ಸನ್ನಡತೆ ಆಧಾರದ ಮೇಲೆ ಬಿಡುಗಡೆ ಬಯಸಿದ ಶಶಿಕಲಾ
ಬೆಂಗಳೂರು, ಡಿ.2: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಅವರು ಸನ್ನಡತೆ ಆಧಾರದ ಮೇಲೆ ಅವಧಿಗೂ ಮುನ್ನ ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾಗೆ ನಾಲ್ಕು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದ್ದು, 10 ಕೋಟಿ ರೂ ದಂಡವನ್ನು ಆಕೆ ನ್ಯಾಯಾಲಯಕ್ಕೆ ಕಟ್ಟಬೇಕಿತ್ತು. ಇತ್ತೀಚೆಗೆ ದಂಡವನ್ನು ಡಿಮ್ಯಾಂಡ್ ಡ್ರಾಫ್ಟ್ ರೂಪದಲ್ಲಿ ಕೋರ್ಟಿಗೆ ಪಾವತಿಸಿದ್ದಾರೆ.
ಶಶಿಕಲಾ ದತ್ತು ಪುತ್ರ ವಿಎನ್ ಸುಧಾಕರನ್, ಜೆ ಇಳವರಸಿ ಹಾಗೂ ಶಿಶಿಕಲಾ ಅವರಿಗೆ 2017ರ ಫೆಬ್ರವರಿ 15ರಂದು ಜೈಲುಶಿಕ್ಷೆ ಪ್ರಕಟವಾಗಿತ್ತು. ದಂಡ ಪಾವತಿಸಿರುವುದರಿಂದ ನಿಗದಿಯಂತೆ ಜನವರಿ 27, 2021ರಂದು ಬಿಡುಗಡೆಯಾಗಬಹುದು. ಆದರೆ, ಇದಕ್ಕೂ ಮುನ್ನವೇ ಜೈಲಿನಿಂದ ಶಶಿಕಲಾ ಬಿಡುಗಡೆ ಬಯಸಿದ್ದಾರೆ.
ಶಶಿಕಲಾ ಹಾಗೂ ಅವರ ಕುಟುಂಬಸ್ಥರನ್ನು ಪಕ್ಷ ಹಾಗೂ ಸರ್ಕಾರದಿಂದ ದೂರ ಇರಿಸಲು ಎಂದೋ ನಿರ್ಧರಿಸಿ ಆಗಿದೆ. ಶಶಿಕಲಾ ಅವರು ಬಿಡುಗಡೆಯಾದ ಮಾತ್ರಕ್ಕೆ ಅವರ ಬಗ್ಗೆ ಎಐಎಡಿಎಂಕೆ ನಿಲುವು ಬದಲಾಗುವುದಿಲ್ಲ ಎಂದು ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು

ಅವಧಿಗೂ ಮುನ್ನ ಬಿಡುಗಡೆ ಹೇಗೆ?
ಈ ಕುರಿತಂತೆ ಜೈಲಿನ ಅಧಿಕಾರಿಗಳಿಗೆ ಶಶಿಕಲಾ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಪತ್ರವನ್ನು ಉನ್ನತಾಧಿಕಾರಿಗಳ ಅವಗಹನೆಗೆ ಕಳಿಸಲಾಗಿದ್ದು, ಈ ಬಗ್ಗೆ ನಿರ್ಧಾರ ಇನ್ನೂ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.
ಕರ್ನಾಟಕದ ಕಾರಾಗೃಹ ನಿಯಮಾವಳಿಗಳ ಪ್ರಕಾರ, ಪ್ರತಿ ತಿಂಗಳು ಸನ್ನಡತೆ ಆಧಾರ ಮೇಲೆ ಮೂರು ದಿನಗಳ ಅವಧಿ ಕಡಿತ ಸಾಧ್ಯತೆಯಿದೆ. ಶಶಿಕಲಾ ಅವರು ಸದ್ಯ 43 ತಿಂಗಳ ಜೈಲುವಾಸ ಪೂರೈಸಿದ್ದು, 135 ದಿನಗಳ ಅವಧಿ ಕಡಿತಕ್ಕೆ ಅರ್ಹರಾಗಿದ್ದಾರೆ ಎಂದು ಶಶಿಕಲಾ ಪರ ವಕೀಲ ಎನ್ ರಾಜ ಸೆಂತೂರ್ ಪಾಂಡಿಯನ್ ಹೇಳಿದ್ದಾರೆ.

ಪೆರೋಲ್ ದಿನಗಳು ಕೂಡಾ ಗಣನೆಗೆ ಬರಲಿದೆ
ಶಶಿಕಲಾ ಅವರು 1997 ಹಾಗೂ 2014ರಲ್ಲಿ 35 ದಿನಗಳು, 2017ರಲ್ಲಿ 17 ದಿನಗಳ ಪೆರೋಲ್ ಪಡೆದುಕೊಂಡಿದ್ದರು. ಫೆಬ್ರವರಿ 15, 2017ರಲ್ಲಿ ಬಂದ ಕೋರ್ಟ್ ಆದೇಶದಂತೆ ಶಶಿಕಲಾ ಹಾಗೂ ಇತರರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದರು. ಶಶಿಕಲಾ ಅವರು ತಮ್ಮ ಪತಿ ಎಂ.ನಟರಾಜನ್ ನಿಧನರಾದಾಗ ಪೆರೋಲ್ ಮೇಲೆ 15 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು. ತಂಜಾವೂರಿನಲ್ಲಿ ಪತಿಯ ಅಂತ್ಯಸಂಸ್ಕಾರ ವಿಧಿ ಮುಗಿಸಿಕೊಂಡು ಜೈಲಿಗೆ ಮರಳಿದ್ದರು.

10 ಕೋಟಿ ರೂ. ದಂಡ ಪಾವತಿಸಿರುವ ಶಶಿಕಲಾ
ಜಯಲಲಿತಾಗೆ 100 ಕೋಟಿ ರೂ., ಶಶಿಕಲಾ, ಇಳವರಸಿ, ಸುಧಾಕರನ್ಗೆ ತಲಾ 10 ಕೋಟಿ ರೂ. ದಂಡ ವಿಧಿಸಿದ್ದರು. ಒಂದೊಮ್ಮೆ ದಂಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಇನ್ನೂ ಒಂದು ವರ್ಷಗಳ ಕಾಲ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿತ್ತು. ಅದರಂತೆ, ಬುಧವಾರ(ನ.18) 34ನೇ ಸಿಟಿ ಸಿವಿಎಲ್ ನ್ಯಾಯಾಲಯಕ್ಕೆ 10,00,10,000 ರುಗಳನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಲಾಗಿದೆ, ಜೊತೆಗೆ ಆದಾಯ ತೆರಿಗೆ ಇಲಾಖೆಯಿಂದ ನೋ ಆಬ್ಜೆಕ್ಷನ್ ಸರ್ಟಿಫಿಕೇಟ್ ಸಲ್ಲಿಸಲಾಗಿದೆ ಎಂದು ಶಶಿಕಲಾ ಪರ ವಕೀಲ ಎನ್ ರಾಜ ಸೆಂತೂರ್ ಪಾಂಡಿಯನ್ ತಿಳಿಸಿದ್ದಾರೆ.
Recommended Video

ದಂಡ ವಿಧಿಸಿದ ಬಳಿಕ ಬಿಡುಗಡೆಗೆ ಅರ್ಹ
2014ರ ಸೆಪ್ಟೆಂಬರ್ ನಲ್ಲಿ ಸ್ಪೆಷಲ್ ಟ್ರಯಲ್ ಕೋರ್ಟ್ ನ್ಯಾ. ಜಾನ್ ಮೈಕೇಲ್ ಕನ್ಹಾ ಐಪಿಸಿ ಸೆಕ್ಷನ್ 109ರಡಿ ಜೆ ಜಯಲಲಿತಾ, ಶಶಿಕಲಾ, ಸುಧಾಕರನ್, ಇಳವರಸಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು. ಶಶಿಕಲಾ ದತ್ತು ಪುತ್ರ ವಿಎನ್ ಸುಧಾಕರನ್, ಜೆ ಇಳವರಸಿ ಹಾಗೂ ಶಿಶಿಕಲಾ ಅವರಿಗೆ 2017ರ ಫೆಬ್ರವರಿ 15ರಂದು ಜೈಲುಶಿಕ್ಷೆ ಪ್ರಕಟವಾಗಿತ್ತು.
ಈಗ 10 ಕೋಟಿ ರು ದಂಡ ಪಾವತಿಸಿದ ಬಗ್ಗೆ ನ್ಯಾಯಾಲಯದಿಂದ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಿಗೆ ಪತ್ರ ತಲುಪಿದ ಬಳಿಕ ಬಿಡುಗಡೆ ಕುರಿತ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಧಿಕೃತವಾಗಿ ಮಾಹಿತಿ ಬಂದಿದೆ. ಶಶಿಕಲಾ, ವಿಎನ್ ಸುಧಾಕರನ್, ಜೆ ಇಳವರಸಿ ಅವರಿಗೂ 10ಕೋಟಿ ಪ್ಲಸ್ 10 ಸಾವಿರ ರು ದಂಡ ವಿಧಿಸಲಾಗಿದ್ದು, ಅವರು ಕೂಡಾ ದಂಡ ವಿಧಿಸಿದ ಬಳಿಕ ಬಿಡುಗಡೆಗೆ ಅರ್ಹರಾಗುತ್ತದೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications