ಗ್ರಾಮ ಪಂಚಾಯ್ತಿಗಳಲ್ಲೂ ಶೀಘ್ರ ಘನತ್ಯಾಜ್ಯ ನಿರ್ವಹಣಾ ಘಟಕ
ಬೆಂಗಳೂರು, ಅಕ್ಟೋಬರ್ 30: ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಯಲ್ಲಿ ಶೀಘ್ರ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಮಾಡಲು ಆಲೋಚಿಸಲಾಗಿದ್ದು, ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಪಕ್ಷ 5 ರಿಂದ 6 ಗ್ರಾಮ ಪಂಚಾಯತ್ ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಈ ಸಂಬಂಧ ಯೋಜನಾ ರೂಪುರೇಷೆಗಳನ್ನು ಸಿದ್ಧಪಡಿಸಿ ನವಂಬರ್ ಅಂತ್ಯದೊಳಗೆ ಸಲ್ಲಿಸಬೇಕು ಎಂದರು.
ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ತ್ಯಾಜ್ಯ ನಿರ್ವಹಣೆ ಮಾಡಿದರೆ ಸಾಲದು ಇದು ಗ್ರಾಮೀಣ ಪ್ರದೇಶದಲ್ಲಿ ಕೂಡ ಆಗಬೇಕು ಆ ದಿಸೆಯಲ್ಲಿ ಹಂತ ಹಂತವಾಗಿ ಆಯ್ದ ಗ್ರಾಮ ಪಂಚಾಯತ್ ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಅಗತ್ಯ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು.

ಈ ಯೋಜನೆಗೆ ಅಗತ್ಯವೆನಿಸಿದಲ್ಲಿ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ, ಸಮುದಾಯ ಮುಖ್ಯಸ್ಥರು ಹಾಗೂ ಆಸಕ್ತ ಲಾಭ ರಹಿತ ಸಂಘ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಬಹುದು.ಈ ಕುರಿತು ತಿಂಗಳ ಅಂತ್ಯದೊಳಗೆ ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಸೂಚಿಸಿದರು.
ಶೌಚಾಲಯ ನಿರ್ಮಾಣ:ನವಂಬರ್ 1 ರಂದು ಕರ್ನಾಟಕವನ್ನು ಬಹಿರ್ದೆಸೆ ಬಯಲು ಮುಕ್ತ ಶೌಚಾಲಯ ರಾಜ್ಯ ಎಂದು ಘೋಸಿಸುವ ದಿಸೆಯಲ್ಲಿ ಶೌಚಾಲಯಗಳ ನಿರ್ಮಾಣ ಪ್ರಗತಿ ಬಗ್ಗೆ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ವಿಶೇಷವಾಗಿ ಚರ್ಚಿಸಿದ ಸಚಿವರು ನಿಗದಿತ ಗುರಿ ಮುಟ್ಟಿದ ಸಿ.ಇ.ಓ ಗಳಿಗೆ ಅಭಿನಂದಿಸಿದರು.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಬೇಡಿಕೆ ಬಂದಲ್ಲಿ ಅದನ್ನು ಪರಿಗಣಿಸಬಹುದು, ಕೇಂದ್ರ ಸರ್ಕಾರ ಸಹ ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ ಹಾಗಾಗಿ ಬೇಡಿಕೆ ಇರುವ ಜಿಲ್ಲೆಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಕೈಗೊಳ್ಳಬಹುದು ಎಂದು ಸಚಿವರು ತಿಳಿಸಿದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications