ವೀಕ್ಷಿಸಿ: ಬೆಂಗಳೂರು ಪೊಲೀಸ್ ಠಾಣೆಗಳಲ್ಲಿನ ಗ್ರಂಥಾಲಯ
ಬೆಂಗಳೂರು, ನ.8: ಬೆಂಗಳೂರು ಪೊಲೀಸ್ ಇಲಾಖೆ ಪೊಲೀಸ್ ಠಾಣೆಗಳನ್ನು ಹೆಚ್ಚು ನಾಗರಿಕ ಸ್ನೇಹಿಯನ್ನಾಗಿ ಮಾಡುವ ಕಲ್ಪನೆಯನ್ನು ಹೊಂದಿದೆ. ಹೀಗಾಗಿ ಪೊಲೀಸ್ ಠಾಣೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಲಾಗಿದೆ.
ಬೌದ್ಧಿಕವಾಗಿ ಸದೃಢವಾಗಿರಲು ಪೊಲೀಸ್ ಠಾಣೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸುವ ವಿನೂತನ ಕಲ್ಪನೆಯನ್ನು ಬೆಂಗಳೂರು ಪೊಲೀಸ್ ಇಲಾಖೆ ತಂದಿದೆ. ಈ ಕಲ್ಪನೆಯ ಹಿಂದಿನ ಮಾಸ್ಟರ್ ಮೈಂಡ್ ಉಪ ಪೊಲೀಸ್ ಆಯುಕ್ತ (ಬೆಂಗಳೂರು ದಕ್ಷಿಣ) ಕೆ ಅಣ್ಣಾಮಲೈ ಅವರು. ಅಣ್ಣಾಮಲೈ ಅವರ ಪ್ರಕಾರ, ಪೊಲೀಸ್ ಅಧಿಕಾರಿಗಳು ಬೆಳೆಯಲು ಮತ್ತು ಉತ್ತಮ ಮನುಷ್ಯರಾಗಲು ಇಂತಹ ರೀತಿಯ ಬದಲಾವಣೆ ಹೆಚ್ಚು ಮುಖ್ಯವಾಗಿದೆ.
''ಪ್ರಾಥಮಿಕವಾಗಿ ಠಾಣೆಗಳಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅವರದ್ದೇ ಆದ ಒತ್ತಡ ಇರುತ್ತದೆ. ಆದರೆ ಸಮಾಜದ ಸಮಸ್ಯೆಗಳನ್ನು ನಿಭಾಯಿಸುವ ಪ್ರತಿಯೊಬ್ಬರೂ ಸುಸ್ಥಿತಿಯಲ್ಲಿರುವ ಮಾನವರಾಗುವುದು ಮುಖ್ಯ. ನಮಗೆ ಸಾಕಷ್ಟು ಕರೆಗಳು ಬರುತ್ತಿವೆ ಮತ್ತು ಈಗಾಗಲೇ ಅನೇಕ ವ್ಯಕ್ತಿಗಳು ಮತ್ತು ಸಂಸ್ಥೆಗಳು ಪುಸ್ತಕಗಳನ್ನು ದಾನ ಮಾಡಲು ಮುಂದೆ ಬಂದಿವೆ. ನಮ್ಮ ಪುಸ್ತಕ ಬ್ಯಾಂಕ್ಗಳು ಬೆಳೆಯುತ್ತಿವೆ. ಇದರಿಂದ ನಮ್ಮ ಗ್ರಂಥಾಲಯಗಳು ಶೀಘ್ರದಲ್ಲೇ ಸ್ವಾವಲಂಬಿಯಾಗುತ್ತವೆ'' ಎಂದು ಅಣ್ಣಾಮಲೈ ಹೇಳಿದರು.

ಜಯನಗರ ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು ಪುಸ್ತಕಗಳಿವೆ. ಈ ಹಿಂದೆ ಬೆಂಗಳೂರಿನ ಪ್ರತಿ ಪೊಲೀಸ್ ಠಾಣೆಗಳಲ್ಲಿ ಕೇವಲ 20 ಪುಸ್ತಕಗಳೊಂದಿಗೆ ಪ್ರಾರಂಭವಾದ ಗ್ರಂಥಾಲಯವು ಈಗ ಒಟ್ಟು 700 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿದೆ. ಉಳಿದ ಪೊಲೀಸ್ ಠಾಣೆಗಳಿಗೆ ಹೋಲಿಸಿದರೆ ಜಯನಗರ ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು ಪುಸ್ತಕಗಳಿವೆ. ಪ್ರತಿಯೊಂದು ಗ್ರಂಥಾಲಯವು ಕಾನೂನು ಮತ್ತು ಸುವ್ಯವಸ್ಥೆ, ಇತಿಹಾಸ, ಕಾದಂಬರಿ ಮತ್ತು ಕಾಲ್ಪನಿಕವಲ್ಲದ ಮತ್ತು ಸ್ಪೂರ್ತಿದಾಯಕ ಆತ್ಮಚರಿತ್ರೆಗಳನ್ನು ಒಳಗೊಂಡಂತೆ ವಿವಿಧ ಪ್ರಕಾರಗಳ ಪುಸ್ತಕಗಳನ್ನು ಒಳಗೊಂಡಿದೆ.
ಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಾತನಾಡಿ, ನಮ್ಮ ಗ್ರಂಥಾಲಯದಲ್ಲಿ ಈಗ ಸುಮಾರು 300 ಪುಸ್ತಕಗಳಿವೆ. ಇದು ನಮಗೆ ಬೌದ್ಧಿಕವಾಗಿ ಬೆಳೆಯಲು ಸಹಾಯ ಮಾಡುತ್ತದೆ. ಅದು ಈಗ ನಮ್ಮ ನೆಚ್ಚಿನ ಕಾಲಕ್ಷೇಪವಾಗಿದೆ. ಜಿಲ್ಲಾಧಿಕಾರಿಯವರು ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುಸ್ತಕಗಳು ಒತ್ತಡವನ್ನು ನಿವಾರಿಸುತ್ತದೆ. ಆದ್ದರಿಂದ ನಿರಂತರವಾಗಿ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳಿಗೆ ಇದು ಒಳ್ಳೆಯದು ಎಂದು ಕೆಲವು ನಾಗರಿಕರು ಸಂತಸ ವ್ಯಕ್ತಪಡಿಸಿದ್ದಾರೆ.
We have opened a library across each of the 17 police stations of South Division Bengaluru city police. We have started with 20 books each. The aim is to make cops become more learned, smarter & well rounded. Please consider donating as well if you feel so. @CPBlr @BlrCityPolice pic.twitter.com/9pMLXSHFZg
— P Krishnakant IPS (@DCPSouthBCP) June 1, 2019
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು











Click it and Unblock the Notifications