ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ ಪ್ರವೇಶ ಶುಲ್ಕ ಏರಿಕೆ
ಬೆಂಗಳೂರು, ಜು. 16 : ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಪ್ರವೇಶ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. 30 ರೂ.ಇದ್ದ ಪ್ರವೇಶ ಶುಲ್ಕವನ್ನು 40 ರೂ.ಗಳಿಗೆ ಏರಿಕೆ ಮಾಡಲಾಗಿದೆ.
2007ರಲ್ಲಿ ವಸ್ತು ಸಂಗ್ರಹಾಲಯದ ಪ್ರವೇಶ ಶುಲ್ಕ 15 ರೂ. ಇತ್ತು. ನಂತರ ಎರಡು ಬಾರಿ ಶುಲ್ಕವನ್ನು ಪರಿಷ್ಕರಣೆ ಮಾಡಿದ ನಂತರ 30 ರೂ. ಆಗಿತ್ತು. ಸದ್ಯ ಅದನ್ನು ಜುಲೈ 1ರಿಂದ ಜಾರಿಗೆ ಬರುವಂತೆ 40 ರೂ.ಗಳಿಗೆ ಹೆಚ್ಚಿಸಲಾಗಿದೆ.

ಸ್ವಚ್ಛತೆ, ವಿದ್ಯುತ್, ನೀರು, ಹವಾನಿಯಂತ್ರಣ ವ್ಯವಸ್ಥೆ, ಭದ್ರತೆ ಮುಂತಾದವುಗಳ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಆದರೆ, ಕಾರ್ಪೊರೇಷನ್ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳಿಂದ ವಸ್ತು ಸಂಗ್ರಹಾಲಯ ವೀಕ್ಷಿಸಲು ಆಗಮಿಸುವ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಲಾಗುತ್ತಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಒಟ್ಟು ಎಂಟು ಪ್ರದರ್ಶನ ಗ್ಯಾಲರಿಗಳನ್ನು ಹೊಂದಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಯಾಂತ್ರಿಕ ಕೈಶಾಲೆ ಗ್ಯಾಲರಿ, ಡೈನೊಸಾರ್ ಗ್ಯಾಲರಿ, ಜೈವಿಕ ತಂತ್ರಜ್ಞಾನ ಗ್ಯಾಲರಿ, ಸ್ಪೇಸ್ ಗ್ಯಾಲರಿ, ಬಿಇಎಲ್ ಎಲೆಕ್ಟ್ರಾನಿಕ್ ಗ್ಯಾಲರಿ ಸೇರಿದಂತೆ ಹಲವಾರು ಆಕರ್ಷಣೆಗಳಿವೆ. [ರಜೆ ದಿನಗಳಲ್ಲಿ ಮೈಸೂರು ಮೃಗಾಲಯ ಸ್ವಲ್ಪ ದುಬಾರಿ]
ಕಸ್ತೂರಬಾ ರಸ್ತೆಯಲ್ಲಿರುವ ಈ ವಸ್ತು ಸಂಗ್ರಹಾಲಯಕ್ಕೆ ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳಂದು ಮಾತ್ರ ರಜೆ ಇರುತ್ತದೆ. ಉಳಿದಂತೆ ವಾರದ ಎಲ್ಲಾ ದಿನಗಳಲ್ಲೂ ತೆರೆದಿರುತ್ತದೆ. [ಮ್ಯೂಸಿಯಂ ವೆಬ್ ಸೈಟ್]
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications