ಶಶಿಕಲಾ ಆಪ್ತರ ದರ್ಶನಕ್ಕಾಗಿ ನಿಯಮಗಳಿಗೆ ಎಳ್ಳು ನೀರು ಬಿಟ್ಟ ಸರ್ಕಾರ?
ಶಶಿಕಲಾ ಅವರಿಗೆ ಜೈಲು ಶಿಕ್ಷೆ ವಿಧಿಸುವಾಗಲೇ ಸುಪ್ರೀಂ ಕೋರ್ಟ್, ಶಶಿಕಲಾ ಅವರನ್ನು ಸಾಮಾನ್ಯ ಕೈದಿಯಂತೆ ಪರಿಗಣಿಸಬೇಕೆಂದು ತಾಕೀತು ಮಾಡಿದೆ. ಆದರೆ, ಶಶಿಕಲಾ ಅವರನ್ನು ವಿಶೇಷ ಕೈದಿಯಾಗಿಯೇ ಪರಿಗಣಿಸಲಾಗಿದೆ ಎನ್ನಲಾಗಿದೆ.
ಬೆಂಗಳೂರು, ಏಪ್ರಿಲ್ 6: ತಮಿಳುನಾಡಿನ ಎಐಎಡಿಎಂಕೆ ಪಕ್ಷದ ನಾಯಕಿ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದವರ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಿಡಿ ಪಡೆಯಲಾಗಿರುವ ಮಾಹಿತಿಯಲ್ಲಿ ನಿಯಮ ಮೀರಿ ಶಶಿಕಲಾ ಅವರ ಭೇಟಿಗೆ ಅನುಮತಿ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಡೆಕ್ಕನ್ ಕ್ರೋನಿಕಲ್ ವರದಿ ಮಾಡಿದೆ.
ಶಶಿಕಲಾ ಅವರಿಗೆ ಜೈಲು ಶಿಕ್ಷೆ ವಿಧಿಸುವಾಗಲೇ ಸುಪ್ರೀಂ ಕೋರ್ಟ್, ಶಶಿಕಲಾ ಅವರನ್ನು ಸಾಮಾನ್ಯ ಕೈದಿಯಂತೆ ಪರಿಗಣಿಸಬೇಕೆಂದು ತಾಕೀತು ಮಾಡಿದೆ. ಆದರೆ, ಶಶಿಕಲಾ ಅವರನ್ನು ವಿಶೇಷ ಕೈದಿಯಾಗಿಯೇ ಪರಿಗಣಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಜೈಲಿನ ನಿಯಮಗಳಂತೆ, ಪ್ರತಿ ದಿನ ಸಂಜೆ 5ರ ನಂತರ ಯಾವುದೇ ವ್ಯಕ್ತಿಗಳ ಭೇಟಿಗೆ ಅವಕಾಶ ಇರುವುದಿಲ್ಲ. ಆದರೆ, ಶಶಿಕಲಾ ಅವರ ವಿಚಾರದಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ.
ಶಶಿಕಲಾ ಅವರು ಬಂಧಿಯಾದ ನಂತರ ಈವರೆಗೆ ಅವರನ್ನು 19 ಜನರು ಭೇಟಿಯಾಗಿದ್ದು, ಇವರಲ್ಲಿ ಬಹುತೇಕರು ಸಂಜೆ 6 ಗಂಟೆಯ ನಂತರವೇ ಭೇಟಿಯಾಗಿರುವುದು ಇದಕ್ಕೆ ಸಾಕ್ಷಿ ಎಂದು ಹೇಳಲಾಗಿದೆ.
ಮೊದಮೊದಲು ಸುಪ್ರೀಂ ಕೋರ್ಟ್ ಸೂಚನೆಯನ್ನು ಚಾಚೂ ತಪ್ಪದೇ ಪಾಲಿಸಲಾಗಿದೆ. ಸಾಮಾನ್ಯ ಕೈದಿಯಂತೆಯೇ ನೋಡಿಕೊಳ್ಳಬೇಕು ಎಂದು ಹೇಳಿದ್ದಕ್ಕೆ ಶಶಿಕಲಾ ಅವರಿಗೆ ವಿಶೇಷ ಜೈಲು ಕೊಠಡಿ, ಅವರ ಆಯ್ಕೆಯ ಹಾಸಿಗೆ, ದಿಂಬು, ಟೇಬಲ್ ಫ್ಯಾನ್, ಎಸಿ ಮುಂತಾದ ಯಾವುದೇ ಸೌಲಭ್ಯಗಳನ್ನು ನೀಡಿರಲಿಲ್ಲ.
ಆದರೆ, ಕಾಲ ಕ್ರಮೇಣ ಅವರ ಆಯ್ಕೆಯಂತೆ ಎಲ್ಲವೂ ಬದಲಾಗಿರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications