Viral Video: ಬೆಂಗಳೂರು ರಾಷ್ಟ್ರ ರಾಜಧಾನಿ ಆಗಲಿ ಎಂದ ದೆಹಲಿ ಯುವತಿ: ಈ ಕಾರಣಕ್ಕೆ ಬೇಡ ಎಂದ ಕನ್ನಡಿಗರು
ಬೆಂಗಳೂರು: ಬೆಂಗಳೂರಿನ ಬಗ್ಗೆ ಈಚೆಗೆ ಹೈದರಾಬಾದ್ ಯುವತಿಯೊಬ್ಬರು ತೀರ ಕೆಟ್ಟದಾಗಿ ಕಮೆಂಟ್ ಮಾಡಿದ ಬೆನ್ನಲ್ಲೇ ದೆಹಲಿ ಯುವತಿಯೊಬ್ಬರು ಬೆಂಗಳೂರಿನ ಬಗ್ಗೆ ಮೆಚ್ಚುಗೆ ಸೂಚಿಸಿ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ಮುಂದೆ ರಾಷ್ಟ್ರ ರಾಜಧಾನಿ ದೆಹಲಿ ಬದಲಿಗೆ, ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡಬೇಕು ಎಂದು ಯುವತಿ ಆಗ್ರಹಿಸಿದ್ದಾರೆ. ಆದರೆ ಕನ್ನಡಿಗರು ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇದು ಟ್ರೋಲ್ಗೂ ಕಾರಣವಾಗಿದೆ.
ಬೆಂಗಳೂರಿನ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸಮೃದ್ಧಿ ಮಖಿಜಾ ಎನ್ನುವವರು ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ಹಿಂದೆಯೂ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಮೆಚ್ಚುಗೆ ಸೂಚಿಸಿ ಸಮೃದ್ಧಿ ಅವರು ವಿಡಿಯೋ ಮಾಡಿದ್ದರು. ದೆಹಲಿ ಯುವತಿ ಮಾಡಿರುವ ವಿಡಿಯೋ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ವಲಸೆಯ ಬಗ್ಗೆಯೂ ಚರ್ಚೆಗೆ ಕಾರಣವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಗಿಂತಲೂ ಬೆಂಗಳೂರು ಅತ್ಯಂತ ಉತ್ತಮ ಆಯ್ಕೆಯಾಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಸಮೃದ್ಧಿ ಅವರು ತಮ್ಮ ವಿಡಿಯೋದಲ್ಲಿ ಬೆಂಗಳೂರು ಹಾಗೂ ದೆಹಲಿಯನ್ನು ಹೋಲಿಕೆ ಮಾಡಿ ವಿಡಿಯೋ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಗಿಂತ ಬೆಂಗಳೂರು ಉತ್ತಮ ಆಯ್ಕೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಜೀವನ ನಡೆಸುವುದು ದೆಹಲಿಗಿಂತಲೂ ಹೆಚ್ಚು ಆರಾಮದಾಯಕ ಮಾತ್ರವಲ್ಲ ಸುರಕ್ಷಿತವಾಗಿದೆ. ದೆಹಲಿಯು ವಾಯು ಮಾಲಿನ್ಯ ಹಾಗೂ ಸುರಕ್ಷತೆ ಸಮಸ್ಯೆಯಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದಿದ್ದಾರೆ.
ದೆಹಲಿ ಗ್ಯಾಸ್ ಚೇಂಬರ್
ಇನ್ನು ವೈರಲ್ ವಿಡಿಯೋದಲ್ಲಿ ಯುವತಿಯು ದೆಹಲಿ ಗ್ಯಾಸ್ ಚೇಂಬರ್ ಮಾದರಿಯಲ್ಲಿ ಬದಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ವಿಪರೀತವಾಗಿದೆ. ಗಾಳಿಯ ಗುಣಮಟ್ಟವು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದ್ದು, ಉಸಿರಾಡುವುದಕ್ಕೂ ಸಮಸ್ಯೆ ಆಗುತ್ತಿದೆ. ರಾಜಧಾನಿಯಲ್ಲೇ ಈ ರೀತಿಯ ಸಮಸ್ಯೆಗಳಿದ್ದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಗಾಳಿಯು ಶುದ್ಧವಾಗಿದೆ. ಅಲ್ಲದೇ ಜೀವನವು ಆರೋಗ್ಯಕರವಾಗಿದೆ ಎಂದು ಹೇಳಿದ್ದಾರೆ. ಮುಂದುವರಿದು ದೆಹಲಿಗೆ ಹೋಲಿಕೆ ಮಾಡಿದರೆ ಬೆಂಗಳೂರು ಅತ್ಯಂತ ಸುರಕ್ಷಿತ ನಗರವಾಗಿದೆ. ರಾತ್ರಿ ಸಮಯದಲ್ಲೂ ಒಂಟಿಯಾಗಿ ಓಡಾಡಬಹುದು. ಇದು ದೆಹಲಿಗೆ ಹೋಲಿಸಿದರೆ ತುಂಬಾ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೇಡವೇ ಬೇಡ ಎಂದ ಕನ್ನಡಿಗರು
ಇನ್ನು ಕನ್ನಡಿಗರು ಯುವತಿಯ ಅಭಿಪ್ರಾಯಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ರೇಷ್ಮಾ ಎನ್ನುವವರು ದಯವಿಟ್ಟು ಬೇಡ ನಮ್ಮಲ್ಲಿ ಈಗಾಗಲೇ ನೀವು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಸಾಕಷ್ಟು ಜನರಿದ್ದಾರೆ. ಪರಿಸ್ಥಿತಿ ಈಗಾಗಲೇ ಕೆಟ್ಟದಾಗಿದೆ. ಅವಾಸ್ತವಿಕ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ರಾಜಾ ಎನ್ನುವವರು ಹಳೆಯ ನಗರವನ್ನು ಹಾಳು ಮಾಡಿದ ನಂತರ ಹೊಸ ನಗರಕ್ಕೆ ಬದಲಾಯಿಸುವ ಪ್ರವೃತ್ತಿ ಹೇಗಿದೆ ನೋಡಿ. ದೆಹಲಿ ಯಾವಾಗಲೂ ಇಷ್ಟು ವಿಷಕಾರಿಯಾಗಿತ್ತು ಎಂದು ನೀವು ಭಾವಿಸುತ್ತೀರಾ. ಎಲ್ಲವೂ ತಪ್ಪಾಗುವ ಮೊದಲು ಅದು ಸುಂದರ ಸ್ಥಳವಾಗಿತ್ತು. ಬೆಂಗಳೂರು ರಾಜಧಾನಿಯಾದರೆ ಅದೇ ಆಗುತ್ತದೆ ಮತ್ತು 25 ವರ್ಷಗಳ ನಂತರ ನೀವು ಮತ್ತೆ ಹೊಸ ನಗರವನ್ನು ನಿರ್ಮಿಸುತ್ತೀರಿ. ನೀವು ಸಮಸ್ಯೆಯನ್ನು ಪರಿಹರಿಸುತ್ತಿಲ್ಲ, ನೀವು ಅದರಿಂದ ಓಡಿಹೋಗುತ್ತಿದ್ದೀರಿ.
ಸರ್ಕಾರದ ನಿಷ್ಕ್ರಿಯತೆಯಿಂದಾಗಿ ದೆಹಲಿ ವಿಷಕಾರಿಯಾಗಿದೆ ಎಂದು ಜನರು ಹೇಳುತ್ತಿದ್ದಾರೆ. ನಗರವನ್ನು ಮಾಲಿನ್ಯಗೊಳಿಸುವುದು ಎಲ್ಲಾ ನಿವಾಸಿಗಳ ಸಾಮೂಹಿಕ ಜವಾಬ್ದಾರಿಯಾಗಿದೆ. ಜನರು ಈಗಾಗಲೇ ಬೆಂಗಳೂರು ಮತ್ತು ಅದರ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳಲು ಪ್ರಾರಂಭಿಸಿದ್ದಾರೆ, ರಾಷ್ಟ್ರೀಯ ರಾಜಧಾನಿಯೊಂದಿಗೆ ನಾವು ಇನ್ನು ಮುಂದೆ ಅದನ್ನು ಬಯಸುವುದಿಲ್ಲ.
ನಿಮ್ಮ ಸಮಸ್ಯೆಗಳಿಂದ ನಮ್ಮ ನಗರವನ್ನು ಇನ್ನಷ್ಟು ನಾಶ ಮಾಡುವ ಮೊದಲು, ನಿಮ್ಮ ಸ್ವಂತ ನಗರವನ್ನು ಸ್ವಚ್ಛಗೊಳಿಸುವ ಮಾರ್ಗವನ್ನು ಕಂಡುಕೊಳ್ಳುವುದು ಉತ್ತಮ ಎಂದು ಹೇಳಿದ್ದಾರೆ.
-
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು










Click it and Unblock the Notifications