ಅಂತಾರಾಷ್ಟೀಯ ಯೋಗ ದಿನಾಚರಣೆಗೂ ಮುನ್ನ ಗಿನ್ನೆಸ್ ವಿಶ್ವ ದಾಖಲೆ
ಬೆಂಗಳೂರು, ಜೂನ್ 18: ಅಂತಾರಾಷ್ಟೀಯ ಯೋಗ ದಿನಾಚರಣೆ (ಜೂನ್ 21) ಗೂ ಮುನ್ನ ಕರ್ನಾಟಕದ ಯೋಗಪಟುಗಳು ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಜೂನ್ 18ರಂದು 3000 ಯೋಗಿಗಳು 30 ಸೆಕೆಂಡುಗಳ ಕಾಲ ಶೀರ್ಷಾಸನಕ್ಕೆ ವಿಧಾನಸೌಧ ಮುಂಭಾಗ ವೇದಿಕೆಯಾಗಿತ್ತು.
ಆಯುಷ್ ಇಲಾಖೆ, ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯ, ಆರ್ಟ್ ಆಫ್ ಲಿವಿಂಗ್, ಪತಂಜಲಿ, ಯೋಗ ಗಂಗೋತ್ರಿ, ವಿಜಯವಾಣಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಧಾನಸೌಧದ ಮುಂಭಾಗ ಬೆಳಗ್ಗೆ 6.30 ರಿಂದ 8.30ರ ಅವಧಿಯಲ್ಲಿ ಕಾರ್ಯಕ್ರಮಕ್ಕೆ ರಾಜ್ಯಪಾಲ ವಜುಭಾಯಿ ವಾಲ ಅವರು ಚಾಲನೆ ನೀಡಿದರು.
Thousands of volunteers gather at Vidhan soudha to perform 30 seconds Sheershasna for guiness book of world records and also donate organs pic.twitter.com/Ki9ogWwRvn
— SHALINI RAJNEESH (@shalinirajnish) June 18, 2017
ಇದಕ್ಕೂ ಮುನ್ನ ರಾಜಭವನದಿಂದ ವಿಧಾನಸೌಧದ ತನಕ 'ಯೋಗ ನಡಿಗೆ' ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ, ಆರೋಗ್ಯ ಸಚಿವ ರಮೇಶ್ ಕುಮಾರ್, ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಸ್ ಮುಂತಾದವರು ಪಾಲ್ಗೊಂಡಿದ್ದರು.
ಕಳೆದ ವರ್ಷ ಚೆನ್ನೈನ ಮರೀನಾ ಬೀಚ್ ನಲ್ಲಿ ಸುಮಾರು 646 ಮಂದಿ ಏಕಕಾಲಕ್ಕೆ ಶೀರ್ಷಾಸನ ಮಾಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದರು ಈ ದಾಖಲೆಯನ್ನು ಈಗ ಕರ್ನಾಟಕದ ಯೋಗಪಟುಗಳು ಮುರಿದಿದ್ದಾರೆ.
ಇನ್ನೊಂದೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ರೇಸ್ ಕೋರ್ಸ್ ಆವರಣದಲ್ಲಿ 60 ಸಾವಿರಕ್ಕೂ ಹೆಚ್ಚು ಮಂದಿ ಸಾಮೂಹಿಕ ಯೋಗ ಪ್ರದರ್ಶನ ನೀಡುವುದರೊಂದಿಗೆ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications