Bomb Threat: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ!
ಬೆಂಗಳೂರು ಜನವರಿ 6: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, 3 ಗಂಟೆಗಳ ಕಾಲ ಅದನ್ನು ಬಂದ್ ಮಾಡಲಾಗಿತ್ತು. ಸಂಪೂರ್ಣ ಪರಿಶೀಲನೆಯ ನಂತರ ಅದನ್ನು ಹುಸಿ ಇಮೇಲ್ ಎಂದು ಘೋಷಿಸಲಾಗಿದೆ.
ಮುಂಜಾನೆ 4.40ರ ಸುಮಾರಿಗೆ ಸರ್ಕಾರಿ ಮ್ಯೂಸಿಯಂನ ಅಧಿಕೃತ ಐಡಿಗೆ ಇಮೇಲ್ ಕಳುಹಿಸಲಾಗಿತ್ತು. ವಸ್ತುಸಂಗ್ರಹಾಲಯದೊಳಗೆ ಬಾಂಬ್ ಇಡಲಾಗಿದೆ. ಅದರ ಒಳಗೆ ಇರುವ ಯಾರನ್ನದರೂ ಕೊಲ್ಲಬಹುದು ಎಂದು ಮೇಲ್ನಲ್ಲಿ ತಿಳಿಸಲಾಗಿತ್ತು. ಸಿಬ್ಬಂದಿಯೊಬ್ಬರು ಬೆಳಗ್ಗೆ 10 ಗಂಟೆಗೆ ಇಮೇಲ್ ಪರಿಶೀಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕ್ವಾಡ್ಗಳು ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಿ ಈ ಇಮೇಲ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿವೆ. ಮ್ಯೂಸಿಯಂನಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಹೇಳಿವೆ. ಈ ಸಮಯದಲ್ಲಿ ಸಂದರ್ಶಕರನ್ನು ವಸ್ತುಸಂಗ್ರಹಾಲಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು.
ಮಧ್ಯಾಹ್ನ 1.30ರ ನಂತರ ಪ್ರವೇಶಿಸಲು ಅನುಮತಿಸಲಾಗಿದೆ ಎಂದು ತನಿಖೆಯ ನಿಕಟ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಮೇಲ್ನ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಜೊತೆಗೆ ಜವಾಹರಲಾಲ್ ನೆಹರು ತಾರಾಲಯ ಮತ್ತು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ಗೂ ಶುಕ್ರವಾರ ಇಮೇಲ್ನಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ ಎಂದು ಇಮೇಲ್ ಬಂದಿದೆ ಎಂದು ನಗರ ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಪರಿಶೀಲನೆ ನಡೆಸಿವೆ.
ಡಿಸೆಂಬರ್ನಲ್ಲಿ ನಡೆದ ಘಟನೆಗಳು
ಡಿಸೆಂಬರ್ ಆರಂಭದಲ್ಲಿ ಬೆಂಗಳೂರು ಮತ್ತು ಹೊರವಲಯದಲ್ಲಿರುವ 70 ಶಾಲೆಗಳಿಗೆ ಒಂದೇ ರೀತಿಯ ಪಠ್ಯದೊಂದಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ಇವು ನೆಪವಾಗಿ ಪರಿಣಮಿಸಿದವು. ಎರಡು ವಾರಗಳ ನಂತರ ಕೋಲಾರದ ಮುಳಬಾಗಿಲಿನ ವ್ಯಕ್ತಿಯೊಬ್ಬರು ದೊಮ್ಮಲೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ದೂರವಾಣಿ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದರು. ಇದು ಕೆಲ ಹೊತ್ತು ಆತಂಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತ್ತು.












Click it and Unblock the Notifications