ಹಂಗಾಮಿ ಕುಲಪತಿ ಇರುವ ವಿವಿಗಳಲ್ಲಿ ಶೀಘ್ರವೇ ಕುಲಪತಿ ನೇಮಕ: ರಾಯರೆಡ್ಡಿ
ಬೆಂಗಳೂರು, ಡಿಸೆಂಬರ್ 07 : ಕಳೆದ ಎಂಟು-ಹತ್ತು ತಿಂಗಳಿನಿಂದ ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹಂಗಾಮಿ ಕುಲಪತಿಗಳಿರುವ ವಿವಿಗಳಲ್ಲಿ ಆದಷ್ಟು ಬೇಗ ವಿಸಿಗಳ ನೇಮಕ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ನನಗೆ ರಾಜ್ಯಪಾಲರ ಮೇಲೆ ಅಪಾರ ಗೌರವವಿದೆ. ನನ್ನನ್ನು ಸಿಎಂ ವಿವಿಗಳ ವಿಸಿ ಹುದ್ದೆಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆ ಕೇಳಿಲ್ಲ. ರಾಜ್ಯಪಾಲರು ನನ್ನ ವಿರುದ್ಧ ಏನು ಹೇಳಿದ್ದಾರೆ ಎಂಬುದು ತಿಳಿದಿಲ್ಲ. ಶೀಘ್ರದಲ್ಲಿ ನಾನು ಖುದ್ದಾಗಿ ಹೋಗಿ ರಾಜ್ಯಪಾಲರನ್ನು ಭೇಟಿ ಮಾಡುತ್ತೇನೆ ಎಂದರು.
ಅಂಕಪಟ್ಟಿ ದರ ನಿಗದಿ ವಿಚಾರ ಹಿನ್ನೆಲೆ ಎನ್ ಎಸ್ ಯು ಐ ಅಧ್ಯಕ್ಷರು ಕೆ.ಸಿ. ವೇಣುಗೋಪಾಲ್ ಅವರಿಗೆ ದೂರು ನೀಡಿದ್ದರು. ವೇಣುಗೋಪಾಲ್ ಅವರು ನನ್ನಿಂದ ಸ್ಪಷ್ಟನೆ ಕೇಳಿದ್ದಾರೆ ನಾನು ಸ್ಪಷ್ಟನೆ ನೀಡುತ್ತೇನೆ ಎಂದರು. ದೂರು ಕೊಡುವುದನ್ನೂ ಮುನ್ನ ಯೋಚಿಸಬೇಕು.

ಸರಿಯಾದ ದಾಖಲೆಗಳಿಲ್ಲದೆ ದೂರು ದಾಖಲಿಸಬಾರದು. ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಬಂದಿರುವುದು ಸತ್ಯಕ್ಕೆ ದೂರವಾಗಿದೆ. ಅಂಕಪಟ್ಟಿ ಮುದ್ರಣ ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸಿಂಡಿಕೇಟ್ ಸಭೆಯಲ್ಲಿ ಎಲ್ಲವೂ ನಿರ್ಧಾರವಾಗುತ್ತದೆ ಎಂದು ಹೇಳಿದರು.
ನೀಡಿದಂತಹ ದೂರಿನಲ್ಲಿ ಹೊರಗುತ್ತಿಗೆದಾರರ ಕೈವಾಡವಿದೆ ಅನಿಸುತ್ತದೆ. ನಾನು ೩೫ವರ್ಷದಿಂದ ರಾಜಕೀಯದಲ್ಲಿದ್ದೇನೆ. ಭ್ರಷ್ಟಾಚಾರ ಮಾಡಲು ರಾಜಕೀಯಕ್ಕೆ ಬಂದಿಲ್ಲ. 2016ರ ಜೂನ್ ನಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಮಂತ್ರಿಯಾದೆ. ಆಗ ತಕ್ಷಣವೇ ಸಿಂಡಿಕೇಟ್ ಸಭೆ ಕರೆದಿದ್ದೇ. ಅಂಕಪಟ್ಟಿ ಮುದ್ರಣ ಯಾವುದರಲ್ಲಿ ಮಾಡಬೇಕು ಎಂಬ ಪ್ರಶ್ನೆ ಬಂತು.
ಆಗ ಸಭೆಯಲ್ಲಿ ಒಕ್ಕೂರಲಿನಿಂದ ಲೇಖಕ್ ಬ್ರಾಂಡ್ ಚೆನ್ನಾಗಿರುತ್ತೆ ಎಂಬ ಅನಿಸಿಕೆ ಬಂತು. ಅಂದು ಎಂ.ಎಸ್.ಐ.ಎಲ್. ಗೆ ಅಂಕಪಟ್ಟಿಗೆ ಪೇಪರ್ ತರುವುದು ಎಂದು ತೀರ್ಮಾನ ಆಯ್ತು. ಎಂ.ಎಸ್.ಐ.ಎಲ್. ಸರ್ಕಾರದ ಸ್ವಾಮ್ಯದ ಸಂಸ್ಥೆ. ಎಂ.ಎಸ್.ಐ.ಎಲ್. ಖಾಸಗಿ ಸಂಸ್ಥೆ ಅಲ್ಲ. ಇದರಲ್ಲಿ ಅವ್ಯವಹಾರ ಆಗುವ ಮಾತೇ ಬರುವುದಿಲ್ಲ. ಅಂಕಪಟ್ಟಿಗಳು ಸರ್ವ ಶ್ರೇಷ್ಠ ಪೇಪರ್ ಬೇಕು ಎಂದು ನಿರ್ಧಾರಿಸಿ ಎಂ.ಎಸ್.ಐ.ಎಲ್.ಗೆ ಕೊಟ್ಟಿದ್ದೇವೆ. ಎಂ.ಎಸ್.ಐ.ಎಲ್. ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟಿದೆ.
ನಮ್ಮ ಪಾತ್ರ ಇದರಲ್ಲಿ ಏನೂ ಇಲ್ಲ. ಮುಂಬೈ ಮೂಲದ ಸಂಸ್ಥೆಗೆ ನಾವು ಗುತ್ತಿಗೆ ಕೊಟ್ಟಿಲ್ಲ. ಬಸವರಾಜ್ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯ ಮಧ್ಯೆ ಅಂಕಪಟ್ಟಿಯ ಸ್ಯಾಂಪಲ್ ಪ್ರದರ್ಶಿಸಿದರು. ಅಂಕಪಟ್ಟಿಯ ಸ್ಯಾಂಪಲ್ ಗಳನ್ನು ನಿರ್ಧರಿಸಿದ್ದು ವಿವಿಗಳು, ನಮ್ಮ ಇಲಾಖೆಯಲ್ಲ ಎಂದು ಸ್ಪಷ್ಟಪಡಿಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications