ವೈದ್ಯೆ ತನ್ನ ತಪ್ಪಿಗೆ ಪ್ರಾಯಶ್ಚಿತವನ್ನು ಮಾಡಿಕೊಳ್ಳಲು ಮುಂದಾಗಿದ್ದು ಹೀಗೆ..
ಬೆಂಗಳೂರು ಸೆ 30: ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಹೈಕೋರ್ಟ್ಗೆ ಬೇಷರತ್ ಕ್ಷಮೆ ಕೋರಿರುವ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರು, ಆರು ತಿಂಗಳ ಕಾಲ ತಿಂಗಳಲ್ಲಿ ಒಂದು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಸಲ್ಲಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆ ಮೂಲಕ ಆಕೆ ತನ್ನ ತಪ್ಪಿಗೆ ಪ್ರಾಯಶ್ಚಿತವನ್ನು ಮಾಡಿಕೊಳ್ಳಲು ಮುಂದಾಗಿದ್ದರೆ.
ಅವರು ಪತಿಯ ಸುಪರ್ದಿಗೆ ಅಪ್ರಾಪ್ತ ಪುತ್ರಿಯನ್ನು ಒಪ್ಪಿಸಲು ನ್ಯಾಯಾಲಯ ಹೊರಡಿಸಿದ್ದ ಆದೇಶ ಪಾಲಿಸದೆ ಉಲ್ಲಂಘನೆ ಮಾಡಿದ್ದರು. ಪ್ರಕರಣ ಸಂಬಂಧ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 33 ವರ್ಷದ ಆರೋಪಿ ವೈದ್ಯೆ ವಿರುದ್ಧ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಆ ವೈದ್ಯರು ವಿಚಾರಣೆಗೆ ಖುದ್ದು ಹಾಜರಾಗಿ, ತಮ್ಮ ತಪ್ಪಿಗೆ ಬೇಷರತ್ ಕ್ಷಮೆ ಕೋರಿ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದರು. ಆರು ತಿಂಗಳ ಕಳೆದ ನಂತರ ಆರೋಪಿ ವೈದ್ಯೆ, ತನ್ನ ಮುಚ್ಚಳಿಕೆಯನ್ನು ಪಾಲನೆ ಮಾಡಿದ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್ ಜನಲರ್ ಅವರಿಗೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.
ನ್ಯಾಯಾಂಗ ನಿಂದನೆ ಕೈಬಿಟ್ಟ ಕೋರ್ಟ್:
ಅಲ್ಲದೆ, ಭವಿಷ್ಯದಲ್ಲಿ ತಮ್ಮ ವಿರುದ್ಧ ನ್ಯಾಯಾಲಯವು ಯಾವುದೇ ಕ್ರಮ ತೆಗೆದುಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗದಂತೆ ನಡೆದುಕೊಳ್ಳಲಾಗುವುದು. ಆ ಮಾತನ್ನು ಸಾಬೀತುಪಡಿಸಲು ಮುಂದಿನ ಆರು ತಿಂಗಳ ಕಾಲ ತಿಂಗಳಲ್ಲಿ ಒಂದು ದಿನ ಪೂರ್ತಿ ಬೆಂಗಳೂರಿನ ಯಾವುದಾದರೂ ಸರ್ಕಾರಿ ಆಸ್ಪತ್ರೆಯಲ್ಲಿ ಸಂಬಂಧಪಟ್ಟ ಮುಖ್ಯಸ್ಥರು, ಸಿವಿಲ್ ಸರ್ಜನ್ ಅಥವಾ ನಿರ್ದೇಶಕರ ಪೂರ್ವಾನುಮತಿ ಪಡೆದು ಸಮುದಾಯ ಸೇವೆ ಸಲ್ಲಿಸುವುದಾಗಿ ಮುಚ್ಚಳಿಕೆ ಸಹ ಬರೆದುಕೊಟ್ಟರು.
ಆ ಮುಚ್ಚಳಿಕೆ ಮತ್ತು ಬೇಷರತ್ ಕ್ಷಮಾಪಣೆ ಪ್ರಮಾಣ ಪತ್ರವನ್ನು ಒಪ್ಪಿಕೊಂಡ ವಿಭಾಗೀಯ ಪೀಠ, ವೈದ್ಯೆ ಮೇಲಿನ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈ ಬಿಟ್ಟಿತು.
ಅಲ್ಲದೆ, ಸಮುದಾಯ ಸೇವೆ ಸಲ್ಲಿಸುವ ಸಂಬಂಧ ಆರೋಪಿ ವೈದ್ಯೆಯು ನಗರದ ಯಾವುದೇ ಸರ್ಕಾರಿ ಆಸ್ಪತ್ರೆಗೆ ಮನವಿ ಮಾಡಿದರೆ, ಆ ಮನವಿಯನ್ನು ಆಸ್ಪತ್ರೆಯ ಮುಖ್ಯಸ್ಥರು ಪರಿಗಣಿಸಬೇಕು. ಆಕೆಯ ಮನವಿಯಂತೆ ಮುಂದಿನ ಆರು ತಿಂಗಳ ಕಾಲ ತಿಂಗಳಲ್ಲಿ ಒಂದು ದಿನ ಪೂರ್ತಿ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ನಿರ್ದೇಶಿಸಿದೆ.
ಪ್ರಕರಣದ ಹಿನ್ನೆಲೆ:
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆರೋಪಿ ವೈದ್ಯೆಯು ಪತಿಯಿಂದ ಬೇರ್ಪಟ್ಟು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ. ದಂಪತಿಗೆ 8 ವರ್ಷದ ಪುತ್ರಿ ಇದ್ದಾರೆ. ವೈದ್ಯೆ ತನ್ನ ಸುಪರ್ದಿಯಲ್ಲಿ ಪುತ್ರಿಯನ್ನು ಇಟ್ಟುಕೊಂಡಿದ್ದರು.
ಈ ನಡುವೆ ತಾತ್ಕಾಲಿಕವಾಗಿ ಮಗುವನ್ನು ತಂದೆಯ ಸುಪರ್ದಿಗೆ ನೀಡುವಂತೆ ವೈದ್ಯೆಗೆ ಹೈಕೋರ್ಟ್ 2023ರ ಜುಲೈನಲ್ಲಿ ನಿರ್ದೇಶಿಸಿತ್ತು. ಈ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ವೈದ್ಯೆ ವಿರುದ್ಧ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications