'ಲೋಕದ ಕಾಳಜಿ ಮಾಡುತಿನಂತಿ ನಿಂಗ್ಯಾರ್ ಬ್ಯಾಡಂತಾರಾ ಮಾಡಪ್ಪ ಚಿಂತಿ' ಹಾಡಿಗೆ ಕೃಷ್ಣ ಬೈರೇಗೌಡ ನೃತ್ಯ: ವಿಡಿಯೋ
ಬೆಂಗಳೂರು ಜನವರಿ 15: ಎರಡು ದಿನಗಳ ಕಾಲ ಜಕ್ಕೂರು ಕ್ರೀಡಾಂಗಣದಲ್ಲಿ ನಡೆದ ಸುಗ್ಗಿ-ಹುಗ್ಗಿ 2024 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಅವರ ಪತ್ನಿ ಮೀನಾಕ್ಷಿ ಬೈರೇಗೌಡ ಅವರು ಗಾಯಕ ರಘು ದೀಕ್ಷಿತ್ ಅವರ 'ಲೋಕದ ಕಾಳಜಿ ಮಾಡುತಿನಂತಿ ನಿಂಗ್ಯಾರ್ ಬ್ಯಾಡಂತಾರಾ ಮಾಡಪ್ಪ ಚಿಂತಿ' ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದರು.
ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, "ನಾವಿಂದು ಐಟಿ ಸಿಟಿ ಬೆಂಗಳೂರಿನಲ್ಲಿದ್ದೇವೆ. ಬದುಕನ್ನು ಕಟ್ಟಿಕೊಳ್ಳುವುದಕ್ಕಾಗಿ ಈ ಕಾಂಕ್ರೀಟ್ ಕಾಡಿನಲ್ಲಿ ನೆಲೆಗೊಂಡಿದ್ದೇವೆ. ಆದರೆ, ನಮ್ಮ ಮೂಲ ಹಳ್ಳಿಗಳಲ್ಲಿವೆ ಎಂಬುದನ್ನು ನಾವು ಮರೆಯಬಾರದು" ಎಂದರು. ಭೂಮಿ- ಪ್ರಕೃತಿಯನ್ನು ಆರಾಧಿಸುವ ನಮ್ಮ ಮೂಲ ಸಂಸ್ಕೃತಿಯನ್ನು ಉಳಿಸುವ ಹಾಗೂ ಮುಂದಿನ ಪೀಳಿಗೆಗೆ ದಾಟಿಸುವ ಸಲುವಾಗಿಯೇ ಸುಗ್ಗಿ-ಹುಗ್ಗಿ 2024 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ನಗರ ಭಾಗದ ಇಂದಿನ ಮಕ್ಕಳಿಗೆ ನಮ್ಮ ಹಳ್ಳಿ ಹೇಗಿರುತ್ತೆ? ನಮ್ಮ ಹಳ್ಳಿಯ ಬದುಕಿನ ಖುಷಿ ಎಂತಾದ್ದು? ಭತ್ತ ರಾಗಿಯ ತೆನೆ ಹೇಗಿರುತ್ತದೆ? ಎಂಬ ಕುರಿತು ತಿಳುವಳಿಕೆ ಕಡಿಮೆ. ಹೀಗಾಗಿ ನಮ್ಮ ಮಕ್ಕಳಿಗೆ ಹಳ್ಳಿಯ ಬದುಕಿನ ಶ್ರೀಮಂತಿಕೆಯನ್ನು ಪರಿಚಯಿಸುವ ಮತ್ತು ಆಮೂಲಕ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಪ್ರಯತ್ನವೇ ಈ ಸುಗ್ಗಿ-ಹುಗ್ಗಿ ಕಾರ್ಯಕ್ರಮ ಎಂದು ಅವರು ಅಭಿಪ್ರಾಯಪಟ್ಟರು.
ಸಂಕ್ರಾಂತಿ ಯಾವುದೇ ಧರ್ಮದ ಹಬ್ಬವಲ್ಲ ಬದಲಾಗಿ ಇದು ಮಣ್ಣಿನ ಹಬ್ಬ, ಎಲ್ಲಾ ರೈತರ ಹಬ್ಬ. ಈ ಹಬ್ಬಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಹಬ್ಬವನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸಬೇಕು. ಆ ಮೂಲಕ ನಮಗೆ ಅನ್ನ ನೀರು ಕೊಡುವ ಭೂಮಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.
ಅಲ್ಲದೆ, ಈ ಉತ್ತರಾಯಣ ಎಲ್ಲರ ಬದುಕಲ್ಲೂ ಶಾಂತಿ ಸುಖ ಮತ್ತು ನೆಮ್ಮದಿ ನೀಡಲಿ. ಎಲ್ಲರ ಬದುಕಲ್ಲೂ ಕತ್ತಲು ಸರಿದು ಬೆಳಕು ಹರಿಯಲಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶುಭ ಹಾರಿಸಿದರು. ಸಮಾರಂಭದಲ್ಲಿ ಕಳೆದ ಎರಡು ದಿನಗಳಿಂದ ರಂಗೋಲಿ, ಚಿತ್ರಕಲೆ ಹಾಗೂ ಜನಪದ ನೃತ್ಯ ಸ್ಫರ್ಧೆಯಲ್ಲಿ ಪಾಲ್ಗೊಂಡ ವಿಜೇತ ವಿದ್ಯಾರ್ಥಿಗಳು ಹಾಗೂ ನೃತ್ಯಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಆಯೋಜಿಸಲಾಗಿದ್ದ ಭೂಮ್ತಾಯಿ ಬಳಗ ಹಾಗೂ ಖ್ಯಾತ ಗಾಯಕ ರಘು ದೀಕ್ಷಿತ್ ಅವರ ಜನಪದ ಸಂಗೀತ ಕಾರ್ಯಕ್ರಮ ಅಪಾರ ಜನ ಮೆಚ್ಚುಗೆಗೆ ಪಾತ್ರವಾಯಿತು.
ಗಮನ ಸೆಳೆದ ಜನಪದ ನೃತ್ಯ ಕಾರ್ಯಕ್ರಮ
ಸುಗ್ಗಿ-ಹುಗ್ಗಿ 2024 ಕಾರ್ಯಕ್ರಮಕ್ಕಾಗಿ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ್ದ 12 ಜನಪದ ನೃತ್ಯ ತಂಡ ನೀಡಿದ ಪ್ರದರ್ಶನ ಜನ ಗಮನ ಸೆಳೆಯಿತು. ವೀರಗಾಸೆ, ಕಂಸಾಳೆ, ಹುಲಿ ಕುಣಿತ, ಸೋಮನ ಕುಣಿತ ಸೇರಿದಂತೆ ಎಲ್ಲಾ 12 ಪ್ರಕಾರದ ಜನಪದ ನೃತ್ಯ ತಂಡಗಳನ್ನು ನಾಡಿನ ಎಲ್ಲಾ ಮೂಲೆಗಳಿಂದಲೂ ಆಹ್ವಾನಿಸಲಾಗಿತ್ತು. ಉಪಾಂತ್ಯ ದಿನವಾದ ಭಾನುವಾರ ಬೆಳಗ್ಗಿನಿಂದಲೂ ಈ ತಂಡಗಳು ನೀಡಿದ ನೃತ್ಯ ಪ್ರದರ್ಶನ ನಗರ ಭಾಗದ ಜನರಿಗೆ ಹೊಸ ಅನುಭವ ನೀಡಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications