Video: ಸಿಲಿಕಾನ್ ಸಿಟಿಯಲ್ಲಿ 72 ವರ್ಷದ ವೃದ್ಧೆಯ ಸರಗಳ್ಳತನ
ಬೆಂಗಳೂರು, ಜುಲೈ 20: ಸಿಲಿಕಾನ್ ಸಿಟಿಯಲ್ಲಿ ಇಷ್ಟುದಿನ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಟ ಆಯಿತು. ಇಷ್ಟು ದಿನ ಸೈಲೆಂಟ್ ಆಗಿದ್ದ ಸರಗಳ್ಳರು ಕೊವಿಡ್-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದಂತೆ ತಮ್ಮ ಕೈಚಳಕ ತೋರುವುದಕ್ಕೆ ಶುರು ಮಾಡಿದ್ದಾರೆ.
Recommended Video

ಬೆಂಗಳೂರಿನಲ್ಲಿ ಹಾಡಹಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ಧೆಯ ಸರವನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ವಿಜಯನಗರ ಎರಡನೇ ಕ್ರಾಸ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಸರವನ್ನು ಕಸಿದು ಪರಾರಿಯಾಗಿದ್ದಾರೆ.
72 ವರ್ಷದ ವೃದ್ಧೆ ಇಂದಿರಮ್ಮ ಎಂಬುವವರಿದೆ ಸೇರಿದ 35 ಗ್ರಾಂ ಚಿನ್ನದ ಸರವನ್ನು ಕಸಿದುತೊಂಡು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಕಲೆ ಹಾಕುತ್ತಿದ್ದಾರೆ. ಈ ವೇಳೆ ಸರಗಳ್ಳತನದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರಿನಲ್ಲಿ ಜುಲೈ 01ರಂದು ಸರಣಿ ಸರಗಳ್ಳತನ:
ಕಳೆದ ಜುಲೈ 1ರಂದು ಸಿಲಿಕಾನ್ ಸಿಟಿಯಲ್ಲಿ ಸರಣಿ ಸರಗಳ್ಳತನ ನಡೆದಿರುವ ಬಗ್ಗೆ ವರದಿಯಾಗಿತ್ತು. ಸರ್ಜಾಪುರ, ಆಡುಗೋಡಿ, ಸೂಲಿಬೆಲೆ, ತಿರುಮಲ ಶೆಟ್ಟಿ ಹಳ್ಳಿ, ಹೊಸಕೋಟೆ, ದೇವನಹಳ್ಳಿ ಸೇರಿದಂತೆ ಒಟ್ಟು 9 ಕಡೆಗಳಲ್ಲಿ ಸರಗಳ್ಳತನ ನಡೆದಿರುವುದು ವರದಿಯಾಗಿದೆ. ಕಳೆದ ಎರಡು ದಿನಗಳಲ್ಲಿ ಸುಮಾರು ಒಂದು ಕೆಜಿಯಷ್ಟು ಚಿನ್ನದ ಆಭರಣಗಳನ್ನು ಕದ್ದಿರುವ ಬಗ್ಗೆ ಅಂದಾಜಿಸಲಾಗಿತ್ತು. ಈ ಸರಣಿ ಸರಗಳ್ಳತನದ ಹಿಂದೆ ಕುಖ್ಯಾತ ಭವಾಡಿಯಾ ಗ್ಯಾಂಗ್ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications