Viral Video: ಬೆಂಗಳೂರಿನಲ್ಲೇ ಕನ್ನಡ ರಾಜ್ಯೋತ್ಸವಕ್ಕೆ ಅಡ್ಡಿಪಡಿಸಿದ ನಾರ್ಥಿ: ಇಲ್ಲಿದೆ ವೈರಲ್ ವಿಡಿಯೋ! Kannada Rajyotsava
Kannada Rajyotsava: ಬೆಂಗಳೂರಿನ ವಿವಿಧ ಭಾಗದಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಿಂದ ನಡೆಯುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕದಲ್ಲಿ ನವೆಂಬರ್ 1ರಂದು ಮಾತ್ರವಲ್ಲ ನವೆಂಬರ್ ತಿಂಗಳು ಪೂರ್ತಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಆದರೆ ನಾರ್ಥಿಯೊಬ್ಬರು ಬೆಂಗಳೂರಿನಲ್ಲೇ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಡ್ಡಿಪಡಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು. ಈ ಘಟನೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೆಲವು ವಲಸಿಗರ ಹಾವಳಿ ಹೆಚ್ಚಾಗಿದೆ ಎನ್ನುವ ಚರ್ಚೆ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ.
ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೆಲವು ವಲಸಿಗರು ಉದ್ದೇಶಪೂರ್ಕವಾಗಿ ಸಮಸ್ಯೆ ಮಾಡುತ್ತಿದ್ದಾರೆ. ಅಲ್ಲದೇ ಭಾಷಾ ವಿವಾದವನ್ನು ಸೃಷ್ಟಿ ಮಾಡುತ್ತಿದ್ದಾರೆ ಎನ್ನುವ ಗಂಭೀರವಾದ ಆರೋಪಗಳು ಕೇಳಿ ಬರುತ್ತಿವೆ. ಈ ರೀತಿ ಇರುವಾಗವೇ ಬೆಂಗಳೂರಿನಲ್ಲೇ ಕನ್ನಡ ರಾಜ್ಯೋತ್ಸವ ಆಚರಣೆಗೆ ಹಿನ್ನಡೆ ಆಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕನಕಪುರ ರಸ್ತೆಯಲ್ಲಿರುವ ಪ್ರಮುಖ ಅಪಾರ್ಟ್ಮೆಂಟ್ವೊಂದರಲ್ಲಿ ಕನ್ನಡಿಗರು ಕಳೆದ 9 ವರ್ಷಗಳಿಂದಲೂ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಇದೀಗ ಈ ಅಪಾರ್ಟ್ಮೆಂಟ್ ಅಸೋಸಿಯೇಷನ್ನ ಅಧ್ಯಕ್ಷ ನಾರ್ಥಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಡ್ಡಿಪಡಿಸಿದ್ದಾನೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ.
ಕನ್ನಡ ರಾಜ್ಯೋತ್ಸವವನ್ನು ಸತತ 9 ವರ್ಷ ಗಳಿಂದ ಮಾಡುತ್ತಾ ಬಂದಿದ್ದ ಅದೇ ಜಾಗದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಮಾಡಲು ಬಿಡದೆ ಕನ್ನಡ ದ್ರೋಹಿತನ ತೋರಿದೆ....
— ಕಾರ್ತಿಕ್ ವೆಂಕಟೇಶ್ l K@RTH!K Venkatesh🟨🟥 (@VKkarthik169) November 6, 2025
ಇಂದು ಈ ಅಪಾರ್ಟ್ಮೆಂಟ್ ನಲ್ಲಿ ಬೃಹತ್ ಹೋರಾಟ ಹಾಗೂ ಅದೇ ಜಾಗದಲ್ಲಿ ರಾಜ್ಯೋತ್ಸವ ಮಾಡಲು ಒತ್ತಾಯ..
ಅಸೋಸಿಯೇಸನ್ ಅಧ್ಯಕ್ಷ ಒಬ್ಬ ನಾರ್ತಿ ಹಾಗೂ ಅವನ ಚೇಲಾಗಳ ದುರಹಂಕಾರಕ್ಕೆ… pic.twitter.com/krnWP74Znj
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕನ್ನಡಪರ ಹೋರಾಟಗಾರ ಕಾರ್ತಿಕ್ ವೆಂಕಟೇಶ್ ಅವರು, ಕನ್ನಡ ರಾಜ್ಯೋತ್ಸವವನ್ನು ಸತತ 9 ವರ್ಷಗಳಿಂದ ಮಾಡುತ್ತಾ ಬಂದಿದ್ದು, ಅದೇ ಜಾಗದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಮಾಡಲು ಬಿಡದೆ ಕನ್ನಡ ದ್ರೋಹಿತನ ತೋರಲಾಗಿದೆ. ಈ ಅಪಾರ್ಟ್ಮೆಂಟ್ ನಲ್ಲಿ ಬೃಹತ್ ಹೋರಾಟ ಹಾಗೂ ಅದೇ ಜಾಗದಲ್ಲಿ ರಾಜ್ಯೋತ್ಸವ ಮಾಡಲು ಒತ್ತಾಯ. ಅಸೋಸಿಯೇಸನ್ ಅಧ್ಯಕ್ಷ ಒಬ್ಬ ನಾರ್ಥಿ ಹಾಗೂ ಅವನ ಚೇಲಾಗಳ ದುರಹಂಕಾರಕ್ಕೆ ಬಲಿಯಾದ ಕನ್ನಡಿಗರ ಸ್ವಾಭಿಮಾನ. 1ನೇ ತಾರೀಕು ಮಾಡಲು ಬಿಟ್ಟಿಲ್ಲಾ ಸ್ಥಳೀಯ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಅದೇಗೆ ಮಾಡುತ್ತೀರಿ ಅನ್ನೋ ರೀತಿ ಧೋರಣೆ ಇದೆ ಎಂದು ಅವರು ದೂರಿದ್ದಾರೆ.
ನಾಳೆ 3.30ಕ್ಕೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ಯುವಕರ್ನಾಟಕವೇದಿಕೆ ವತಿಯಿಂದ ನೂರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಕನಕಪುರ ರಸ್ತೆಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications