Viral Video: ಡಿ.ಕೆ ಶಿವಕುಮಾರ್ ಅವರೇ ನೀವು ಯಜಮಾನರಲ್ಲ: ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ
ಬೆಂಗಳೂರು ಅಭಿವೃದ್ಧಿ ಹಾಗೂ ಮೂಲಸೌಕರ್ಯ ವಿಚಾರವಾಗಿ ಉದ್ಯಮಿಗಳೂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದೀಗ ಉದ್ಯಮಿ ಮೋಹನ್ದಾಸ್ ಪೈ ಅವರು ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಆಕ್ರೋಶ ಹೊರ ಹಾಕಿದ್ದಾರೆ.
ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಈಚೆಗೆ ಬೆಂಗಳೂರು ಮೂಲಸೌಕರ್ಯದ ಬಗ್ಗೆ ಭಾರೀ ಟೀಕೆ ಮಾಡಿದ್ದರು. ಇದರೊಂದಿಗೆ ಸರಣಿ ಟ್ವೀಟ್ಗಳ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಸಹ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಕಿರಣ್ ಮಜುಂದಾರ್ ಶಾ ಹಾಗೂ ಡಿ.ಕೆ ಶಿವಕುಮಾರ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಉದ್ಯಮಿ ಮೋಹನ್ದಾಸ್ ಪೈ ಅವರು ಸಹ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರಾದರೂ, ಸೋಷಿಯಲ್ ಮೀಡಿಯಾದಲ್ಲಿ ವಿಮರ್ಶೆ ಮಾಡುವುದು ಮುಂದುವರಿಸಿದ್ದಾರೆ.

ಇದೀಗ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು, ಅಪಾರ್ಟ್ಮೆಂಟ್ ಮಾಲೀಕ ಕಿರಣ್ ಹೆಬ್ಬಾರ್ ಎಂಬಾತ ಪತ್ರ ಬರೆದು ನನಗೆ ಬೆದರಿಕೆ ಹಾಕಲು ಬರ್ತಿದ್ದಾನೆ. ಯಾವ ಗೊಡ್ಡು ಬೆದರಿಕೆಗಳಿಗೂ ನಾನು ಜಗ್ಗಲ್ಲ ಎಂದಿದ್ದಾರೆ. ಈ ಹೇಳಿಕೆಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಉದ್ಯಮಿ ಮೋಹನ್ದಾಸ್ ಪೈ ಅವರು, ಇದು ತುಂಬಾ ತಪ್ಪು. ಹೌದು ನಾವು ಒಪ್ಪುತ್ತೇವೆ ನೀವು ನಮ್ಮ ಸಚಿವರು ನಿಜ. ಆದರೆ ನೀವು ನಮ್ಮ ಪ್ರತಿನಿಧಿ ಹೊರತು ನಮ್ಮ ಯಾಜಮಾನರಲ್ಲ. ನಮ್ಮದು ಪ್ರಜಾಪ್ರಭುತ್ವ ದೇಶ ಹಾಗೂ ಮಂತ್ರಿಗಳನ್ನು ಪ್ರಶ್ನಿಸುವ ಹಕ್ಕು ಜನಸಾಮಾನ್ಯರಿಗೆ ಇದೆ. ಸಾರ್ವಜನಿಕರೊಂದಿಗೆ ಈ ರೀತಿ ಮಾತನಾಡುವುದು ಹಾಗೂ ಭಯದ ವಾತಾವರಣವನ್ನು ಸೃಷ್ಟಿಸುವುದು ತುಂಬಾ ತಪ್ಪು ಎಂದಿದ್ದಾರೆ.
ಮುಂದುವರಿದು ಸಾರ್ವಜನಿಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಹಾಯ ಮಾಡುವ ಅವಶ್ಯಕತೆ ಇದೆ. ಜನರಿಗೆ ಸಹಕರಿಸುವುದ ನಿಮಗೆ ಒಳ್ಳೆಯದು ಎಂದು ಮೋಹನ್ ದಾಸ್ ಪೈ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಈ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಕುರಿತು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಡಿಕೆ ಶಿವಕುಮಾರ್ ಸಂವಾದ ನಡೆಸಿದ್ದು, ನಿಮ್ಮ ಸೇವೆ ಮಾಡಿದರೆ ನಮಗೆ ಮತ ಹಾಕುತ್ತೀರಿ ಎನ್ನುವುದು ನಮ್ಮ ಆಸೆ. ಆದರೆ, ಇದೇ ವಿಷಯವನ್ನಿರಿಸಿಕೊಂಡು ನನಗೇ ಎಚ್ಚರಿಕೆ ಕೊಡಲು ಬಂದರೆ ಅದು ಕೆಲಸ ಮಾಡಲ್ಲ ಎಂದಿದ್ದರು. ಅಲ್ಲದೇ ಮುಂದುವರಿದು ಅದು ಯಾವನೇ ಆಗಿರಲಿ, ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬರಲ್ಲ ಎಂದೂ ಹೇಳಿದ್ದರು.
ಕೆಲವರಿಗೆ ನಾನು ಯಾರಂತ ಗೊತ್ತಿಲ್ಲ: ಡಿ.ಕೆ ಶಿವಕುಮಾರ್!
ಇದೇ ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್ ಅವರು, ಕೆಲವರಿಗೆ ನಾನು ಯಾರೆಂದು ತಿಳಿದಿಲ್ಲ ಅನಿಸುತ್ತೆ. ನಾನು ಈ ದೇಶದ ಪ್ರಧಾನಿ ಹಾಗೂ ಗೃಹ ಸಚಿವರಿಗೇ ಭಯಪಡದೆ ಜೈಲಿನಿಂದ ಬಂದಿದ್ದೇನೆ. ಅಪಾರ್ಟ್ಮೆಂಟ್ ಮಾಲೀಕ ಎಂದು ಕಿರಣ್ ಹೆಬ್ಬಾರ್ ಎಂಬಾತ ಪತ್ರ ಬರೆದು, ನಮಗೆ ಬೆದರಿಕೆ ಹಾಕುವುದಕ್ಕೆ ಬಂದಿದ್ದಾನೆ. ನಮ್ಮಲ್ಲಿ ಬಹುದೊಡ್ಡ ಮತದಾರರಿದ್ದಾರೆ.
ಇದು ಬೆಂಗಳೂರಿನ 1.30 ಕೋಟಿ ಮತದಾರರ ಮೇಲೆ ಪರಿಣಾಮ ಬೀರುವ ಸಾಮರ್ಥ್ಯವಿದೆ. ಸರ್ಕಾರಗಳು ನಮ್ಮನ್ನು ನಿರ್ಲಕ್ಷಿಸಿದೆ ಎಂದಿದ್ದು. ಒಂದು ವೇಳೆ ಆಡಳಿತ ಪಕ್ಷ ನಮ್ಮ ಮನವಿ ನಿರ್ಲಕ್ಷಿಸಿದರೆ ಸದ್ಯದಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಬರುತ್ತಿದೆ ನೋಡಿಕೊಳ್ಳುತ್ತೇವೆ ಎಂದು ಪತ್ರದಲ್ಲಿ ಎಚ್ಚರಿಕೆ ಕೊಟ್ಟಿದ್ದಾನೆ. ಇದೆಲ್ಲಾ ನನ್ನ ಬಳಿ ನಡೆಯಲ್ಲ ಎಂದು ಹೇಳಿದ್ದಾರೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications