ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜೀನಾಮೆ ಕೊಟ್ಟಿರುವುದು ಹೌದು: ಶಾಸಕ ಆನಂದ್ ಸಿಂಗ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಜುಲೈ 1: ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ನಿಜ ಎಂದು ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಸ್ಪಷ್ಟಪಡಿಸಿದರು.

ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಲು ಮಧ್ಯಾಹ್ನ ತೆರಳಿದ ಅವರು ತಮ್ಮ ರಾಜೀನಾಮೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದರು.

ಆನಂದ್ ಸಿಂಗ್ ದಿಢೀರ್ ರಾಜೀನಾಮೆ: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ?ಆನಂದ್ ಸಿಂಗ್ ದಿಢೀರ್ ರಾಜೀನಾಮೆ: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ?

ರಾಜೀನಾಮೆ ನೀಡಿರುವುದು ನಿಜ. ರಾಜ್ಯಪಾಲರನ್ನು ಭೇಟಿ ಮಾಡಲು ಹೋಗುತ್ತಿದ್ದು, ಅವರ ಭೇಟಿಯ ಬಳಿಕ ಎಲ್ಲ ಮಾಹಿತಿ ನೀಡುವುದಾಗಿ ತಿಳಿಸಿದರು. ರಾಜ್ಯಪಾಲರನ್ನು ಭೇಟಿಯಾಗುತ್ತಿರುವ ಉದ್ದೇಶವನ್ನೂ ನಂತರ ವಿವರಿಸುವುದಾಗಿ ಹೇಳಿದರು.

vijayanagar congress mla anand singh confirmed his resignation

ತಮಗೆ ಯಾರೂ ರಾಜೀನಾಮೆ ಪತ್ರ ನೀಡಿಲ್ಲ ಎಂಬ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಆನಂದ್ ಸಿಂಗ್, ಅವರು ಕೊಟ್ಟಿಲ್ಲವೆಂದರೆ ಇನ್ನೊಂದು ಸಲ ರಾಜೀನಾಮೆ ಕೊಡುತ್ತೇನೆ ಎಂದರು.

ಜಿಂದಾಲ್‌ ಸಂಸ್ಥೆಗೆ ಭೂಮಿ ಪರಭಾರೆ ಮಾಡುವ ವಿಚಾರದಲ್ಲಿ ಆನಂದ್ ಸಿಂಗ್ ಅವರು ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು. ಭೂಮಿ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಅವರು ಗೃಹ ಸಚಿವಾಲಯಕ್ಕೆ ಪತ್ರವನ್ನೂ ಬರೆದಿದ್ದರು.

ನನಗೆ ಯಾರೂ ರಾಜೀನಾಮೆ ಪತ್ರ ನೀಡಿಲ್ಲ: ಸ್ಪೀಕರ್ ರಮೇಶ್ ಕುಮಾರ್ ನನಗೆ ಯಾರೂ ರಾಜೀನಾಮೆ ಪತ್ರ ನೀಡಿಲ್ಲ: ಸ್ಪೀಕರ್ ರಮೇಶ್ ಕುಮಾರ್

ಆದರೆ ಅದಕ್ಕೆ ಸರ್ಕಾರ ಸ್ಪಂದಿಸದ ಕಾರಣ ಸಿಟ್ಟಿಗೆದ್ದು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕರು ರಾಜೀನಾಮೆ ಸಲ್ಲಿಸುವುದಾದರೆ ಖುದ್ದಾಗಿ ಸ್ಪೀಕರ್ ಅವರನ್ನು ಭೇಟಿ ಮಾಡಿ ಕಾರಣ ಸಹಿತ ರಾಜೀನಾಮೆ ಸಲ್ಲಿಸಬೇಕು. ಅದನ್ನು ಪರಾಮರ್ಶೆಗೆ ಒಳಪಡಿಸಿದ ಬಳಿಕವೇ ಸ್ಪೀಕರ್ ಅಂಗೀಕರಿಸುತ್ತಾರೆ. ಆದರೆ ಆನಂದ್ ಸಿಂಗ್ ಅವರು ಸ್ಪೀಕರ್ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅದನ್ನು ಪರಿಗಣಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

English summary
Vijayanagar Congress MLA Anand Singh confirmed that he has submitted his resignation letter to speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X