ಎಂಇಎಸ್ ಪುಂಡಾಟ ಖಂಡಿಸಿ ವಿಧಾನಸೌಧ ಚಲೋ
ಬೆಂಗಳೂರು, ಜು. 28 : ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಎಂಇಎಸ್ ಪುಂಡಾಟಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸೋಮವಾರ ವಿಧಾನಸೌಧ ಚಲೋ ಹಮ್ಮಿಕೊಂಡಿದೆ. ಅತ್ತ ಬೆಳಗಾವಿ ಬಂದ್ ಗೆ ಎಂಇಎಸ್ ಕರೆ ನೀಡಿದೆ. ಎಂಇಎಸ್ ಪುಂಡಾಟಿಕೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಮುಂಭಾಗದಿಂದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮರೆವಣಿಗೆ ಆರಂಭಿಸಲಿದ್ದು, ವಿಧಾನಸೌಧಕ್ಕೆ ತೆರಳಲಿದ್ದಾರೆ. ಅತ್ತ ಬೆಳಗಾವಿ ಬಂದ್ ಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಕರೆ ನೀಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ವಿಧಾನಸೌಧ ಚಲೋ ಕುರಿತು ಮಾಹಿತಿ ನೀಡಿದ್ದು, ಎಂಇಎಸ್ ಕಾರ್ಯಕರ್ತರು ಕನ್ನಡಿಗರನ್ನು ಆಗಾಗ್ಗೆ ಕೆಣಕುತ್ತಿದ್ದು, ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಎಂಇಎಸ್ ಶಾಸಕರು ಮತ್ತು ಕಾರ್ಯರ್ತರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಮತ್ತು ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. [ನಿಲ್ಲದ ಮರಾಠಿ ಪುಂಡಾಟಿಕೆ, ಪ್ರದೇಶ ಪ್ರಕ್ಷುಬ್ಧ]
ಪರಿಸ್ಥಿತಿ ಹೇಗಿದೆ : ಯಳ್ಳೂರು ಗ್ರಾಮದಲ್ಲೀಗ ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶಾಂತಿಪಾಲನೆಗೆ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ಕಳುಹಿಸಿಕೊಟ್ಟಿದೆ. [ಬೆಳಗಾವಿಯಲ್ಲಿ ಏನಾಗುತ್ತಿದೆ?]
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ ಒಳಗೊಂಡಂತೆ ಹಿರಿಯ ಅಧಿಕಾರಿಗಳು ಹೆಚ್ಚಿನ ಬಲ, ವಾಹನಗಳೊಂದಿಗೆ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಜತೆಗೆ ಮರಾಠಿ ಭಾಷಿಕ ಬಾಹುಳ್ಯದ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. [ನಾರಾಯಣ ಗೌಡರ ಸಂದರ್ಶನ ಓದಿ]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications