಮುದ್ರಣ ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸಿಂಡಿಕೇಟ್ ಸಭೆಯಲ್ಲಿ ಎಲ್ಲವೂ ನಿರ್ಧಾರವಾಗುತ್ತದೆ ಎಂದು ಹೇಳಿದರು.
ನೀಡಿದಂತಹ ದೂರಿನಲ್ಲಿ ಹೊರಗುತ್ತಿಗೆದಾರರ ಕೈವಾಡವಿದೆ ಅನಿಸುತ್ತದೆ. ನಾನು ೩೫ವರ್ಷದಿಂದ ರಾಜಕೀಯದಲ್ಲಿದ್ದೇನೆ. ಭ್ರಷ್ಟಾಚಾರ ಮಾಡಲು ರಾಜಕೀಯಕ್ಕೆ ಬಂದಿಲ್ಲ. 2016ರ ಜೂನ್ ನಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಮಂತ್ರಿಯಾದೆ. ಆಗ ತಕ್ಷಣವೇ ಸಿಂಡಿಕೇಟ್ ಸಭೆ ಕರೆದಿದ್ದೇ. ಅಂಕಪಟ್ಟಿ ಮುದ್ರಣ ಯಾವುದರಲ್ಲಿ ಮಾಡಬೇಕು ಎಂಬ ಪ್ರಶ್ನೆ ಬಂತು.
ಆಗ ಸಭೆಯಲ್ಲಿ ಒಕ್ಕೂರಲಿನಿಂದ ಲೇಖಕ್ ಬ್ರಾಂಡ್ ಚೆನ್ನಾಗಿರುತ್ತೆ ಎಂಬ ಅನಿಸಿಕೆ ಬಂತು. ಅಂದು ಎಂ.ಎಸ್.ಐ.ಎಲ್. ಗೆ ಅಂಕಪಟ್ಟಿಗೆ ಪೇಪರ್ ತರುವುದು ಎಂದು ತೀರ್ಮಾನ ಆಯ್ತು. ಎಂ.ಎಸ್.ಐ.ಎಲ್. ಸರ್ಕಾರದ ಸ್ವಾಮ್ಯದ ಸಂಸ್ಥೆ. ಎಂ.ಎಸ್.ಐ.ಎಲ್. ಖಾಸಗಿ ಸಂಸ್ಥೆ ಅಲ್ಲ. ಇದರಲ್ಲಿ ಅವ್ಯವಹಾರ ಆಗುವ ಮಾತೇ ಬರುವುದಿಲ್ಲ. ಅಂಕಪಟ್ಟಿಗಳು ಸರ್ವ ಶ್ರೇಷ್ಠ ಪೇಪರ್ ಬೇಕು ಎಂದು ನಿರ್ಧಾರಿಸಿ ಎಂ.ಎಸ್.ಐ.ಎಲ್.ಗೆ ಕೊಟ್ಟಿದ್ದೇವೆ. ಎಂ.ಎಸ್.ಐ.ಎಲ್. ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟಿದೆ.
ನಮ್ಮ ಪಾತ್ರ ಇದರಲ್ಲಿ ಏನೂ ಇಲ್ಲ. ಮುಂಬೈ ಮೂಲದ ಸಂಸ್ಥೆಗೆ ನಾವು ಗುತ್ತಿಗೆ ಕೊಟ್ಟಿಲ್ಲ. ಬಸವರಾಜ್ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯ ಮಧ್ಯೆ ಅಂಕಪಟ್ಟಿಯ ಸ್ಯಾಂಪಲ್ ಪ್ರದರ್ಶಿಸಿದರು. ಅಂಕಪಟ್ಟಿಯ ಸ್ಯಾಂಪಲ್ ಗಳನ್ನು ನಿರ್ಧರಿಸಿದ್ದು ವಿವಿಗಳು, ನಮ್ಮ ಇಲಾಖೆಯಲ್ಲ ಎಂದು ಸ್ಪಷ್ಟಪಡಿಸಿದರು.
-
ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ: NCERTಗೆ 'ಡೀಮ್ಡ್ ಯೂನಿವರ್ಸಿಟಿ' ಸ್ಥಾನಮಾನ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications