ಪರಪ್ಪನ ಅಗ್ರಹಾರದ ಅತಿಥಿ ಶಶಿಕಲಾ ಆರೋಗ್ಯದಲ್ಲಿ ಏರುಪೇರು
Recommended Video
ಬೆಂಗಳೂರು, ಆಗಸ್ಟ್ 31: ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಶಶಿಕಲಾ ಅವರ ಆರೋಗ್ಯದಲ್ಲಿ ಏರು-ಪೇರಾಗಿದೆ.
ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಹೆಚ್ಚಾಗಿ ಅವರು ಅಸ್ತವ್ಯಸ್ಥರಾಗಿದ್ದಾರೆ. ಅವರಿಗೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ.
ಶಶಿಕಲಾ ಬಗ್ಗೆ ಟ್ವಿಟರ್ ನಲ್ಲಿ ಹರಿದಾಡಿದ ಜೋಕುಗಳು
ಪ್ರಸ್ತುತ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಇನ್ನೂ ಹದಗೆಟ್ಟರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗವುದು ಎಂದು ಜೈಲಧಿಕಾರಿಗಳು ತಿಳಿಸಿದ್ದಾರೆ. ಈ ಮುಂಚೆಯೂ ಅವರ ಆರೋಗ್ಯದಲ್ಲಿ ಆರೋಗ್ಯದಲ್ಲಿ ಏರು-ಪೇರಾಗಿತ್ತು.
ದಿವಂಗತ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅತೀವ ಆಪ್ತರಾಗಿದ್ದ ವಿಕೆ ಶಶಿಕಲಾ ಅವರು ಅಕ್ರಮ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ತಪ್ಪಿಸ್ಥರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಎಐಎಡಿಎಂಕೆ ನಾಯಕಿ ಶಶಿಕಲಾಗೆ ನಿರಾಳ ತಂದ ಸುಪ್ರೀಂ ಕೋರ್ಟ್ ಆದೇಶ
ಶಶಿಕಲಾ ಅವರಿಗೆ ಜೈಲಿನಲ್ಲಿ ರಾಜೋಪಚಾರ ನೀಡಲಾಗುತ್ತಿದೆ ಎಂಬುದು ಸಹ ಈ ಹಿಂದೆ ಬಹಿರಂಗವಾಗಿತ್ತು. ಐಪಿಎಸ್ ಅಧಿಕಾರಿ ರೂಪಾ ಅವರು ಶಶಿಕಲಾ ಅವರಿಗೆ ರಾಜೋಪಚಾರ ನೀಡುತ್ತಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಭಾರಿ ಸುದ್ದಿಯಾಗಿತ್ತು.