ವಿದ್ವತ್ ಡಿಸ್ಚಾರ್ಜ್ ಸಮರಿ ಸೋರಿಕೆ: ಮಲ್ಯ ಆಸ್ಪತ್ರೆಯಿಂದ ತನಿಖೆ
Recommended Video

ಬೆಂಗಳೂರು, ಮಾರ್ಚ್ 17: ಮೊಹಮ್ಮದ್ ನಲಪಾಡ್ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್ನ ಡಿಸ್ಚಾರ್ಜ್ ಸಮರಿ ಸೋರಿಕೆ ಆದ ಬಗ್ಗೆ ತನಿಖೆ ನಡೆಸಲು ವಿಠಲ್ ಮಲ್ಯ ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ವಿದ್ವತ್ನ ಡಿಸ್ಚಾರ್ಜ್ ಸಮರಿ ಸೋರಿಕೆ ಆಗಿದ್ದು, ಮೊಹಮ್ಮದ್ ನಲಪಾಡ್ ತಂದೆ ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಅವರು ಡಿಸ್ಚಾರ್ಜ್ ಸಮರಿಯ ಚಿತ್ರಗಳನ್ನು ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಮಾಧ್ಯಮಗಳು ಈ ಬಗ್ಗೆ ಸುದ್ದಿ ಪ್ರಕಟಿಸಿದ್ದವು ಮತ್ತು ಪೊಲೀಸರು ಕೂಡಾ ಈ ಬಗ್ಗೆ ಆಸ್ಪತ್ರೆ ಆಡಳಿತವನ್ನು ಪ್ರಶ್ನೆ ಮಾಡಿದ್ದರು. ಹ್ಯಾರಿಸ್ ಅವರು ತಮ್ಮ ಪ್ರಭಾವ ಬಳಸಿ ಆಸ್ಪತ್ರೆ ವರದಿಯನ್ನು ದುರ್ಬಲಗೊಳಿಸಿದ್ದಾರೆ ಎಂದು ಸಹ ಆರೋಪಗಳು ಕೇಳಿಬಂದಿತ್ತು. ಮಲ್ಯ ಆಸ್ಪತ್ರೆಯ ವಿಶ್ವಾಸಾರ್ಹತೆ ಬಗ್ಗೆ ಕೂಡಾ ಪ್ರಶ್ನೆ ಮಾಡಲಾಗಿತ್ತು.

ವಿದ್ವತ್ ಡಿಸ್ಚಾರ್ಜ್ ಸಮರಿ ಸೋರಿಕೆ ಕುರಿತು ತನಿಖೆ ಮಾಡುವ ಬಗ್ಗೆ ವಿಠಲ್ ಮಲ್ಯ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಂದ್ರು ವಾದ್ವಾನಿ ಸ್ಪಷ್ಟಪಡಿಸಿದ್ದು, 'ಆಸ್ಪತ್ರೆಯ ಶಿಸ್ತು ಸಮಿತಿ ಸಭೆ ನಡೆಸಿ ತನಿಖೆ ನಡೆಸಲು ತೀರ್ಮಾನಿಸಿದೆ. ತನಿಖೆಗೆ ನಮ್ಮದೇ ಆದ ಕೆಲವು ಮಾರ್ಗಸೂಚಿಗಳಿವೆ. ಆ ಪ್ರಕಾರ ತನಿಖೆ ಕೈಗೊಳ್ಳಲಾಗುವುದು' ಎಂದಿದ್ದಾರೆ.

ವಿದ್ವತ್ ಅವರ ಚಿಕಿತ್ಸೆ ನೇತೃತ್ವವನ್ನು ವಹಿಸಿದ್ದ ಆನಂದ್ ಅವರೇ ಡಿಸ್ಚಾರ್ಜ್ ಸಮರಿ ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನೂ ಅಮಾನತು ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು 'ಆನಂದ್ ಅವರು ತಜ್ಞ ವೈದ್ಯರ ತಂಡದಲ್ಲಿ ಪ್ರಮುಖವಾಗಿದ್ದಾರೆ. ಇವರನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ.

ಬುಧವಾರ ನಡೆದ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ವೇಳೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಂಸುಂದರ್ ಅವರು ವೈದ್ಯಕೀಯ ವರದಿ ಸೋರಿಕೆ ವಿಚಾರ ಪ್ರಸ್ತಾಪ ಮಾಡಿದ್ದು 'ವೈದ್ಯರ ತೀವ್ರ ಒತ್ತಡದಿಂದಾಗಿ ವಿದ್ವತ್ ಅನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅಲ್ಲದೆ ವೈದ್ಯಕೀಯ ವರದಿಯನ್ನು ರೋಗಿಗೆ ಅಥವಾ ಅವರ ಹತ್ತಿರದ ಸಂಬಂಧಿಗಳಿಗೆ ಮಾತ್ರ ಕೊಡಬೇಕು. ಆದರೆ ಹ್ಯಾರಿಸ್ ಅವರು ಡಿಸ್ಚಾರ್ಜ್ ಸಮರಿಯನ್ನು ತಮ್ಮ ಸಾಮಾಜಿಕ ಜಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು ಇದರ ಬಗ್ಗೆ ತನಿಖೆ ಆಗಬೇಕು' ಎಂದು ಹೇಳಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications