Viral Video: ಕ್ಲಾಸ್ನಲ್ಲೇ ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದ ಬೆಂಗಳೂರಿನ ಪ್ರೊಫೆಸರ್
ಬೆಂಗಳೂರು: ವಿದ್ಯಾದೇಗುಲ ಎಂದು ಕರೆಯಲ್ಪಡುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಮಾನತೆಯ ಪಾಠ ಹೇಳಿಕೊಡಬೇಕಾದ ಗುರುವೇ, ವಿದ್ಯಾರ್ಥಿಯ ಧರ್ಮವನ್ನು ಗುರಿಯಾಗಿಸಿ ನಿಂದಿಸಿರುವ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರದಿಯಾಗಿದೆ. ನಗರದ ಪ್ರತಿಷ್ಠಿತ ಪಿಇಎಸ್ ವಿಶ್ವವಿದ್ಯಾಲಯದಲ್ಲಿ (PES University) ತರಗತಿ ನಡೆಯುತ್ತಿದ್ದಾಗಲೇ ಪ್ರೊಫೆಸರೊಬ್ಬರು ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' (ಉಗ್ರಗಾಮಿ) ಎಂದು ಕರೆದು ತೀವ್ರವಾಗಿ ಅವಮಾನಿಸಿದ್ದಾರೆ. ಸದ್ಯ ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ವಿವಾದ ಭುಗಿಲೇಳುತ್ತಿದ್ದಂತೆಯೇ ಎಚ್ಚೆತ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಆರೋಪಿ ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.
ಅಸಲಿಗೆ ಕ್ಲಾಸ್ರೂಮ್ನಲ್ಲಿ ನಡೆದಿದ್ದೇನು?
ಪಿಇಎಸ್ ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ. ಮುರಳೀಧರ್ ದೇಶಪಾಂಡೆ ಎಂಬುವವರೇ ವಿದ್ಯಾರ್ಥಿಯನ್ನು ನಿಂದಿಸಿದವರು. ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗ ಏಕಾಏಕಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಯೊಬ್ಬನನ್ನು ಗುರಿಯಾಗಿಸಿಕೊಂಡು ಆತನನ್ನು 'ಟೆರರಿಸ್ಟ್' ಎಂದು ಕರೆದಿದ್ದಾರೆ. ವರದಿಗಳ ಪ್ರಕಾರ, ಕೇವಲ ಒಂದು ಬಾರಿಯಲ್ಲ, ಆ ಪ್ರೊಫೆಸರ್ ಬರೋಬ್ಬರಿ 13 ಬಾರಿ ವಿದ್ಯಾರ್ಥಿಯನ್ನು ಉಗ್ರಗಾಮಿ ಎಂದು ಹೀಯಾಳಿಸಿದ್ದಾರೆ ಎನ್ನಲಾಗಿದೆ.

ಇದಷ್ಟೇ ಅಲ್ಲದೆ, "ಇರಾನ್ ಯುದ್ಧ ಆಗುತ್ತಿರುವುದೇ ನಿಮ್ಮಂತವರಿಂದ. ನಿನ್ನನ್ನು ಅಮೆರಿಕದ ಡೊನಾಲ್ಡ್ ಟ್ರಂಪ್ ಎತ್ತಿಕೊಂಡು ಹೋಗುತ್ತಾನೆ. ನೀನು ಸತ್ತ ಮೇಲೆ ನರಕಕ್ಕೆ ಹೋಗುತ್ತೀಯಾ" ಎಂಬಿತ್ಯಾದಿ ಅತ್ಯಂತ ಅಸಹ್ಯಕರ, ತಾರತಮ್ಯದ ಮತ್ತು ಪ್ರಚೋದನಕಾರಿ ಮಾತುಗಳನ್ನು ಆಡಿದ್ದಾರೆ. ಇಡೀ ತರಗತಿಯ ಇತರ ವಿದ್ಯಾರ್ಥಿಗಳ ಎದುರೇ ವಿದ್ಯಾರ್ಥಿಯನ್ನು ಈ ರೀತಿ ನಿಂದಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ಸಾರ್ವಜನಿಕರ ಆಕ್ರೋಶ
ಸುಮಾರು ಒಂದು ನಿಮಿಷದ ಈ ವಿಡಿಯೋ ಕ್ಲಿಪ್ ಶುಕ್ರವಾರದಿಂದಲೇ (ಮಾರ್ಚ್ 27) ಎಕ್ಸ್, ಫೇಸ್ಬುಕ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದೆ. ಒಬ್ಬ ವಿದ್ಯಾವಂತ ಪ್ರೊಫೆಸರ್, ಅದರಲ್ಲೂ ತರಗತಿಯ ಒಳಗೆ ಯಾವುದೇ ಭೇದಭಾವವಿಲ್ಲದೆ ಪಾಠ ಮಾಡಬೇಕಾದ ಶಿಕ್ಷಕ ಈ ರೀತಿ ಕೋಮುವಾದಿ ಮನಸ್ಥಿತಿ ಪ್ರದರ್ಶಿಸಿರುವುದನ್ನು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. "ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಇಸ್ಲಾಮೋಫೋಬಿಯಾ (Islamophobia) ಬೆಳೆಯುತ್ತಿರುವುದು ಹಾಗೂ ವಿದ್ಯಾರ್ಥಿಗಳ ನಡುವೆ ವಿಷಬೀಜ ಬಿತ್ತುತ್ತಿರುವುದು ಸಮಾಜಕ್ಕೆ ಅತ್ಯಂತ ಅಪಾಯಕಾರಿ" ಎಂದು ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರೊಫೆಸರ್ ಅಮಾನತು
ವಿಡಿಯೋ ವೈರಲ್ ಆಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ, ಪಿಇಎಸ್ ವಿಶ್ವವಿದ್ಯಾಲಯವು ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳಿಂದ ಲಿಖಿತ ದೂರು ಸ್ವೀಕರಿಸಿದ ಕೂಡಲೇ, ಪ್ರಾಥಮಿಕ ತನಿಖೆ ನಡೆಸಿ ಡಾ. ಮುರಳೀಧರ್ ದೇಶಪಾಂಡೆ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ. "ಈ ಬಗ್ಗೆ ಸಂಪೂರ್ಣ ಆಂತರಿಕ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿಯುವವರೆಗೆ ಪ್ರೊಫೆಸರ್ ಅಮಾನತಿನಲ್ಲಿರಲಿದ್ದಾರೆ" ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
#NSUI has filed a complaint with #Bengaluru police against Prof. Deshpande of #PES University for allegedly calling a #Muslim student “#terrorist” during class. NSUI has demanded immediate suspension and a public apology. PES suspended the professor pending inquiry #Karnataka. pic.twitter.com/6O5K7YPz2R
— Imran Khan (@KeypadGuerilla) March 27, 2026
ಮತ್ತೊಂದೆಡೆ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ ಎನ್ಎಸ್ಯುಐ (NSUI), ಬೆಂಗಳೂರು ಪೊಲೀಸರಿಗೆ ಅಧಿಕೃತ ದೂರು ನೀಡಿದೆ. "ಅಲ್ಪಸಂಖ್ಯಾತ ವಿದ್ಯಾರ್ಥಿಯನ್ನು ಭಯೋತ್ಪಾದಕ ಗುಂಪಿಗೆ ಸೇರಿದವನು ಎಂದು ಕರೆಯುವ ಮೂಲಕ ಪ್ರೊಫೆಸರ್ ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಇದು ಖಂಡನೀಯ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರು ತಮ್ಮ ತಪ್ಪಿಗಾಗಿ ಬಹಿರಂಗವಾಗಿ ಕ್ಷಮೆಯಾಚಿಸುವ ವಿಡಿಯೋ ಬಿಡುಗಡೆ ಮಾಡಬೇಕು" ಎಂದು ಎನ್ಎಸ್ಯುಐ ದೂರಿನಲ್ಲಿ ಆಗ್ರಹಿಸಿದೆ.
ಭವಿಷ್ಯದ ಪ್ರಜೆಗಳನ್ನು ರೂಪಿಸಬೇಕಾದ ಹಾಗೂ ವಿದ್ಯಾರ್ಥಿಗಳ ನಡುವೆ ಸಮಾನತೆ ಸಾರಬೇಕಾದ ಕಾಲೇಜು ಕ್ಯಾಂಪಸ್ಗಳು ಇಂತಹ ದ್ವೇಷದ ಭಾಷಣಗಳಿಗೆ ವೇದಿಕೆಯಾಗುತ್ತಿರುವುದು ನಿಜಕ್ಕೂ ದುರಂತ. ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ತರಬೇಕಿದೆ ಎಂಬ ಕೂಗು ಇದೀಗ ಬಲವಾಗಿದೆ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್













Click it and Unblock the Notifications