ಬದಲಾಗಿದ್ದಾರಪ್ಪೋ ಕಳ್ಳರು, ಸಿಸಿಟಿವಿ ಕ್ಯಾಮೆರಾ ಇದ್ದರೂ ಹಣ ಎಗರಿಸಿದರು
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ), ಮಾರ್ಚ್ 10 : ಈಗ ಕಳ್ಳರ ಕಳ್ಳತನದ ವಿಧಾನವೇ ಬದಲಾಗಿದೆ. ಯಾರೂ ಇಲ್ಲದ ಸಮಯ ನೋಡಿ ಕಳ್ಳತನಕ್ಕಿಳಿಯುತ್ತಿದ್ದವರು ಹಾಡಹಗಲೇ, ಜನಸಂದಣಿ ಇರುವ ಪ್ರದೇಶದಲ್ಲೇ ಕಳ್ಳತನ ಆರಂಭಿಸಿದ್ದಾರೆ. ಇನ್ನು ಈ ಖದೀಮರಿಗೆ ಸಿಸಿ ಟಿವಿ ಕ್ಯಾಮೆರಾ ಇದ್ದರೂ ಡೋಂಟ್ ಕೇರ್. ಪೊಲೀಸರೇ ಇದ್ರು ಚಿಂತೆಯಿಲ್ಲ.
ಇಲ್ಲೊಂದು ವರದಿ ಇದೆ. ಕಳ್ಳತನ ನಡೆದ ವರದಿ. ಶೋ ರೂಮ್ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಸುತ್ತುವರೆದ ನಾಲ್ವರು ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ದುಡ್ಡು ಕದ್ದು ಪರಾರಿಯಾಗಿದ್ದಾರೆ. ಈ ದೃಶ್ಯಗಳು ಸೆರೆಯಾಗಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ.
ಇಲ್ಲಿನ ಕೋಲಾರ ರಸ್ತೆಯ ಹೋಂಡಾ ಶೋ ರೂಂ ಮುಂದೆ ಈಚೆಗೆ ನಾಲ್ವರು ಕಳ್ಳರು ಬಂದು, ಬೈಕ್ ನಲ್ಲಿದ್ದ ದುಡ್ಡನ್ನು ಎಗರಿಸಿದ್ದಾರೆ. ಶೋ ರೂಮ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದವರಿಗೆ ಸೇರಿದ ದುಡ್ಡು ಇದಾಗಿದ್ದು, ಬೈಕ್ ನಲ್ಲಿಟ್ಟು ಶೋ ರೂಮ್ ಗೆ ಹೋಗಿ ಹೊರಗಡೆ ಬರುವಷ್ಟರಲ್ಲಿ ದುಡ್ಡು ಎಗರಿಸಿದ್ದಾರೆ.

ಕಳ್ಳರ ಕೈಚಳಕದ ಸಂಪೂರ್ಣ ವಿಡಿಯೋ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಾಡಹಗಲೇ ಜನ ಜಂಗುಳಿ ಪ್ರದೇಶದಲ್ಲಿ ಕಳ್ಳತನವಾಗಿರುವುದು ವಿಜಯಪುರ ಜನತೆಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಹಾಡಹಗಲೇ ಬೈಕ್ ನಲ್ಲಿದ್ದ ಹಣವನ್ನು ಕಳ್ಳರು ಎಗರಿಸಿದ್ದು, ವಿಜಯಪುರ ಜನತೆ ನಿದ್ದೆಗೆಡಿಸಿರುವುದು ಸುಳ್ಳಲ್ಲ. ಇನ್ನಾದರೂ ಪೊಲೀಸರ ಎಚ್ಚೆತ್ತು, ಖದೀಮರ ಹೆಡೆಮುರಿ ಕಟ್ಟಬೇಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications