ಮನೆ ಮಾಲೀಕನ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಸಹೋದರರ ಸೆರೆ
ಬೆಂಗಳೂರು, ಜು. 01: ಅವರಿಬ್ಬರೂ ಅಣ್ಣ ತಮ್ಮಂದಿರು. ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಕೊರೊನಾ ಬಂದಿದ್ದರಿಂದ ಬ್ಯುಜಿನೆಸ್ನಲ್ಲಿ ತುಂಬಾ ನಷ್ಟ ಅನಭವಿಸಿದ್ದರು. ಸಾಲಗಾರರ ಕಾಟ ತಾಳಲಾರದೇ ಮನೆ ಮಾಲೀಕರ ಕೈಕಾಲು ಕಟ್ಟ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಅರವಿಂದ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು. ಬಟ್ಟೆ ಬ್ಯುಜಿನೆಸ್ ಮಾಡುತ್ತಿದ್ದ ಅರವಿಂದ್ ಮತ್ತು ಅವಿನಾಶ್ ನಷ್ಟ ಅನುಭವಿಸಿದ್ದರು. ದಿನ ನಿತ್ಯ ಸಾಲಗಾರರ ಕಾಟ ಶುರುವಾಗಿತ್ತು. ಇದಕ್ಕೆ ಅವರು ಆಯ್ಕೆ ಮಾಡಿಕೊಂಡಿದ್ದು ದರೋಡೆ. ವಿದ್ಯಾರಣ್ಯಪುರದಲ್ಲಿ ನೆಲೆಸಿದ್ದ ಬಾಡಿಗೆ ಮನೆಯ ಮಾಲೀಕನ ಹಿನ್ನೆಲೆ ಸಂಗ್ರಹಿಸಿದ್ದರು. ಮನೆ ಮಾಲೀಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರ ಮಕ್ಕಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪತ್ನಿ ಮನೆ ಕೆಲಸ ಮಾಡಿಕೊಂಡಿದ್ದರು. ಒಮ್ಮೊಮ್ಮೆ ಮನೆ ಮಾಲೀಕರೊಬ್ಬರೇ ಮನೆಯಲ್ಲಿರುತ್ತಿದ್ದರು.

ಸಾಲ ತೀರಿಸಲು ಮನೆ ಮಾಲೀಕನ ಮನೆ ದೋಚಲು ಪ್ಲ್ಯಾನ್ ರೂಪಿಸಿದ್ದರು. ಅದರಂತೆ ಒಂಟಿಯಾಗಿದ್ದ ಮನೆ ಮಾಲೀಕನ ಕೈಕಾಲು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೆಲ ದಿನಗಳ ಹಿಂದೆ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದರು. ಮನೆಯಲ್ಲಿ ಕದ್ದಿದ್ದ 123 ಗ್ರಾಂ ಚಿನ್ನ, ಎರಡು ಕೆ.ಜಿ. ಬೆಳ್ಳಿ, ನಗದು ಹಣವನ್ನು ದೋಚಿ ಪರಾರಿಯಾಗಿದ್ದರು.

Recommended Video
ಈ ಕುರಿತು ಮನೆ ಮಾಲೀಕ ವಿದ್ಯಾರಣ್ಯಪುರ ಪೊಲೀಸರಿಗೆ ದೂರು ನೀಡಿದ್ದರು. ಖಚಿತ ಮಾಹಿತಿ ಆಧರಿಸಿ ಅರವಿಂದ್ ಹಾಗೂ ಅವಿನಾಶ್ ಇಬ್ಬರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಬಟ್ಟೆ ವ್ಯಾಪಾರದಲ್ಲಿ ನಷ್ಟವಾಗಿದ್ದರಿಂದ ಸಾಲಗಾರರ ಸಾಲ ತೀರಿಸಲು ಈ ಕೃತ್ಯ ಎಸಗಿರುವ ತಪ್ಪೊಪ್ಪಿಕೊಂಡಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications