ವಿಡಿಯೋ: ಬೆಂಗಳೂರಿನಲ್ಲಿ BMTC ಸೈಡ್ ಹೊಡೆದರೆ ಬೀಳುತ್ತಾ ಗೂಸಾ?
Recommended Video
ಬೆಂಗಳೂರು, ಜನವರಿ.31: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ನ್ನು ಸೈಡ್ ಹಾಕಿದ್ರೆ ವಾಹನ ಸವಾರರಿಗೆ ಹಿಗ್ಗಾಮುಗ್ಗಾ ಗೂಸಾ ಬೀಳುತ್ತಾ. ಈ ಮಾತು ಸತ್ಯ ಎನ್ನುವುದಕ್ಕೆ ಇತ್ತೀಚಿಗೆ ಬೆಂಗಳೂರಿನಲ್ಲೇ ನಡೆದ ಒಂದೇ ಒಂದು ಘಟನೆ ಸಾಕ್ಷಿಯಾಗುತ್ತದೆ.
ಕಳೆದ ಜನವರಿ.30 ಗುರುವಾರ ನಡುರಸ್ತೆಯಲ್ಲೇ ಬೈಕ್ ಸವಾರನ ಮೇಲೆ ಬಿಎಂಟಿಸಿ ಚಾಲಕನೊಬ್ಬ ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನ ಮಹದೇವಪುರದ ಬಳಿ ನಡೆದಿದೆ. ಚಾಲಕ ತೋರಿದ ದುರ್ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಸಿಲ್ಕ್ ಬೋರ್ಡ್ ನಿಂದ ಹೆಬ್ಬಾಳ ಮಾರ್ಗವಾಗ ಸಂಚರಿಸುತ್ತಿದ್ದ KA 57 F822 ಸಂಖ್ಯೆಯ ಬಿಎಂಟಿಸಿ ವೋಲ್ವೋ ಬಸ್ ನ್ನು ಬೈಕ್ ಸವಾರನೊಬ್ಬ ಹಿಂದಕ್ಕೆ ಹಾಕಿದ್ದಾರೆ. ಲೈನ್ ಕ್ರಾಸ್ ಮಾಡಿದ ಎಂಬ ಕಾರಣಕ್ಕೆ ನಡುರಸ್ತೆಯಲ್ಲೇ ಬೈಕ್ ಸವಾರನ ಮೇಲೆ ಬಸ್ ಚಾಲಕ ಹಲ್ಲೆ ನಡೆಸಿದ್ದಾನೆ.
|
ವಿಡಿಯೋ ಚಿತ್ರೀಕರಿಸಿದ ಬಸ್ ಪ್ರಯಾಣಿಕ ಹಮೀದ್
ಮಹದೇವಪುರ ಬಳಿ KA53 EF 7538 ಬೈಕ್ ಸವಾರನ ಮೇಲೆ ಬಿಎಂಟಿಸಿ ವೋಲ್ವೋ ಬಸ್ ಚಾಲಕ ಹಲ್ಲೆ ನಡೆಸಿರುವ ದೃಶ್ಯವನ್ನು ಬಸ್ ನಲ್ಲೇ ಕುಳಿತಿದ್ದ ಹಮೀದ್ ಎಂಬ ವ್ಯಕ್ತಿಯು ವಿಡಿಯೋ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ನೀನ್ಯಾರೋ ಎಂದು ಆವಾಜ್ ಹಾಕಿದ ಚಾಲಕ
ಇನ್ನು, ನಡುಬೀದಿಯಲ್ಲೇ ಸಾರ್ವಜನಿಕವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು ತಪ್ಪಲ್ಲವೇ ಎಂದು ಪ್ರಶ್ನೆ ಮಾಡಿದ್ದಕ್ಕೆ ಪ್ರಯಾಣಿಕ ಹಮೀದ್ ಗೆ ಬಸ್ ಚಾಲಕ ಆವಾಜ್ ಹಾಕಿದ್ದಾನೆ. ಅದನ್ನೆಲ್ಲ ಕೇಳೋದಕ್ಕೆ ನೀನ್ಯಾರೋ, ಕನ್ನಡದಲ್ಲಿ ಮಾತಾಡೋ ಮೊದಲು ಎಂದು ದರ್ಪ ತೋರಿದ್ದಾನೆ. ಈ ದೃಶ್ಯ ಕೂಡಾ ವಿಡಿಯೋದಲ್ಲಿ ಸೆರೆಯಾಗಿದೆ.

ಚಾಲಕನ ವಿರುದ್ಧ ತನಿಖೆಗೆ ಆದೇಶಿಸಿದ ಸಿ.ಶಿಖಾ
ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಬಿಎಂಟಿಸಿ ಬಸ್ ಚಾಲಕನನ್ನು ಸಂತೋಷ್ ಬಡಿಗೇರ್ ಎಂದು ಗುರುತಿಸಲಾಗಿದ್ದು, ಯಶವಂತಪುರ ಡಿಪೋ ವ್ಯಾಪ್ತಿಯ ನೌಕರ ಎಂದು ತಿಳಿದು ಬಂದಿದೆ. ಟ್ರೈನಿ ಡ್ರೈವರ್ ಆಗಿರುವ ಸಂತೋಷ್ ನನ್ನು ಅಮಾನತುಗೊಳಿಸಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಬಿಎಂಟಿಸಿ ಕಾರ್ಯನಿರ್ವಾಹಕ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ ಯಾವಾಗ?
ಬೆಂಗಳೂರಿನಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಬೇಕಿದೆ. ನಡುರಸ್ತೆಯಲ್ಲೇ ಬಿಎಂಟಿಸಿ ಚಾಲಕನೊಬ್ಬ ಬೈಕ್ ಸವಾರ ಮೇಲೆ ಈ ರೀತಿಯಾಗಿ ಹಲ್ಲೆ ನಡೆಸುತ್ತಾನೆ. ಹೀಗೆ ಆದರೆ, ರಾಜ್ಯ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆಯ ಗತಿಯೇನು. ಈ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಹಮೀದ್ ಮನವಿ ಮಾಡಿಕೊಂಡಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications