ಶ್ರೀರಾಮಾನುಜರು ಶರಣಾಗತಿಯ ಪ್ರತೀಕ : ತಿರುನಾರಾಯಣ ಶ್ರೀ
ಬೆಂಗಳೂರು, ಜನವರಿ 30: ಶ್ರೀ ರಾಮಾನುಜಾಚಾರ್ಯರ ಜನ್ಮ ಸಹಸ್ರಮಾನೋತ್ಸವ ಕುರಿತು ಬೆಂಗಳೂರಿನ ಯಲಚೇನಹಳ್ಳಿಯಲ್ಲಿ ವಿಶ್ವ ಮಂಗಳ ಮಹೋತ್ಸವವನ್ನು ಮೇಲುಕೋಟೆ ಯದುಗಿರಿ ಯತಿರಾಜ ಮಠದ ಯತಿರಾಜ ತಿರುನಾರಾಯಣ ಜೀಯರ್ ನೆರವೇರಿಸಿದರು.
ಕನಕಪುರ ರಸ್ತೆಯಲ್ಲಿರುವ ಜ್ಯೋತಿ ವಿದ್ಯಾಕೇಂದ್ರದಲ್ಲಿ ಶ್ರೀರಾಮಾನುಜಾಚಾರ್ಯರಿಗೆ ವಿಶ್ವಮಂಗಳ ಮಹೋತ್ಸವವನ್ನು ಶ್ರೀ ವೈಷ್ಣವರೆಲ್ಲರೂ ಒಡಗೂಡಿ ಆಚಾರ್ಯರ ಸಹಸ್ರಮಾನ ವರ್ಷದ 1300ನೇ ಸ್ಪರ್ಶ ಪಾದುಕಾ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ವೈಷ್ಣವ ಸಂಪ್ರದಾಯದಂತೆ ಪೂಜಾ ಕಾರ್ಯಗಳು ಜರುಗಿದವು.[ರಾಮಾನುಜರ ಸ್ಮರಣೆಗಾಗಿ ವಿಶ್ಮಮಂಗಳ ಸಹಸ್ರಮಾನೋತ್ಸವ]

ತಿರುನಾರಾಯಣ ಜೀಯರ್ ಸ್ವಾಮಿಗಳು ಶಂಕರಾಚಾರ್ಯರು, ಮಧ್ವಚಾರ್ಯರ ಕಾಲಮಾನವನ್ನು ನೆನೆಯುತ್ತಾ ರಾಮಾನುಜಾಚಾರ್ಯರ ಜ್ಞಾನ, ಭಕ್ತಿ, ವೈರಾಗ್ಯ ಜೊತೆಗೆ ಶರಣಾಗತಿ, ಪ್ರಪತ್ತಿಯನ್ನು ಉಪದೇಶಿದರು. ಅಲ್ಲದೆ ಆಚಾರ್ಯರು ಕರ್ನಾಟಕದಾದ್ಯಂತ ರಾಜ ಬಿಟ್ಟಿದೇವ(ವಿಷ್ಣುವರ್ಧನ)ನ ಸಹಾಯದಿಂದ 18 ಪಂಗಡಗಳಾಗಿದ್ದ ಎಲ್ಲ ಸಮುದಾಯದ ಒಗ್ಗೂಡಿಸಿದ್ದರ ಬಗ್ಗೆ ತಿಳಿಹೇಳಿದರು.

ರಾಜನ ಸಹಾಯದಿಂದ ಎಲ್ಲ ಜಾತಿಯವರಿಗೂ ಸಲ್ಲುವ ಕೆರೆ ನಿರ್ಮಾಣ, ಆಲಯ ಪ್ರವೇಶ ಸುಧಾರಣೆಗಳ ಬಗ್ಗೆ ವಿವರಿಸಿದರು.
ಇದೇ ಮಾದರಿಯಲ್ಲಿ ಫೆಬ್ರವರಿ 18 ರಂದು ರಾಮಾನುಜಾಚಾರ್ಯರ ಪಾದುಕಾ ಪೂಜೆಯನ್ನು ಶೇಷಾದ್ರಿಪುರಂನಲ್ಲಿ ನೆರವೇರಿಸಲಾಗುವುದು ಎಂದು ಶ್ರೀಗಳು ಘೋಷಿಸಿದರು.

ಇನ್ನು ಸಹಸ್ರಮಾನ ಸಂದರ್ಭದಲ್ಲಿ ಶ್ರೀರಾಮಾನುಜಾಚಾರ್ಯರ ಜೀವನ ಚರಿತ್ರೆಯನ್ನು ಒಳಗೊಂಡ ದೃಶ್ಯ ಮುದ್ರಿಕೆ ಮತ್ತು ದಿನದರ್ಶಿಕೆಯನ್ನು ಲೋಕಾರ್ಪಣೆಗೊಳಿಸಲಾಯಿತು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications