ಬೆಂಗಳೂರಲ್ಲಿ ಬದಲಾದ ಹವಾಗುಣದಿಂದ ವೈರಲ್ ಜ್ವರ ಹೆಚ್ಚಳ
ಬೆಂಗಳೂರು, ನವೆಂಬರ್ 26: ಕಳೆದ ಒಂದು ವಾರದಿಂದ ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಆಗಾಗ ತುಂತುರು ಮಳೆಯಾಗಿದೆ. ಹವಾಮಾನ ಏರಿಳಿತದಿಂದ ಜನರ ಆರೋಗ್ಯದ ಮೇಲೂ ತೀವ್ರ ಪರಿಣಾಮ ಉಂಟಾಗುತ್ತಿದೆ.
ಗಂಟಲು ನೋವು, ಶೀತ, ಜ್ವರ ಸೇರಿದಂತೆ ಅನೇಕ ಕಾಯಿಲೆಗಳು ಆರಂಭವಾಗಿವೆ. ಚಳಿ ಗಾಳಿ ಬೀಸುತ್ತಿದೆ, ಇದರಿಂದ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಇವರಲ್ಲಿ ಬಹುತೇಕರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ನಿತ್ಯ 10ರಲ್ಲಿ ಐದಾರು ರೋಗಿಗಳು ಗಂಟಲು ನೋವು, ನೆಗಡಿ, ಕೆಮ್ಮು, ತಲೆನೋವು, ಮೈಕೈ ನೋವು, ಅಲರ್ಜಿ ಅಸ್ತಮಾ, ಕಿವಿ ಸೋಂಕುಗಳಿಂದ ಹಿರಿಯ ಕಿರಿಯರು ಎನ್ನದೆ ಎಲ್ಲಾ ವಯೋಮಾನದವರು ಬಳಲುತ್ತಿದ್ದಾರೆ.
ನಗರದ ಕಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ, ಬೌರಿಂಗ್ ಮತ್ತು ಲೇಡಿ ಕರ್ಜನ್ ಸೇರಿದಂತೆ ಅನೇಕ

ಶ್ವಾಸಕೋಶ ಸಂಬಂಧಿ ಸಮಸ್ಯೆ
ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರಲ್ಲಿ ಶೇ.30-40ರಷ್ಟು ಮಂದಿ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದದಾರೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಶೇ.50 ರಷ್ಟು ಮಕ್ಕಳು ಅನೇಕ ವೂರಾಣು ಜ್ವರಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಚ್1ಎನ್1 ರೋಗ ಲಕ್ಷಣಗಳು
ಶೇ.20-25 ರಷ್ಟು ಮಕ್ಕಳಲ್ಲಿ ಎಚ್1ಎನ್1 ರೋಗಲಕ್ಷಣಗಳನ್ನು ಹೊಂದಿದವರಾಗಿದ್ದಾರೆ. ಇದಕ್ಕೆ ಹವಾಮಾನ ಬದಲಾವಣೆ ಹಾಗೂ ವಾತಾವರಣದಲ್ಲಿನ ಧೂಳು ಪ್ರಮುಖ ಕಾರಣ ಎನ್ನಲಾಗಿದೆ.

ಮುನ್ನೆಚ್ಚರಿಕಾ ಕ್ರಮಗಳೇನೇನು?
ಬಿಸಿ ಹಾಗೂ ತಾಜಾ ಆಹಾರ ಸೇವಿಸಬೇಕು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ಬೆಚ್ಚನೆಯ ಉಡು[ಉ ಧರಿಸಬೇಕು, ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು, ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು, ಜ್ವರ ಬಂದ ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಬಾರದು.

ರೋಗಿಗಳಲ್ಲಿ ಮೈಕೈ ನೋವು ಸಮಸ್ಯೆ
ಚಿಕಿತ್ಸೆಗೆ ಬರುವ ಹೆಚ್ಚಿನ ರೋಗಿಗಳಲ್ಲಿ ಜ್ವರ ಮತ್ತು ಮೈಕೈ ನೋವು ಕುರಿತ ಮಾಹಿತಿ ನೀಡುತ್ತಾರೆ, ಆದರೆ ಉಸಿರಾಟದ ತೊಂದರೆ ಇರುವ ಬಗ್ಗೆ ತಿಳಿಸುವುದೇ ಇಲ್ಲ. ಇದರಿ ದ ಶೀಘ್ರ ಪತ್ತೆಗೆ ತೊಂದರೆ ಆಗುತ್ತದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications