ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ ಪ್ರವೇಶ ಶುಲ್ಕ ಏರಿಕೆ
ಬೆಂಗಳೂರು, ಜು. 16 : ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಪ್ರವೇಶ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. 30 ರೂ.ಇದ್ದ ಪ್ರವೇಶ ಶುಲ್ಕವನ್ನು 40 ರೂ.ಗಳಿಗೆ ಏರಿಕೆ ಮಾಡಲಾಗಿದೆ.
2007ರಲ್ಲಿ ವಸ್ತು ಸಂಗ್ರಹಾಲಯದ ಪ್ರವೇಶ ಶುಲ್ಕ 15 ರೂ. ಇತ್ತು. ನಂತರ ಎರಡು ಬಾರಿ ಶುಲ್ಕವನ್ನು ಪರಿಷ್ಕರಣೆ ಮಾಡಿದ ನಂತರ 30 ರೂ. ಆಗಿತ್ತು. ಸದ್ಯ ಅದನ್ನು ಜುಲೈ 1ರಿಂದ ಜಾರಿಗೆ ಬರುವಂತೆ 40 ರೂ.ಗಳಿಗೆ ಹೆಚ್ಚಿಸಲಾಗಿದೆ.

ಸ್ವಚ್ಛತೆ, ವಿದ್ಯುತ್, ನೀರು, ಹವಾನಿಯಂತ್ರಣ ವ್ಯವಸ್ಥೆ, ಭದ್ರತೆ ಮುಂತಾದವುಗಳ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಆದರೆ, ಕಾರ್ಪೊರೇಷನ್ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳಿಂದ ವಸ್ತು ಸಂಗ್ರಹಾಲಯ ವೀಕ್ಷಿಸಲು ಆಗಮಿಸುವ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಲಾಗುತ್ತಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಒಟ್ಟು ಎಂಟು ಪ್ರದರ್ಶನ ಗ್ಯಾಲರಿಗಳನ್ನು ಹೊಂದಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಯಾಂತ್ರಿಕ ಕೈಶಾಲೆ ಗ್ಯಾಲರಿ, ಡೈನೊಸಾರ್ ಗ್ಯಾಲರಿ, ಜೈವಿಕ ತಂತ್ರಜ್ಞಾನ ಗ್ಯಾಲರಿ, ಸ್ಪೇಸ್ ಗ್ಯಾಲರಿ, ಬಿಇಎಲ್ ಎಲೆಕ್ಟ್ರಾನಿಕ್ ಗ್ಯಾಲರಿ ಸೇರಿದಂತೆ ಹಲವಾರು ಆಕರ್ಷಣೆಗಳಿವೆ. [ರಜೆ ದಿನಗಳಲ್ಲಿ ಮೈಸೂರು ಮೃಗಾಲಯ ಸ್ವಲ್ಪ ದುಬಾರಿ]
ಕಸ್ತೂರಬಾ ರಸ್ತೆಯಲ್ಲಿರುವ ಈ ವಸ್ತು ಸಂಗ್ರಹಾಲಯಕ್ಕೆ ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳಂದು ಮಾತ್ರ ರಜೆ ಇರುತ್ತದೆ. ಉಳಿದಂತೆ ವಾರದ ಎಲ್ಲಾ ದಿನಗಳಲ್ಲೂ ತೆರೆದಿರುತ್ತದೆ. [ಮ್ಯೂಸಿಯಂ ವೆಬ್ ಸೈಟ್]
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications