ದೃಷ್ಟಿ ತೆಗೆಯುವ ಸೋಗಿನಲ್ಲಿ ಮಂಗಳಮುಖಿಯರು Just Bakeನಲ್ಲಿ ಮಾಡಿದ್ದೇನು ?
ಬೆಂಗಳೂರು, ಏ. 03: ಮಂಗಳಮುಖಿಯರು ದೃಷ್ಟಿ ತೆಗೆದರೆ ಒಳ್ಳೆಯ ವ್ಯಾಪಾರ ಆಗುತ್ತೆ ಅಂತೆ ಅಂಗಡಿ ಮಾಲೀಕರು ಅವರನ್ನು ಕರೆಸಿ ಪೂಜೆ ಮಾಡಿಸುತ್ತಾರೆ. ಮಂಗಳಮುಖಿಯರ ಕೈಯಲ್ಲಿ ದೃಷ್ಟಿ ತೆಗೆಸುವುದು ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿಬಿಟ್ಟಿದೆ. ದೃಷ್ಟಿ ತೆಗೆಯುವ ಸೋಗಿನಲ್ಲಿ ಜಸ್ಟ್ ಬೇಕ್ಗೆ ಎಂಟ್ರಿ ಕೊಟ್ಟ ಮಂಗಳಮುಖಿಯರ ಗ್ಯಾಂಗ್ ಮಾಡಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.!
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಟ್ಟಿರುವ ಉಳ್ಳಾಲದಲ್ಲಿ ಜಸ್ಟ್ ಬೇಕ್ ಮಳಿಗೆ ತೆಗೆಯಲಾಗಿದೆ. ಮಾ. 31 ರಂದು ನಾಲ್ವರು ಮಂಗಳಮುಖಿಯರು ಭಿಕ್ಷೆ ಬೇಡುತ್ತಿದ್ದರು. ಜಸ್ಟ್ ಬೇಕ್ ಮಳಿಗೆಗೆ ಬಂದಾಗ ದೃಷ್ಟಿ ತೆಗೆಯುವ ಸಂಬಂಧ ನಾಲ್ವರು ಎಂಟ್ರಿ ಕೊಟ್ಟಿದ್ದಾರೆ. ನಿಂಬೆ ಹಣ್ಣಿಂದ ಮೂರು ಕಡೆ ದೃಷ್ಟಿ ತೆಗೆದ ಮಂಗಳಮುಖಿಯರು ನಂತರ ಕ್ಯಾಶ್ ಕೌಂಟರ್ ಮೇಲೆ ಕಣ್ಣು ಹಾಕಿದ್ದಾರೆ. ಕ್ಯಾಶ್ ಕೌಂಟರ್ಗೆ ದೃಷ್ಟಿ ತೆಗೆದಂತೆ ನಟಿಸಿ ಕೌಂಟರ್ನಲ್ಲಿದ್ದ ಐದು ಸಾವಿರ ರೂ. ನಗದು ಎಗರಿಸಿದ್ದಾರೆ. ಜಸ್ಟ್ ಬೇಕ್ ಸಿಬ್ಬಂದಿ ಪಕ್ಕದಲ್ಲಿದ್ದರೂ ಸ್ವಲ್ಪವೂ ಅನುಮಾನ ಬಂದಿಲ್ಲ. ಕೇವಲ ಹತ್ತು ರೂಪಾಯಿ ಮಾತ್ರ ತೆಗೆದುಕೊಂಡು ಹೋದಂತೆ ಬಿಂಬಿಸಿ ಅಲ್ಲಿಂದ ತೆರಳಿದ್ದಾರೆ.
ವಾಸ್ತವದಲ್ಲಿ ಕ್ಯಾಶ್ ಕೌಂಟರ್ಗೆ ನಿಂಬೆ ಹಣ್ಣು ದೃಷ್ಟಿ ತೆಗೆಯುವ ಸೋಗಿನಲ್ಲಿ ಅಲ್ಲಿದ್ದ ಐದು ಸಾವಿರ ರೂ. ನಗದು ಹಣ ದೋಚಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಣ ಕಳುವು ಆಗಿರುವ ವಿಚಾರ ಗೊತ್ತಾಗುತ್ತಿದ್ದಂತೆ ಜಸ್ಟ್ ಬೇಕ್ ಮಳಿಗೆ ಮಾಲೀಕ ಲಕ್ಷ್ಮೀಪತಿಗೌಡ ಜ್ಞಾನ ಭಾರತಿ ಪೊಲೀಸ್ ಠಾಣೆಗೆ ಸಿಸಿಟಿವಿ ಸಮೇತ ದೂರು ನೀಡಿದ್ದಾರೆ. ಮಂಗಳಮುಖಿ ಸಿಸಿಟಿವಿ ಇರುವ ವಿಚಾರ ತಿಳಿದು ಮುಖಕ್ಕೆ ಸೆರಗು ಹಾಕಿಕೊಂಡು ಕ್ಯಾಶ್ ಕೌಂಟರ್ಗೆ ಕೈ ಹಾಕಿ ಹಣ ಪಡೆದು ಅಲ್ಲಿಂದ ಕಾಲ್ಕಿತ್ತಿರುವ ದೃಶ್ಯ ಸೆರೆಯಾಗಿದೆ. ಸಾಮಾನ್ಯವಾಗಿ ಮಂಗಳ ಮುಖಿಯರ ಕೈಯಲ್ಲಿ ದೃಷ್ಟಿ ತೆಗೆಸುವರು ಈ ವಿಡಿಯೋ ನೋಡಿ ಶಾಕ್ ಆಗಿದ್ದಾರೆ.

Recommended Video

-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications